ಶ್ರೀನಿವಾಸ ಸಾಗರ ಜಲಾಶಯ ಬಳಿ ನೀರುಪಾಲಾಗಿದ್ದ ಯುವಕರ ಮೃತದೇಹಗಳು ಪತ್ತೆ
Team Udayavani, Sep 11, 2022, 5:55 PM IST
ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ಬಳಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಹಾಗೂ ಯುವಕನ ಮೃತದೇಹಗಳು ಪತ್ತೆಯಾಗಿದೆ.
ಇದನ್ನೂ ಓದಿ:ಬನಹಟ್ಟಿ ಕಾಡಸಿದ್ಧೇಶ್ವರ ರಥಕ್ಕೆ 153 ವರ್ಷದ ಇತಿಹಾಸ…!
ಶನಿವಾರದಂದು ಶ್ರೀನಿವಾಸ ಸಾಗರ ಜಲಾಶಯವನ್ನು ವೀಕ್ಷಣೆ ಮಾಡಲು ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಈಜಾಡಲು ಹೋಗಿ ಮುಳುಗಿದ್ದಾರೆ. ಆತನನು ರಕ್ಷಣೆ ಮಾಡಲು ಹೋಗಿದ್ದ ಗೌರಿಬಿದನೂರು ತಾಲೂಕಿನ ಯುವಕ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಸಂಜೆ 7 ಗಂಟೆವರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಕಾರ್ಯಚರಣೆ ನಡೆಸಿದ್ದರು ಆದರೆ ಮೃತದೇಹಳು ಪತ್ತೆಯಾಗಿರಲಿಲ್ಲ.
ಇಂದು ಬೆಳಿಗ್ಗೆ ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳದ ತಂಡವು ಜಂಟಿ ಕಾರ್ಯಾಚರಣೆ ನಡೆಸಿದ ವೇಳೆ ಮೃತದೇಹಗಳು ಪತ್ತೆಆಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರದೀಪ್ ಪೂಜಾರಿ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೆ ಯುವಕನೋರ್ವ ಇದೇ ಶ್ರೀನಿವಾಸ ಸಾಗರ ಕೆರೆ ಕೋಡಿಹರಿಯುತಿದ್ದ ಕಟ್ಟೆ ಮೇಲೆ ಕೋಡಿಹರಿದ ನೀರಿನ ವಿರುದ್ದ ದಿಕ್ಕಿಗೆ ಕೋತಿರಾಮನಂತೆ ಸಾಹಸ ಮಾಡಲುಹೋಗಿ ಪ್ರಪಾತಕ್ಕೆ ಬಿದ್ದು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದ. ಅದಕ್ಕೂ ಮುನ್ನ ವರ್ಷದ ಹಿಂದೆಯಷ್ಟೆ ಶ್ರೀನಿವಾಸಸಾಗರ ಕೆರೆಯಲ್ಲಿ ಈಜಾಡಲೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಹೀಗೆ ಶ್ರೀನಿವಾಸ ಸಾಗರದ ಕೆರೆಯಂಗಳ ಸಾವುಗಳ ಸೂತಕದ ಜಾಗ ಎಂಬಂತಾಗಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಬಹುತೇಕ ಕಡೆಗಳಲ್ಲಿ ಇದೀಗ ಸಮೃದ್ದಿ ಮಳೆಯಿಂದಾಗಿ ಕೆರೆ ಕುಂಟೆಗಳು ತುಂಬಿ ಕೋಡಿ ಹರಿಯುತಿದ್ದು, ಅವುಗಳ ಪೈಕಿ ಕೇತೇನಹಳ್ಳಿಯ ಜರಮೊಡಗು, ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮೊಡಗು ಶ್ರೀನಿವಾಸಸಾಗರ, ನಗರಕ್ಕೆ ಹೊಂದಿಕೊಂಡ ಕಂದವಾರ ಕೆರೆ ಹೀಗೆ ನಾನಾ ಕೆರೆ-ಕುಂಟೆಗಳು ತುಂಬಿ ಕೊಡಿ ಹರಿಯುತಿದ್ದು ನೀರಿನ ರಭಸಗಳನ್ನು ನೋಡಲು ಜನ ತಂಡೋಪತಂಡವಾಗಿ ಬರತೊಡಗಿದ್ದು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಥವಾ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ನಾಗರಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ