ಜಿಲ್ಲಾದ್ಯಂತ ಯೋಗದ ಮೂಲಕ ದೇಹ ದಂಡನೆ


Team Udayavani, Jun 22, 2019, 3:00 AM IST

jil-chikka

ಜಿಲ್ಲಾದ್ಯಂತ ಎಲ್ಲಿ ನೋಡಿದರೂ ಶುಕ್ರವಾರ ಯೋಗದ್ದೇ ಸದ್ದು. 5 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ಪ್ರದರ್ಶನದಲ್ಲಿ ಪುಟಾಣಿ ಮಕ್ಕಳಿಂದ ಹಿಡಿದು ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ವಯೋ ವೃದ್ಧರ ಹಾದಿಯಾಗಿ ಯೋಗಾಭ್ಯಾಸದಲ್ಲಿ ಮಿಂದೆದ್ದರು.

ಯೋಗ ಪಟುಗಳು ವಿವಿಧ ಭಂಗಿಗಳಲ್ಲಿ ಪ್ರದರ್ಶಿಸಿದ ಯೋಗಾಸನಗಳು ಗಮನ ಸೆಳೆಯಿತು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತಿತರ ಸಂಘ, ಸಂಸ್ಥೆಗಳ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಸರ್ಕಾರಿ ಅಧಿಕಾರಿಗಳು ಯೋಗ ಪಟುಗಳು ಪಾಲ್ಗೊಂಡಿದ್ದರು. ಈ ಬಾರಿಯೂ ಯೋಗ ದಿನಕ್ಕೆ ಚುನಾಯಿತ ಜನಪ್ರತಿನಿಧಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಚಿಕ್ಕಬಳ್ಳಾಪುರ: ಸಾಮಾನ್ಯರಂತೆ ಸಾರ್ವಜನಿಕರ ಸಾಲಿನಲ್ಲಿ ಕೂತು ಡೀಸಿ, ಸಿಇಒ ಯೋಗಾಭ್ಯಾಸ. ಕಲ್ಯಾಣಿಗಳಿಗೆ ಕಳೆ ತಂದುಕೊಟ್ಟ ವಿಶ್ವ ಯೋಗದ ದಿನ. ಸಾಮೂಹಿಕ ಯೋಗ ಪ್ರದರ್ಶನಕ್ಕೆ ಜಿಲ್ಲಾದ್ಯಂತ ನಿರೀಕ್ಷೆಗೂ ಮೀರಿ ಜನಸ್ತೋಮ. ಯೋಗಭ್ಯಾಸಕ್ಕಾಗಿ ಆಟದ ಮೈದಾನಗಳಲ್ಲಿ ಬೆಳ್ಳಂ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಹಿರಿಯ ನಾಗರಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳ ದಂಡು. ದೇಹ ದಂಡನೆಗೆ ಸಾಕ್ಷಿಯಾದ ವಿಶ್ವ ಯೋಗ ದಿನಾಚರಣೆ.

ಹೌದು, 5ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜಿಲ್ಲಾದ್ಯಂತ ಜಿಲ್ಲಾಡಳಿತ, ಪತಂಜಲಿ ಯೋಗ ಸಮಿತಿ, ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ಕಂಡು ಬಂದ ಈ ದೃಶ್ಯಗಳು ಭಾರತೀಯ ಸಾಂಸ್ಕೃತಿಕ ಹಿರಿಮೆಯಾದ ಯೋಗ ದಿನಾಚರಣೆಗೆ ಮೆರಗು ತಂದವು. ಸ್ವಯಂ ಪ್ರೇರಣೆಯಿಂದ ಬೆಳಗ್ಗೆಯೇ ಸಾರ್ವಜನಿಕ ಆಟದ ಮೈದಾನಗಳಲ್ಲಿ ಭರ್ತಿಯಾಗಿದ್ದ ಯೋಗ ಪಟುಗಳು ಎಂದಿನಂತೆ ಯೋಗ ಪ್ರದರ್ಶಿಸಿದರೆ, ತಮ್ಮೊಂದಿಗೆ ಇತರರನ್ನು ಕರೆ ತಂದು ಯೋಗಾಭ್ಯಾಸ ಮಾಡಿ ಗಮನ ಸೆಳೆದರು.

ಡೀಸಿ ಚಾಲನೆ: ಚಿಕ್ಕಬಳ್ಳಾಪುರ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೇಂದ್ರಿಯ ಯೋಗ ಸೇವಾ ಪ್ರಾಕೃತಿಕ ಚಿಕಿತ್ಸಾ ಅನುಸಂಧಾನ ಪರಿಷತ್‌, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ಜಿಲ್ಲಾ ಆಯುಷ್‌ ಇಲಾಖೆ, ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ನಡೆದ ಯೋಗ ದಿನಾಚರಣೆಗೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಚಾಲನೆ ನೀಡಿದರು.

ಬಳಿಕ ಸಾರ್ವಜನಿಕರ ಸಾಲಿನಲ್ಲಿ ಕೂತ ಡೀಸಿ, ಜಿಪಂ ಸಿಇಒ ಗುರುದತ್‌ ಹೆಗಡೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಗಾಭ್ಯಾಸದ ಮೂಲಕ ದೇಹ ದಂಡನೆ ಮಾಡಿ ಗಮನ ಸೆಳೆದರು. ಕ್ರೀಡಾಂಗಣದ ಮುಖ್ಯ ವೇದಿಕೆಯಲ್ಲಿ ಪತಂಜಲಿ ಯೋಗ ಸಮಿತಿ ಪದಾಧಿಕಾರಿಗಳು ವಿವಿಧ ಭಂಗಿಗಳಲ್ಲಿ ಯೋಗ ಪ್ರದರ್ಶಿಸಿ ಯೋಗ ಪಟುಗಳನ್ನು ಹುರಿದುಂಬಿಸಿದರು.

ಡೀಸಿ, ಸಿಇಒ ಜೊತೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶಾದ ಯೋಜನಾ ನಿರ್ದೇಶಕಿ ರೇಣುಕಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಾಗೇಶ್‌, ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸರಾದ ಡಾ.ವಿಜಯ್‌ ಕುಮಾರ್‌, ಜಿಲ್ಲಾ ಆಯುಷ್‌ ಅಧಿಕಾರಿ ಡಾ.ಇಂದುಮತಿ, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ನಗರಸಭೆ ಆಯುಕ್ತ ಉಮಾಕಾಂತ್‌ ಮತ್ತಿತರರು ಪಾಲ್ಗೊಂಡು ಸಾಥ್‌ ನೀಡಿದರು.

ಯೋಗದಿಂದ ಮಾನಸಿಕ, ದೈಹಿಕ ಸದೃಢತೆ: ವಿಶ್ವ ಯೋಗ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ವ್ಯಕ್ತಿಯ ಉತ್ತಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಲಿದ್ದು, ಪ್ರತಿಯೊಬ್ಬರು ದೈನಂದಿನ ಚಟುವಟಿಕೆಯಾಗಿ ಯೋಗಭ್ಯಾಸ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಮನುಕುಲದ ದೆಹಿçಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಯೋಗ ಪರಿಣಾಮಕಾರಿಯಾಗಿ ಕಾರ್ಯನಿರ್ವಸುತ್ತಿದ್ದು, ಯೋಗ ಎಂಬುದು ದೇಹಕ್ಕೆ ಉತ್ತಮ ಆರೋಗ್ಯ ನೀಡುವುದರ ಜೊತೆಗೆ ಶಿಸ್ತು, ಏಕಾಗ್ರತೆಗೆ ಜ್ಞಾನ ಭಂಡಾರವಾಗಿದೆ ಎಂದರು.

ಯೋಗದ ಬಗ್ಗೆ ಜನ ಜಾಗೃತಿ: ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗ ಪ್ರದರ್ಶನದ ಬಳಿಕ ನಗರದ ಅಂಬೇಡ್ಕರ್‌ ಭವನದವರೆಗೂ ನಗರದ ಶಾಲಾ, ಕಾಲೇಜುಗಳ ನೂರಾರು ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್‌ ಹಾಗೂ ಭಾರತ್‌ ಸ್ಕೌಟ್ಸ್‌ ಆಂಡ್‌ ಗೈಡ್ಸ್‌ ವಿದ್ಯಾರ್ಥಿಗಳು ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಯೋಗದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಘೋಷಣೆಗಳ ಮೂಲಕ ಅರಿವು ಮೂಡಿಸಿದರು.

ಯೋಗಾಭ್ಯಾಸಕ್ಕೆ ಜನಪ್ರತಿನಿಧಿಗಳು ಚಕ್ಕರ್‌: ಕಾರ್ಯಕ್ರಮವನ್ನು ಉದ್ಘಾಟಿಸಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಬೇಕಿದ್ದ ಸ್ಥಳೀಯ ಶಾಸಕರು ಮತ್ತಿತರ ಚುನಾಯಿತ ಜನಪ್ರತಿನಿಧಿಗಳು ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಯೋಗ ಸಾಧಕರಿಗೆ ಸನ್ಮಾನ: ಜಿಲ್ಲಾಡಳಿತ, ಜಿಪಂ ಹಾಗೂ ಆಯುಷ್‌ ಇಲಾಖೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನಾಲ್ಕು ಗೋಲ್ಡನ್‌ ಬುಕ್‌ ಆಫ್ ರೇಕಾರ್ಡ್‌ ಮಾಡಿರುವ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಗಶ್ರೀಶೈಲ್‌ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂರು ಚಿನ್ನದ ಪದಕ ಪಡೆದುಕೊಂಡಿರುವ ನವನೀತ್‌ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ತಮ್ಮ ಯೋಗದ ಪ್ರತಿಭೆ ಆನಾವರಣಗೊಳಿಸಿದರು.

ನಂತರ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಸಿಇಒ ಗುರುದತ್‌ ಹೆಗಡೆ ಮತ್ತಿತರ ಯೋಗಪಟುಗಳಾದ ನಾಗಶ್ರೀಶೈಲ್‌, ನವನೀತ್‌ ಮತ್ತು ರಕ್ಷಿತ್‌ರನ್ನು ಸನ್ಮಾನಿಸಿದರು.

ಕಲ್ಯಾಣಿಯಲ್ಲಿ ಯೋಗಾಭ್ಯಾಸ: ಇತ್ತೀಚಿಗೆ ಜಿಲ್ಲಾಡಳಿತ ನಗರದ ವಿವಿಧೆಡೆಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದು ಸ್ವಚ್ಚಗೊಳಿಸುವ ಮೂಲಕ ಕಂಗೊಳಿಸುತ್ತಿದ್ದ ಕಲ್ಯಾಣಿಗಳಲ್ಲಿ ಕೂಡ ಯೋಗದ ದಿನದಂದು ಯೋಗ ಪಟುಗಳು ಯೋಗಾಭ್ಯಾಸದ ಮೂಲಕ ಗಮನ ಸೆಳೆದರು. ನಗರದ ಎಲ್‌ಐಸಿ ಕಚೇರಿ ಎದುರುವ ಭಾರತೀನಗರ ಕಲ್ಯಾಣಿಯಲ್ಲಿ ಬೆಳಗ್ಗೆ ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ 150 ಕ್ಕೂ ಹೆಚ್ಚು ಮಂದಿ ಸಾರ್ವಜನಿಕರು ಕಲ್ಯಾಣದ ಸುತ್ತ ಕೂತು ಯೋಗ ಪ್ರದರ್ಶಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.