ಬೋರ್‌ವೆಲ್‌ ನೀರು ಖಾಸಗಿಯಾಗಿ ಮಾರಾಟ


Team Udayavani, Mar 29, 2019, 1:07 PM IST

borwell

ಗೌರಿಬಿದನೂರು: ಸಾರ್ವಜನಿಕರ ನೀರಿನ ಸಮಸ್ಯೆಗಾಗಿ ಉಪಯೋಗಿಸಬೇಕಾದ ಬೋರ್‌ವೆಲ್‌ ನೀರನ್ನು ಖಾಸಗಿ ವ್ಯಕ್ತಿಯೋರ್ವ ಖಾಸಗಿಯಾಗಿ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಭರತ್‌ ರೆಡ್ಡಿ ತಹಶೀಲ್ದಾರ್‌ ಶ್ರೀನಿವಾಸ್‌ ಮತ್ತು ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ನೀಡಿ ಆಗ್ರಹಿಸಿದ್ದಾರೆ.

ಪ್ರಸ್ತುತ ಗೌರಿಬಿದನೂರು ನಗರಸಭೆಯು ಪುರಸಭೆಯಿಂದ ನಗರಸಭೆಯಾಗಿ ಮೇಲ್ದಜೆಗೇರಿದ ನಂತರ 23 ವಾರ್ಡ್‌ಗಳು 31 ವಾರ್ಡ್‌ಗಳಾಗಿ ಮಾರ್ಪಟ್ಟಿದ್ದು, ನಗರವು ಬೃಹದಾಕಾರವಾಗಿ ಬೆಳೆದು ಅಪಾರ ಜನಸಂಖ್ಯೆ ಹೊಂದಿರುವುದರಿಂದ ನಗರಸಭೆ ವ್ಯಾಪ್ತಿಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು, ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಬಾಧಿಸುತ್ತಿದೆ.

ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸಲು ನಗರಸಭೆಯ ಬೋರ್‌ವೆಲ್‌ಗ‌ಳು ಬತ್ತಿರುವುದರಿಂದ ನೀರು ಪೂರೈಸುವುದು ಕಷ್ಟಸಾಧ್ಯವಾಗಿರುವ ಕಾರಣಕ್ಕಾಗಿ ಬಾಡಿಗೆ ಆಧಾರದ ಮೇಲೆ ಖಾಸಗಿ ಬೋರ್‌ವೆಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ.

ಒಂದು ವಾರದ ಹಿಂದೆ ಬೈಪಾಸ್‌ ರಸ್ತೆಯ ಸರ್ಕಾರಿ ಕೊಳವೆ ಬಾವಿಯಿಂದ ಖಾಸಗಿ ವ್ಯಕ್ತಿ ತನ್ನ ಅನುಕೂಲಕ್ಕಾಗಿ ಓರ್ವ ನಗರಸಭಾ ಸದಸ್ಯರ ಬೆಂಬಲದಿಂದ ಸಾರ್ವಜನಿಕರಿಗೆ ಸರಬರಾಜು ಮಾಡಬೇಕಾದ ನೀರನ್ನು ಖಾಸಗಿ ನೀರಿನ ಶೇಖರಣಾ ತೊಟ್ಟಿಗೆ ತುಂಬಿಸಿಕೊಂಡು ಟ್ಯಾಂಕರ್‌ಗಳ ಮೂಲಕ ಖಾಸಗಿಯಾಗಿ ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಪಿಎಸ್‌ ಸ್ಥಗಿತ: ಟ್ಯಾಂಕರ್‌ಗಳಿಗೆ ಅಳವಡಿಸಿರುವ ಜಿಪಿಎಸ್‌ನ್ನು ಅವುಗಳು ಕೆಲಸ ಮಾಡದಂತೆ ಮಾಡಿದ್ದು, ಇದರಿಂದಾಗಿ ಇಲ್ಲಿನ ನಾಗರಿಕರಿಗೆ ಕುಡಿಯುವ ನೀರು ಹೇಗೆ, ಎಲ್ಲಿಗೆ ಸರಬರಾಜಾಗುತ್ತಿದೆ ಎಂಬುದು ತಿಳಿಯದಂತಾಗಿದೆ. ವಾಸ್ತವವಾಗಿ ಕೆಲವು ವಾರ್ಡ್‌ಗಳಲ್ಲಿ ನೀರು ಬಿಟ್ಟು ತಿಂಗಳುಗಳೇ ಕಳೆದಿದ್ದು, ಪ್ರತಿದಿನ ನೀರು ಬಾರದ ವಾರ್ಡ್‌ಗಳ ನಾಗರಿಕರು ನಗರಸಭೆ ಮಂದೆ ಪ್ರತಿಭಟನೆ ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಸಹಾಯವಾಣಿ ಕೇಂದ್ರ: ತಿಂಗಳ ಹಿಂದೆ ನಗರಸಭೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗಳು ಸಭೆ ಕರೆದು ನಗರಸಭಾ ಸದಸ್ಯರ ಮುಖಾಂತರ ವಿಚಾರ ತಿಳಿದು ನಗರ ಪ್ರದಕ್ಷಿಣೆ ಮಾಡಿ ಜನರೊಂದಿಗೆ ಮಾತುಕತೆ ನಡೆಸಿ ನೀರಿನ ತೀವ್ರತೆ ಅರಿತು ಜನರಿಗೆ ನೀರು ಕೊಡಲು ಸಹಾಯವಾಣಿ ಕೇಂದ್ರ ತೆರೆಯಲು ನಗರಸಭೆಗೆ ಆದೇಶದ ಬಳಿಕ ಆರಂಭಿಸಲಾಗಿದೆ.

ಸಾರ್ವಜನಿಕರು ನೀರು ಬೇಕೆಂದು ನಗರಸಭೆಯಲ್ಲಿ ನೋಂದಾಯಿಸಿಕೊಂಡರೆ ನೀರನ್ನು ಟ್ಯಾಂಕರ್‌ ಮುಖಾಂತರ ಕಳುಹಿಸಬೇಕೆಂದು ಆದೇಶಿಸಿದ್ದು, ಜ.6 ರಿಂದ ಸಹಾಯವಾಣಿ ಆರಂಭವಾಗಿ ಈವರೆಗ‌ೂ ಸಹಾಯವಾಣಿ ಮುಖಾಂತರ ನೋಂದಾಯಿಸಿಕೊಂಡಿರುವ ಸಾರ್ವಜನಿಕರಿಗೆ ನೀರು ಕಳುಹಿಸುತ್ತಿಲ್ಲ. ನಗರಸಭೆಯ ಆಡಳಿತವನ್ನು ತಮ್ಮ ಕಪಿಮುಷ್ಠಿಯಲ್ಲಿ ಇರಿಸಿಕೊಂಡು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ವಾರ್ಡ್‌ಗಳಿಗೆ ಮಾತ್ರ ನೀರು ಸರಬರಾಜು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

10ರಿಂದ 15 ಟ್ಯಾಂಕರ್‌: ಪ್ರಸ್ತುತ 31 ಟ್ಯಾಂಕರ್‌ಗಳ ನೀರು ಸರಬರಾಜು ಮಾಡಬೇಕೆಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರೂ ಟೆಂಡರ್‌ ಪಡೆದಿರುವ ವ್ಯಕ್ತಿ 31 ಟ್ಯಾಂಕರ್‌ ನೀಡದೆ ಕೇವಲ 10 ರಿಂದ 15 ಟ್ಯಾಂಕರ್‌ ನೀರು ಮಾತ್ರ ಸರಬರಾಜು ಮಾಡುತ್ತಿದ್ದು, ಈ ಟೆಂಡರ್‌ ಪಡೆದಿರುವ ವ್ಯಕ್ತಿ ಬೇನಾಮಿ ನೀರು ಸರಬರಾಜುಗಾರನ ಹೆಸರಿನಲ್ಲಿ ಸರಬರಾಜು ಕಾರ್ಯಾದೇಶ ಪಡೆದಿದ್ದು, ಈತನ ಹೆಸರಿನಲ್ಲಿ ಯಾವುದೇ ಟ್ರ್ಯಾಕ್ಟರ್‌ ಮತ್ತು ಟ್ಯಾಂಕರ್‌ ಇಲ್ಲ.

31 ಟ್ಯಾಂಕರ್‌ ನೀರನ್ನು ಸರಬರಾಜು ಮಾಡಲು ಕಾರ್ಯಾದೇಶ ಪಡೆದ ಈತ ಖಾಸಗಿಯವರಿಗೆ ನೀರು ಮಾರಿಕೊಂಡು ಸಾರ್ವಜನಿಕರಿಗೆ ಮೋಸ ಮಾಡುತ್ತಿರುವುದರಿಂದ ಜಿಲ್ಲಾಧಿಕಾರಿಗಳು ಈತನಿಗೆ ನೋಟಿಸ್‌ ನೀಡಿ ಸಾರ್ವಜನಿಕರಿಗೆ ದಿನವಿಡೀ 31 ಟ್ಯಾಂಕರ್‌ ನೀರು ಸರಬರಾಜು ಮಾಡುವಂತೆ ಆದೇಶ ನೀಡಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಕೊಡದಿರುವ ನೀರಿನ ಬಿಲ್‌ಗ‌ಳನ್ನು ತಡೆ ಹಿಡಿಯಬೇಕು ಮತ್ತು ಆನ್‌ಲೈನ್‌ ಮುಖಾಂತರ ನೋಂದಣಿ ಮಾಡಿಕೊಂಡಿರುವವರಿಗೆ ನೀರು ಕಳುಹಿಸಿದೆ. ತಮಗೆ ಬೇಕಾದ ವ್ಯಕ್ತಿಗಳಿಗೆ ಮಾತ್ರ ಕಳುಹಿಸಿ ಮೋಸ ಮಾಡುತ್ತಿರುವ ಟ್ಯಾಂಕರ್‌ ಬಿಲ್‌ಗ‌ಳನ್ನು ತಡೆಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಭರತ್‌ ರೆಡ್ಡಿ ಅವರು ನೀಡಿರುವ ದೂರನ್ನು ಗೌರಿಬಿದನೂರು ನಗರಸಭೆ ಆಯುಕ್ತ ಉಮಾಕಾಂತ್‌ ಅವರಿಗೆ ಕಳುಹಿಸಿ ಸೂಕ್ತ ಪ್ರತ್ಯುತ್ತರ ನೀಡುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
-ಶ್ರೀನಿವಾಸ್‌, ತಹಶೀಲ್ದಾರ್‌, ಗೌರಿಬಿದನೂರು

ತಹಶೀಲ್ದಾರ್‌ ಅವರಿಂದ ಬಂದಿರುವ ದೂರನ್ನು ಪರಿಶೀಲಿಸಲಾಗಿದ್ದು, ಯಾವುದೇ ರೀತಿಯ ದುರುಪಯೋಗ ಆಗುತ್ತಿಲ್ಲ. ಆದರೂ ಸಹ ನೀರಿನ ದೂರಿನ ಬಗ್ಗೆ ತಹಶೀಲ್ದಾರ್‌ಗೆ ಶನಿವಾರದಂದು ಲಿಖಿತವಾಗಿ ವರದಿ ಸಲ್ಲಿಸಲಾಗುವುದು.
-ಉಮಾಕಾಂತ್‌, ನಗರಸಭೆ ಆಯುಕ್ತರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.