ಗೌರಿಬಿದನೂರು: ಹಸೆಮಣೆ ಏರಬೇಕಾದ ವಧು ಮುಹೂರ್ತ ಸಮಯಕ್ಕೆ ಪರಾರಿ
Team Udayavani, May 25, 2022, 5:46 PM IST
ಗೌರಿಬಿದನೂರು: ಇತ್ತೀಚೆಗೆ ಮದುವೆ ಕಲ್ಯಾಣ ಮಂಟಪದಲ್ಲಿಯೇ ಮುರಿದು ಬೀಳುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ ಇಂದು (ಮೇ.25) ಮದುವೆ ಮುಹೂರ್ತ ಸಮಯಕ್ಕೆ ವಧು ನಾಪತ್ತೆಯಾಗಿದ್ದು, ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥ ಗ್ರಾಮದ ಚನ್ನರಾಯಪ್ಪ ಕಲ್ಯಾಣ ಮಂಟಪಲ್ಲಿ ನಡೆಯಬೇಕಿದ್ದ ಮದುವೆ ಮುರಿದು ಬಿದ್ದಿದೆ.
ನಿನ್ನೆ ರಾತ್ರಿ ನಡೆದ ಅರತಕ್ಷತೆಯಲ್ಲಿ ಭಾಗಿಯಾಗಿದ್ದ 22 ವರ್ಷದ ವಧು ಇಂದು ನಾಪತ್ತೆಯಾಗಿದ್ದಾಳೆ. ಪ್ರಿಯಕರ ಪ್ರವೀಣ್ ಜೊತೆ ಎಸ್ಕೇಪ್ ಆಗಿರುವ ಅನುಮಾನ ವ್ಯಕ್ತವಾಗಿದೆ.
ಗೌರಿಬಿದನೂರಿನ ಕರೇಕಲ್ಲಹಳ್ಳಿ ನಿವಾಸಿಯಾಗಿರುವ ಸುರೇಶ್ ಜೊತೆ ಮದುವೆ ನಿಗದಿಯಾಗಿತ್ತು ವಧು ಗೌರಿಬಿದನೂರಿನ ನಾಗಿರೆಡ್ಡಿ ಬಡಾವಣೆಯ ನಿವಾಸಿಯಾಗಿದ್ದು ಇಂದು ಬೆಳಿಗ್ಗೆ 9.30ಕ್ಕೆ ಮಾಂಗಲ್ಯ ಧಾರಣೆ ನಡೆಯಬೇಕಿತ್ತು. ಆದರೆ ಹುಡುಗಿ ನಾಪತ್ತೆಯಾಗಿರುವ ಕಾರಣ ಮದುವೆ ಅರ್ಧಕ್ಕೆ ನಿಂತು ಹೋಗಿದೆ.
ಪ್ರಿಯಕರ ಪ್ರವೀಣ್ ಅಪ್ಪಿರೆಡ್ಡಿಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ವಧುವಿನ ಸಂಬಂಧಿಕರು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ