ಮೂರು ವರ್ಷ ಬಿಎಸ್ವೈ ಮುಖ್ಯಮಂತ್ರಿ: ಬಚ್ಚೇಗೌಡ
Team Udayavani, Jun 3, 2020, 6:56 AM IST
ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷದಲ್ಲಿ ಯಾವುದೇ ಬಣಗಳು ಇಲ್ಲ. ಅಧಿಕಾರಕ್ಕಾಗಿ ಅಥವಾ ಸ್ಥಾನಮಾನಕ್ಕಾಗಿ ಯಾರು ಏನೇ ಕೇಳಿದರೂ ತಪ್ಪಿಲ್ಲ. ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಂಸದ ಬಿ. ಎನ್.ಬಚ್ಚೇಗೌಡ ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಮಂಗಳ ವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಯಾವುದೇ ಪಕ್ಷ ಬಾಗಿಲು ಮುಚ್ಚಿ ಕೊಂಡು ರಾಜ ಕಾರಣ ಮಾಡುವು ದಿಲ್ಲ. ಪಕ್ಷಕ್ಕೆ ಬರುವರು, ಹೋಗುವವರು ಇರುತ್ತಾರೆ. ಎಲ್ಲರನ್ನು ತೃಪ್ತಿಪಡಿಸಲಿಕ್ಕೆ ಆಗುವುದಿಲ್ಲ. ಕೆಲವರು ಸ್ಥಾನಮಾನ ಕೇಳು ವುದರಲ್ಲಿ ತಪ್ಪಿಲ್ಲ, ಬಿಜೆಪಿಯಲ್ಲಿ ಬಣ ರಾಜಕೀಯ ಮಾಧ್ಯಮಗಳ ಸೃಷ್ಟಿ ಎಂದರು.
ಯಲಹಂಕ ಮೇಲ್ಸೆತುವೆಗೆ ವೀರ ಸಾವರ್ಕರ್ ಹೆಸರು ಇಡಲು ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಬಚ್ಚೇಗೌಡ, ದೇಶದಲ್ಲಿ ಯಾರ ಹೆಸರು ಎಲ್ಲಿ ಬೇಕಾದರೂ ಇಡಬಹುದು. ಸಾವರ್ಕರ್ ರಾಷ್ಟ್ರೀಯವಾದಿ. ಅವರ ಹೆಸರು ಇಡಬೇಕೆಂದು ನನ್ನದು ಒತ್ತಾಯ ಇದೆ. ಕೆಲವರು ಅನವಶ್ಯಕ ವಾಗಿ ವಿರೋಧ ಮಾಡುತ್ತಿದ್ದಾರೆ ಎಂದರು.
ಉಢಾಪೆಯಾಗಿ ಪ್ಯಾಕೇಜ್ ಘೋಷಿಸಿಲ್ಲ: ದೇಶದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ದೇಶದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೊರೊನಾ ಪರಿಹಾರವಾಗಿ 20 ಲಕ್ಷ ಕೋಟಿ ಪ್ಯಾಕೇ ಜ್ನ್ನು ಉಢಾಪೆಯಾಗಿ ಘೋಷಿಸಿಲ್ಲ ಎಂದರು. ಜಿಲ್ಲೆಯ ದ್ರಾಕ್ಷಿ, ಹಣ್ಣು, ತರ ಕಾರಿ ಬೆಳೆ ಗಾರರಿಗೂ ಸೂಕ್ತ ಪರಿಹಾರ ಸಿಗಬೇಕಿದೆ. ಈ ನಿಟ್ಟಿ ನಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡಲಾ ಗುವುದು. ಕೊರೊನಾ ಸೋಂಕು ತಡೆ ಯಲು ಕೇಂದ್ರ, ರಾಜ್ಯ ಸರ್ಕಾರಗಳು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್