![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಮೂರು ವರ್ಷ ಬಿಎಸ್ವೈ ಮುಖ್ಯಮಂತ್ರಿ: ಬಚ್ಚೇಗೌಡ
Team Udayavani, Jun 3, 2020, 6:56 AM IST
![mooru-varsha](https://www.udayavani.com/wp-content/uploads/2020/06/mooru-varsha-465x465.jpg)
ಚಿಕ್ಕಬಳ್ಳಾಪುರ: ಬಿಜೆಪಿ ಪಕ್ಷದಲ್ಲಿ ಯಾವುದೇ ಬಣಗಳು ಇಲ್ಲ. ಅಧಿಕಾರಕ್ಕಾಗಿ ಅಥವಾ ಸ್ಥಾನಮಾನಕ್ಕಾಗಿ ಯಾರು ಏನೇ ಕೇಳಿದರೂ ತಪ್ಪಿಲ್ಲ. ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಂಸದ ಬಿ. ಎನ್.ಬಚ್ಚೇಗೌಡ ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಮಂಗಳ ವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಯಾವುದೇ ಪಕ್ಷ ಬಾಗಿಲು ಮುಚ್ಚಿ ಕೊಂಡು ರಾಜ ಕಾರಣ ಮಾಡುವು ದಿಲ್ಲ. ಪಕ್ಷಕ್ಕೆ ಬರುವರು, ಹೋಗುವವರು ಇರುತ್ತಾರೆ. ಎಲ್ಲರನ್ನು ತೃಪ್ತಿಪಡಿಸಲಿಕ್ಕೆ ಆಗುವುದಿಲ್ಲ. ಕೆಲವರು ಸ್ಥಾನಮಾನ ಕೇಳು ವುದರಲ್ಲಿ ತಪ್ಪಿಲ್ಲ, ಬಿಜೆಪಿಯಲ್ಲಿ ಬಣ ರಾಜಕೀಯ ಮಾಧ್ಯಮಗಳ ಸೃಷ್ಟಿ ಎಂದರು.
ಯಲಹಂಕ ಮೇಲ್ಸೆತುವೆಗೆ ವೀರ ಸಾವರ್ಕರ್ ಹೆಸರು ಇಡಲು ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಬಚ್ಚೇಗೌಡ, ದೇಶದಲ್ಲಿ ಯಾರ ಹೆಸರು ಎಲ್ಲಿ ಬೇಕಾದರೂ ಇಡಬಹುದು. ಸಾವರ್ಕರ್ ರಾಷ್ಟ್ರೀಯವಾದಿ. ಅವರ ಹೆಸರು ಇಡಬೇಕೆಂದು ನನ್ನದು ಒತ್ತಾಯ ಇದೆ. ಕೆಲವರು ಅನವಶ್ಯಕ ವಾಗಿ ವಿರೋಧ ಮಾಡುತ್ತಿದ್ದಾರೆ ಎಂದರು.
ಉಢಾಪೆಯಾಗಿ ಪ್ಯಾಕೇಜ್ ಘೋಷಿಸಿಲ್ಲ: ದೇಶದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ದೇಶದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೊರೊನಾ ಪರಿಹಾರವಾಗಿ 20 ಲಕ್ಷ ಕೋಟಿ ಪ್ಯಾಕೇ ಜ್ನ್ನು ಉಢಾಪೆಯಾಗಿ ಘೋಷಿಸಿಲ್ಲ ಎಂದರು. ಜಿಲ್ಲೆಯ ದ್ರಾಕ್ಷಿ, ಹಣ್ಣು, ತರ ಕಾರಿ ಬೆಳೆ ಗಾರರಿಗೂ ಸೂಕ್ತ ಪರಿಹಾರ ಸಿಗಬೇಕಿದೆ. ಈ ನಿಟ್ಟಿ ನಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡಲಾ ಗುವುದು. ಕೊರೊನಾ ಸೋಂಕು ತಡೆ ಯಲು ಕೇಂದ್ರ, ರಾಜ್ಯ ಸರ್ಕಾರಗಳು ಸಾಕಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿವೆ ಎಂದರು.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.