ಬಜೆಟ್ ಮಂಡನೆ ಅನಿವಾರ್ಯ:ಸಚಿವ ಶಿವಶಂಕರರೆಡ್ಡಿ
Team Udayavani, Jun 28, 2018, 6:40 AM IST
ಚಿಕ್ಕಬಳ್ಳಾಪುರ: ಬಜೆಟ್ ಮಂಡನೆ ಮಾಡದಿರಲು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿಲ್ಲ. ಜೆಡಿಎಸ್ ಸರ್ಕಾರದಲ್ಲಿ
ಭಾಗಿಯಾಗಿರುವುದರಿಂದ ಹೊಸ ಬಜೆಟ್ ಮಂಡನೆ ಅನಿವಾರ್ಯ.
ಎರಡೂ ಪಕ್ಷಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಮ್ಮಿಶ್ರ ಸರ್ಕಾರ ತನ್ನ ಹೊಸ ಬಜೆಟ್ನ್ನು ಮಂಡಿಸಲಿದೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಜೆಟ್ ಮಂಡಿಸಬಾರದು ಎನ್ನುವುದಕ್ಕೆ ರಾಜ್ಯದಲ್ಲಿ ಕೇವಲ ಕಾಂಗ್ರೆಸ್
ಸರ್ಕಾರ ಇಲ್ಲ. ಇರುವುದು ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ. ಎರಡೂ ಪಕ್ಷಗಳು ಚುನಾವಣೆ ವೇಳೆ ರಾಜ್ಯದ
ಜನತೆಗೆ ಅನೇಕ ಭರವಸೆಗಳನ್ನು ನೀಡಿವೆ. ಹಾಗಾಗಿ, ರೈತರ ಸಾಲಮನ್ನಾ ಸೇರಿದಂತೆ ಅನೇಕ ಹೊಸ ಕಾರ್ಯಕ್ರಮಗಳನ್ನು ನೀಡಬೇಕಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ರೂಪಿಸಿ ಅನುಷ್ಠಾನಗೊಳಿಸಿದ ಎಲ್ಲಾ ಕಾರ್ಯಕ್ರಮಗಳು ಮುಂದುವರೆಯಲಿವೆ. ಈ ವಿಚಾರದಲ್ಲಿ ಯಾರಿಗೂ ಅನುಮಾನ,ಗೊಂದಲ ಬೇಡ. ಹಿಂದಿನ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ನೀಡಿರುವ ಕಾರ್ಯಕ್ರಮಗಳನ್ನು ತೆಗೆಯ ಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲೂ ಕೂಡ ಹೇಳಿಲ್ಲ. ಹಿಂದಿನ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು, ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುವುದು ರಾಜ್ಯ ಸಮ್ಮಿಶ್ರ ಸರ್ಕಾರದ ಹೊಸ ಬಜೆಟ್ನ ಉದ್ದೇಶವಾಗಿದೆ. ಅದರಲ್ಲೂ ಚುನಾವಣೆಯಲ್ಲಿ ನೂರಕ್ಕೂ ಹೆಚ್ಚು ಶಾಸಕರು ಹೊಸದಾಗಿ ಆಯ್ಕೆಗೊಂಡಿದ್ದಾರೆ.ಅವರ ಕ್ಷೇತ್ರದ ಅಭಿವೃದಿಟಛಿ ಆಶೋತ್ತರಗಳಿಗೂ ನಾವು ಸ್ವಂದಿಸಬೇಕಿದೆ. ಹೀಗಾಗಿ, ಸಮ್ಮಿಶ್ರ ಸರ್ಕಾರದಲ್ಲಿ ಹೊರ ಬಜೆಟ್ ಮಂಡಿಸುವುದು ಅನಿವಾರ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು