ಬತ್ತಿದ ಅಂರ್ತಜಲ: 136ಕ್ಕೆ 96 ಕೊಳವೆ ಬಾವಿ ಫೇಲ್‌


Team Udayavani, May 16, 2019, 3:00 AM IST

battida

ಚಿಕ್ಕಬಳ್ಳಾಪುರ: ಕಳೆದ ಹತ್ತು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಬಯಲು ಸೀಮೆ ಚಿಕ್ಕಬಳ್ಳಾಪುರದಲ್ಲಿ ಬರದ ಛಾಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಳೆಗಾಲ ಆರಂಭಗೊಂಡರೂ ಕುಡಿಯುವ ನೀರಿನ ಬವಣೆ ಮಾತ್ರ ಜಿಲ್ಲೆಯಲ್ಲಿ ನೀಗುತ್ತಿಲ್ಲ. ಜಿಲ್ಲಾದ್ಯಂತ 297 ಗ್ರಾಮಗಳಲ್ಲಿ ಹನಿ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಜನ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಜಿಲ್ಲೆಯ ಚಿಂತಾಮಣಿಯಲ್ಲಿ 93, ಶಿಡ್ಲಘಟ್ಟ, ಬಾಗೇಪಲ್ಲಿ ತಾಲೂಕಿನಲ್ಲಿ ತಲಾ 53, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 56, ಗೌರಿಬಿದನೂರಲ್ಲಿ 27, ಗುಡಿಬಂಡೆಯಲ್ಲಿ 15 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ.

ಜಿಲ್ಲಾಡಳಿತಕ್ಕೆ ತಲೆನೋವು: ಜಿಲ್ಲೆಯಲ್ಲಿ ಒಟ್ಟು 120 ಗ್ರಾಮಗಳಿಗೆ ನಿತ್ಯ 287 ಟ್ಯಾಂಕರ್‌ಗಳಷ್ಟು ನೀರು ಪೂರೈಕೆ ಮಾಡಲಾಗುತ್ತಿದೆ. ಆ ಪೈಕಿ ಚಿಂತಾಮಣಿ ತಾಲೂಕಿನ ಒಂದಕ್ಕೆ ನಿತ್ಯ 119, ಶಿಡ್ಲಘಟ್ಟಗೆ 61, ಚಿಕ್ಕಬಳ್ಳಾಪುರ 50, ಬಾಗೇಪಲ್ಲಿ 36 ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲಾಗುತ್ತಿದೆ. ಇನ್ನೂ ಪ್ರತಿ ನಿತ್ಯ ಜಿಲ್ಲೆಯ ಒಟ್ಟು 177 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸಲಾಗುತ್ತಿದೆ. ಆದರೂ ದಿನದಿಂದ ದಿನಕ್ಕೆ ನೀರಿನ ಸಮಸ್ಯಾತ್ಮಕ ಗ್ರಾಮಗಳ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಜಿಲ್ಲೆಯಲ್ಲಿ ನಿತ್ಯ ಅಲ್ಲಲ್ಲಿ ಕುಡಿಯುವ ನೀರಿಗಾಗಿ ಜನ ಖಾಲಿ ಬಿಂದಿಗೆಗಳನ್ನು ಕೈಯಲ್ಲಿ ಹಿಡಿದು ಧರಣಿ, ಪ್ರತಿಭಟನೆ, ಗ್ರಾಪಂಗಳಿಗೆ ಮುತ್ತಿಗೆ ಹಾಕುವುದು, ರಸ್ತೆ ತಡೆ ನಡೆಸುವುದು ಮಾಮೂಲಿಯಾಗಿದ್ದು ನೀರಿನ ಸಂಕಷ್ಟ ಅನಾವರಣಗೊಳಿಸುತ್ತಿವೆ. ಜಿಲ್ಲೆಯಲ್ಲಿ ಯಾವುದೇ ಶಾಶ್ವತವಾದ ನದಿ, ನಾಲೆಗಳು ಇಲ್ಲದ ಪರಿಣಾಮ ಮಳೆಯನ್ನು ಆಶ್ರಯಿಸಬೇಕಿದ್ದು, ಕೆರೆ, ಕುಂಟೆಗಳು ಸಹ ಬತ್ತಿ ಹೋಗಿವೆ. ಹೀಗಾಗಿ ಮಳೆ ಕೊರತೆಯಿಂದ ಜಿಲ್ಲೆಯ ಅಂರ್ತಜಲ ಮಟ್ಟ ಕೂಡ ಪಾತಳಕ್ಕೆ ಕುಸಿದು ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆದರೂ ನೀರು ದಕ್ಕುತ್ತಿಲ್ಲ.

ಹಣ ವ್ಯರ್ಥ: ಜಿಲ್ಲೆಯಲ್ಲಿ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ 136 ಕೊಳವೆ ಬಾವಿಗಳನ್ನು ಕೊರೆಸಿದ್ದು ಆ ಪೈಕಿ 40 ಕೊಳವೆ ಬಾವಿಗಳಲ್ಲಿ ನೀರು ಸಿಕ್ಕಿದ್ದರೆ, ಉಳಿದ 96 ಕೊಳವೆ ಬಾವಿಗಳಲ್ಲಿ ಹನಿ ನೀರು ಬಿದ್ದಿಲ್ಲ. ಇದರಿಂದ ಕೊಳಬೆ ಬಾವಿಗಳನ್ನು ಕೊರೆಸಲು ಜಿಲ್ಲಾಡಳಿತ ಲಕ್ಷ ಲಕ್ಷ ಹಣ ಸುರಿದರೂ ಹನಿ ನೀರು ಹೊರ ಬರುತ್ತಿಲ್ಲ.

38 ಕೋಟಿಗೆ 3 ಕೋಟಿ ಬಿಡುಗಡೆ: ಕಳೆದ ವರ್ಷ ಜಿಲ್ಲೆಗೆ ಶಾಸಕರ ಅಧ್ಯಕ್ಷತೆಯಲ್ಲಿರುವ ಟ್ಕಾಸ್‌ಫೋರ್ಸ್‌ಗೆ ಪ್ರತಿ ತಾಲೂಕಿಗೆ ಕುಡಿಯುವ ನೀರಿನ ಕಾಮಗಾರಿಗಳಿಗೆ ತಲಾ 1 ಕೋಟಿಯಂತೆ ಒಟ್ಟು ಜಿಲ್ಲೆಗೆ 6 ಕೋಟಿ ಅನುದಾನ ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು. ಆದರೆ ಕಳೆದ ಮಾರ್ಚ್‌ನಿಂದ ಈಚೆಗೆ ಇಡೀ ಜಿಲ್ಲೆಗೆ 3 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಪ್ರತಿ ತಾಲೂಕಿಗೆ ತಲಾ 50 ಲಕ್ಷ ರೂ. ನೀಡಲಾಗಿದೆ. ಜಿಲ್ಲೆಗೆ ಒಟ್ಟು ವರ್ಷಕ್ಕೆ ಕುಡಿಯುವ ನೀರಿಗಾಗಿ 38 ಕೋಟಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ತಾಲೂಕುವಾರು ನೀರಿನ ಸಮಸ್ಯೆ
-ಚಿಂತಾಮಣಿ 93
-ಶಿಡ್ಲಘಟ್ಟ 53
-ಬಾಗೇಪಲ್ಲಿ 53
-ಚಿಕ್ಕಬಳ್ಳಾಪುರ 56
-ಗೌರಿಬಿದನೂರು 27
-ಗುಡಿಬಂಡೆ 15

ಜಿಲ್ಲೆಯಲ್ಲಿ ಒಟ್ಟು 297 ಗ್ರಾಮಗಳು ಕುಡಿಯುವ ನೀರಿನ ತೊಂದರೆ ಎದುರಿಸುತ್ತಿವೆ. ಆ ಪೈಕಿ 120 ಗ್ರಾಮಗಳಿಗೆ ನಿತ್ಯ ಟ್ಯಾಂಕರ್‌ಗಳ ನೀರು ಪೂರೈಕೆ ಮಾಡುತ್ತಿದ್ದು, ಉಳಿದ 177 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಕೊಡಲಾಗುತ್ತಿದೆ. ಈ ವರ್ಷಕ್ಕೆ ಜಿಲ್ಲೆಗೆ ಒಟ್ಟು 38 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು ಸರ್ಕಾರ 3 ಕೋಟಿ ಅನುದಾನ ಬಿಡುಗಡೆ ಮಾಡಿದೆ.
-ಶಿವಕುಮಾರ್‌, ಜಿ.ಲೋಕೂರ್‌, ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.