ಲೋಕಸಭಾ ಚುನಾವಣೆಯಲ್ಲಿ ಸೋತಾಗಲೇ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯಬೇಕಿತ್ತು
Team Udayavani, Nov 27, 2019, 12:56 PM IST
ಚಿಕ್ಕಬಳ್ಳಾಪುರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಒಂದಂಕಿಗೆ ತರುತ್ತೇವೆಂದು ಹೇಳಿ 28 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಪಡೆದಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ನಾಯಕ ಸ್ಥಾನಕ್ಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಾಗ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಂಡರು. ಆದರೆ ಸಿದ್ದರಾಮಯ್ಯ ಶಾಸಕಾಂಗ ನಾಯಕ ಸ್ಥಾನಕ್ಕೆ ಅಂಟಿಕೊಂಡು ಕೂಳಿತಿದ್ದು ಯಾವ ನೈತಿಕತೆ ಎಂದು ಪ್ರಶ್ನಿಸಿದರು, ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಅಳಿಯ, ಆದರೆ ಸಮ್ಮಿಶ್ರ ಸರ್ಕಾರ ಚಿಕ್ಕಬಳ್ಳಾಪುರಕ್ಕೆ ಏನು ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆ- ಮಗ ಲೋಕಸಭಾ ಚುನಾವಣೆಯಲ್ಲಿ ಸೋತರೂ ಸಿಎಂ ಕುರ್ಚಿಗೆ ಅಂಟಿಕೊಂಡು ಕೂತಿದ್ದು ನೈತಿಕತೆಯೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ರವಿ ವಾಗ್ದಾಳಿ ನಡೆಸಿದರು. ಅಧಿಕಾರ ಇದ್ದಾಗ ವಿಧಾನಸೌಧದಲ್ಲಿ ಆಡಳಿತ ನಡೆಸುವ ಬದಲು ವೆಸ್ಟ್ಎಂಡ್ ಹೋಟೆಲ್ ನಲ್ಲಿ ಅಧಿಕಾರ ನಡೆಸಿದ್ದು ಕುಮಾರಸ್ವಾಮಿ ನೈತಿಕತೆಯೆ ಎಂದು ಸಚಿವ ಸಿ.ಟಿ.ರವಿ ಪ್ರಶ್ನಿಸಿದರು.
ಅನರ್ಹ ಶಾಸಕರ ಬಗ್ಗೆ ಮಾತನಾಡುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಈ ಹಿಂದೆ ಯಾವ ಪಕ್ಷದಲ್ಲಿ ಇದ್ದರು. ಎಷ್ಟು ಪಕ್ಷಗಳನ್ನು ಬದಲಾಯಿಸಿದ್ದಾರೆ ಎಂದು ಒಮ್ಮೆ ಅತ್ಮವಲೋಕನ ಮಾಡಿಕೊಳ್ಳಲಿ ಎಂದರು. ರಮೇಶ್ ಕುಮಾರ್ ಹೇಳುವುದೇ ಬೇರೆ ನಡೆದುಕೊಳ್ಳುವುದೇ ಬೇರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ, ತಸಲೂಕು ಅಧ್ಯಕ್ಷ ಆರ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು