ಕೈ ತೊರೆದು ಕಮಲ ಹಿಡಿತಾರಾ ಶಾಸಕ ಡಾ.ಸುಧಾಕರ್‌?

ಲೋಕ ಫ‌ಲಿತಾಂಶದ ಬಳಿಕ ಆಪರೇಷನ್‌ ಕಮಲ ಚುರುಕು • ಸುಧಾಕರ್‌ ಎಸ್ಸೆಎಂಕೆ ಭೇಟಿ ತಂದ ಕುತೂಹಲ

Team Udayavani, May 27, 2019, 8:01 AM IST

cb-tdy-1

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫ‌ಲಿತಾಂಶದ ಬಳಿಕ ರಾಜ್ಯದಲ್ಲಿ ಮತ್ತೆ ಆಪರೇಷನ್‌ ಕಮಲ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಆಪರೇಷನ್‌ ಕಮಲದ ಮುಂಚೂಣಿಯಲ್ಲಿರುವ ಅತೃಪ್ತ ಶಾಸಕ ರಮೇಶ್‌ ಜಾರಕಿಹೊಳಿ ಜೊತೆ ಸೇರಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ರಾಗಿರುವ ಎಸ್‌.ಎಂ.ಕೃಷ್ಣರನ್ನು ಭೇಟಿ ಮಾಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಅವಕಾಶ ಸಿಗದಿದ್ದಕ್ಕೆ ಅಸಮಾಧಾನ ಗೊಂಡಿರುವ ಶಾಸಕ ಡಾ.ಕೆ.ಸುಧಾಕರ್‌ ಕಾಂಗ್ರೆಸ್‌ ತೊರೆದು ಕಮಲ ಹಿಡಿತಾರಾ ಎಂಬ ಊಹಾಪೋಹದ ಚರ್ಚೆ ಲೋಕಸಭಾ ಚುನಾವಣೆಫ‌ಲಿತಾಂಶ ಹೊರ ಬಿದ್ದ ಬಳಿಕ ಬಿರುಸುಗೊಂಡಿದ್ದು, ಶಾಸಕರ ಸದ್ಯದ ರಾಜಕೀಯ ನಡೆ ಕುತೂಹಲಕಾರಿಯಾಗಿದೆ.

ಸುಧಾಕರ್‌ ನೇಮಕಕ್ಕೆ ಸಿಎಂ ಅಡ್ಡಿ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಚಿವ ಸಚಿವ ಸ್ಥಾನಕ್ಕಾಗಿ ನಿರಂತರ ಪ್ರಯತ್ನದಲ್ಲಿರುವ ಸುಧಾಕರ್‌ಗೆ ಹಲವು ಬಾರಿ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ನ ಅನೇಕ ನಾಯಕರ ಅಡ್ಡಗಾಲಿನಿಂದ ಸಚಿವ ಸ್ಥಾನ ಕೊನೆ ಗಳಿಗೆಯಲ್ಲಿ ಕೈ ತಪ್ಪುವಂತಾಯಿತು.

ಬಳಿಕ ನಿಗಮ ಮಂಡಳಿಗಳಲ್ಲಿ ಅವಕಾಶ ಸಿಗುತ್ತೆ ಯೆಂಬ ನಿರೀಕ್ಷೆಯಲ್ಲಿದ್ದಾಗಲೂ ಪಕ್ಷದ ರಾಷ್ಟ್ರೀಯ ನಾಯಕರೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಿಫಾರಸು ಮಾಡಿದರೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುಧಾಕರ್‌ ನೇಮಕಕ್ಕೆ ತಡೆಯೊಡ್ಡಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.

ಹೀಗಾಗಿ ಮೈತ್ರಿ ಸರ್ಕಾರದ ವಿರುದ್ಧ ಬಹಿರಂಗ ವಾಗಿಯೇ ಅಸಮಾಧಾನ ಹೊರ ಹಾಕುತ್ತಿರುವ ಶಾಸಕರು ಪಕ್ಷ ತೊರೆಯುವ ಚಿಂತನೆಯಲ್ಲಿದ್ದಾರೆಂದು ಅವರ ಆಪ್ತ ಮೂಲಗಳು ಹೇಳುತ್ತಿವೆ.

ಅತೃಪ್ತರ ಜೊತೆ ಸಂಪರ್ಕ: ಲೋಕ ಫ‌ಲಿತಾಂಶ ಬಳಿಕ ಬಿಜೆಪಿ, ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲು ಆಪರೇಷನ್‌ ಕಮಲಕ್ಕೆ ಮತ್ತೆ ಕೈ ಹಾಕಿದೆಯೆಂಬ ಮಾತು ಕೇಳಿ ಬರುತ್ತಿರುವ ಬೆನ್ನಲ್ಲೇ ಕ್ಷೇತ್ರಕ್ಕೆ ಕಾಲಿಡದೇ ಬೆಂಗಳೂರಿನಲ್ಲಿ ಬೀಡು ಬಿಟ್ಟು ಕಾಂಗ್ರೆಸ್‌ನ ಕೆಲ ಅತೃಪ್ತ ಶಾಸಕರ ಜೊತೆ ನಿಕಟ ಸಂಪರ್ಕದಲ್ಲಿದ್ದಾರೆಂಬ ಮಾತು ಕೇಳಿ ಬರುತ್ತಿದೆ.

ಹೀಗಾಗಿಯೇ ಮಾಜಿ ಸಚಿವ ಕಾಂಗ್ರೆಸ್‌ನ ಅತೃಪ್ತ ಶಾಸಕರ ಬಣದ ನಾಯಕರಾಗಿರುವ ರಮೇಶ್‌ ಜಾರಕಿಹೊಳಿ ಭಾನುವಾರ ಖುದ್ದು ಶಾಸಕ ಡಾ.ಕೆ.ಸುಧಾಕರ್‌ ಮನೆಗೆ ಭೇಟಿ ನೀಡಿರುವುದು ಆಪರೇಷನ್‌ ಕಮಲಕ್ಕೆ ಒಳಾಗುತ್ತಾರೆಂಬ ಊಹಾಪೋಹಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ.

ಬಿಜೆಪಿ ಸೇರಿದರೆ ಸಚಿವ ಸ್ಥಾನದ ಕನಸು ನನಸು ಮಾಡಿಕೊಳ್ಳಬಹುದೆಂಬ ಆಕಾಂಕ್ಷೆ ಹೊಂದಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣರನ್ನು ಭೇಟಿ ಮಾಡಿರುವುದು ಸೌಜನ್ಯದ ಭೇಟಿಯೆಂದು ಹೇಳುತ್ತಿದ್ದರೂ ಇದೇ ಸಂದರ್ಭದಲ್ಲಿ ಎಸ್‌.ಎಂ.ಕೃಷ್ಣ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತಿತರ ಬಿಜೆಪಿ ನಾಯಕರು ಸೇರಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ.

ಈ ಹಿಂದೆಯೆಲ್ಲಾ ಆಪರೇಷನ್‌ ಕಮಲದ ಮೊದಲ ಪಟ್ಟಿಯಲ್ಲಿರುವ ಶಾಸಕ ಸುಧಾಕರ್‌ ಅವರು ಹಿಂದೊಮ್ಮೆ ಅತೃಪ್ತ ಶಾಸಕರ ಜೊತೆ ಮುಂಬೈಗೂ ಹೋಗಿದ್ದರು. ಈ ವಿಚಾರವನ್ನು ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದ ಆಡಿಯೋದಲ್ಲಿ ಬಹಿರಂಗಗೊಂಡಿತ್ತು. ಇದೀಗ ಮತ್ತೆ ಆಪರೇಷನ್‌ ಕಮಲದ ಗುಮ್ಮ ಭಾರೀ ಸುದ್ದು ಮಾಡುತ್ತಿರುವ ಸಂದರ್ಭದಲ್ಲಿ ಶಾಸಕ ಸುಧಾಕರ್‌ರ ರಾಜಕೀಯ ನಡೆ ಸಾಕಷ್ಟು ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.