ಬೊಮ್ಮನಹಳ್ಳಿ ಗೇಟ್ ಬಳಿ ಅಪಘಾತ: ಪ್ರಾಣಾಪಾಯದಿಂದ ಪಾರಾದ ಅಧಿಕಾರಿಗಳು
Team Udayavani, Nov 3, 2022, 9:41 PM IST
ಶಿಡ್ಲಘಟ್ಟ: ತಾಲೂಕಿನ ಬೊಮ್ಮನಹಳ್ಳಿ ಗೇಟ್ ಬಳಿ ಮೃತ್ತಿಕೆ ಸಂಗ್ರಹ ಅಭಿಯಾನದ ಕೆಂಪೇಗೌಡ ರಥದ ಮೆರವಣಿಗೆಯಲ್ಲಿ ಬರುತ್ತಿದ್ದ ಕಾರಿಗೆ ಸರಕು ಸಾಗಾಣಿಕೆ ಬೊಲೆರೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಮೂವರು ಅಧಿಕಾರಿಗಳು ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ನಡೆದಿದೆ
ಶಿಡ್ಲಘಟ್ಟ ತಾಲೂಕಿನ ಸಿಡಿಪಿಓ ನೌತಾಜ್, ಸಹಾಯಕ ಸಿಡಿಪಿಓ ಮಹೇಶ್ ಹಾಗೂ ಬಿಸಿಎಂ ಅಧಿಕಾರಿ ನಾರಾಯಣಪ್ಪ ಹಾಗೂ ಕಾರಿನ ಚಾಲಕ ಭೀಕರ ಅಪಘಾತದಲ್ಲಿ ಪಾರಾಗಿದ್ದಾರೆ.
ತಾಲೂಕಿನ ವೈಹುಸೇನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮೃತ್ತಿಕೆ ಸಂಗ್ರಹ ಮಾಡಿ ಕೆಂಪೇಗೌಡ ರಥದ ಮೆರವಣಿಗೆ ದೇವರಮಳ್ಳರು ಗ್ರಾಮ ಪಂಚಾಯಿತಿಗೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ದೇವರ ಮಳ್ಳೂರು ಗ್ರಾಮ ಪಂಚಾಯಿತಿಗೆ ಬೊಮ್ಮನಹಳ್ಳಿ ಗೇಟ್ ಬಳಿ ಅಧಿಕಾರಿಗಳ ಕಾರು ತಿರುವು ಪಡೆಯುತ್ತಿದ್ದಾಗ ಚಿಂತಾಮಣಿ ಕಡೆಯಿಂದ ಅತಿ ವೇಗ ಮತ್ತು ಅಜಾಗೃಕತೆಯಿಂದ ಬಂದ ಬೋಲೋರೋ ಸರಕು ಸಾಗಾಣಿಕೆ ವಾಹನ ಡಿಕ್ಕಿ ಹೊಡೆದಿದೆ ಬೋಲೋರೋ ವಾಹನ ಒಡೆದ ರಬಸಕ್ಕೆ ಕಾರು ಮುಂದೆ ಇದ್ದ ಹೈಓಲಟೇಜ್ ವಿದ್ಯುತ್ ಕಂಬ ತಪ್ಪಿ ಪಕ್ಕದಲ್ಲಿ ನಿಂತ ಕಾರಣ ಮತ್ತೊಂದು ಭಾರಿ ಪ್ರಮಾದ ತಪ್ಪಿದೆ.
ರಸ್ತೆ ಅಪಘಾತದಲ್ಲಿ ಬಿಸಿಎಂ ಇಲಾಖೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಂಚರಿಸುತ್ತಿದ್ದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಬಿಸಿಎಂ ಇಲಾಖೆಯಿಂದ ಹೊರಗುತ್ತಿಗೆ ಆಧಾರದ ಮೇರೆಗೆ ನಡೆಯುತ್ತಿದ್ದ ಕಾರು ನಂಬಿ ಜೀವನ ನಡೆಸುತ್ತಿದ್ದ ಚಾಲಕನ ಬದುಕು ಅತಂತ್ರವಾಗಿದೆ ಒಟ್ಟಾರೇ ರಸ್ತೆ ದುರಂತದಲ್ಲಿ ಮೂರು ಅಧಿಕಾರಿಗಳು ಪಾರಾಗಿದ್ದಾರೆ ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
Chikballapur; ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು