ಚೇಳೂರು ಗ್ರಾಂ.ಪಂ ನೂತನ ಅಧ್ಯಕ್ಷರಾಗಿ ಸತೀಶ್ ಆಯ್ಕೆ
Team Udayavani, Jun 28, 2022, 7:39 PM IST
ಚೇಳೂರು: ಚೇಳೂರಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ಬೆಂಬಲಿತ ಬೇಕರಿ ಸತೀಶ್ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎನ್.ಯತೀಶ್ ಹಾಗೂ ಸತೀಶ್ ಇವರುಗಳು ಅಧ್ಯಕ್ಷ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಿದ್ದರು.
ಈ ಪಂಚಾಯಿತಿ ಯಲ್ಲಿ ಒಟ್ಟು 22 ಸದಸ್ಯರುಗಳು ಇದ್ದು ಚುನಾವಣೆಯಲ್ಲಿ 18 ಸದಸ್ಯರು ಸತೀಶ್ ಪರ ಮತ ಹಾಕಿದ್ದಾರೆ.ಸಿ.ಎನ್.ಯತೀಶ್ ಗೆ 4 ಮಾತುಗಳು ಪರ ಬಂದಿದ್ದು, ಚುನಾವಣೆ ಅಧಿಕಾರಿಯಾಗಿ ಬಂದಿದ್ದ ತಹಶೀಲ್ದಾರ್ ಆರತಿಯವರು ಅಭ್ಯರ್ಥಿ ಸೇರಿ 18 ಮತವನ್ನು ಪಡೆದಿದ್ದ ಸತೀಶ್ ಇವರನ್ನು ಚೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಗಿ ಅಧಿಕೃತವಾಗಿ ಘೋಷಣೆ ಮಾಡಿದರು.
ನೂತನ ವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಮಾತನಾಡಿ, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸ್ವಚ್ಛತೆ,ಸರ್ಕಾರದಿಂದ ಸಾರ್ವಜನಿಕರಿಗೆ ಬೀಗುವ ಸೌಲಭ್ಯಗಳು, ಎಲ್ಲಾ ಸದಸ್ಯರು ಸಹಕಾರ, ಶಾಸಕರ ಸಹಕಾರದಿಂದ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸುತ್ತಾನೆ. ನನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಲೋಪದೋಷಗಳು ಬರದ ಹಾಗೆ ಸಾರ್ವಜನಿಕರ ಪರ ಕೆಲಸಗಳನ್ನು ಮಾಡುತ್ತೇನೆ ಎಂದರು.
ಈ ಚುನಾವಣೆಯ ಪ್ರಕ್ರಿಯೆಯಲ್ಲಿ ಕಂದಾಯಾಧಿಕಾರಿ ನಾಗಭೂಷಣ್.ರವೀಶ್.ಪಿಡಿಒ ಶ್ರೀನಿವಾಸ್ ಭಾಗವಹಿಸಿದ್ದರು.
ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎನ್.ನಾಗರಾಜು, ಗುರು ರೇಣುಕರಾಧ್, .ಸಿ.ಎನ್.ವೆಂಕಟೇಶ, ಮಹದೇವಯ್ಯ, ರಾಮಕೃಷ್ಣಯ್ಯ, ರಂಗದಾಮಯ್ಯ, ಮೋಹನಕುಮಾರ್. ಸಿ.ಡಿ.ಗೋಪಿ, ಕಾರ್ತೀಕೆಯನ್,ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ