ಚಿಕ್ಕಬಳ್ಳಾಪುರ: ವಿದ್ಯುತ್ ತಂತಿ ತಾಗಿ ಕಟ್ಟಡ ನಿರ್ಮಾಣ ಕಾರ್ಮಿಕ ಸಾವು
Team Udayavani, Mar 10, 2020, 4:40 PM IST
ಚಿಕ್ಕಬಳ್ಳಾಪುರ: ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕನಿಗೆ ಪಕ್ಕದಲ್ಲಿಯೇ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತಾಗಿ ಸ್ಥಳದಲ್ಲಿಯೆ ಮೃತ ಪಟ್ಟಿರುವ ಘಟನೆ ಜಿಲ್ಲಾ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.
ಮೃತ ಕೂಲಿ ಕಾರ್ಮಿಕನನ್ನು ಚಿಕ್ಕಬಳ್ಳಾಪುರ ನಗರದ ಕೋಟೆ ಪ್ರದೇಶದ ನಿವಾಸಿ ಮೆಹಬೂಬ್ (32) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಊಟಕ್ಕೆ ತೆರಳುವ ಮುನ್ನ ಈ ಘಟನೆ ನಡೆದಿದೆ.
ನಗರದ ಬಾಲಾಜಿ ಟಾಕೀಸ್ ರಸ್ತೆಯ ಎನ್ಪಿಓ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಕಟ್ಟಡಕ್ಕೆ ಸುತ್ತಲೂ ಇಡಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಪಕ್ಕದಲ್ಲಿಯೆ ಹಾದು ಹೋಗಿದ್ದ ವಿದ್ಯುತ್ ತಂತಿಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಆದರೂ ಅಕಸ್ಮಿಕವಾಗಿ ತಂತಿ ತಗಲಿದ್ದು ಮೆಹಬೂಬ್ ರನ್ನು ಬಲಿ ಪಡೆದಿದೆ.
ಹೈಟೆನ್ಶನ್ ತಂತಿ ಆಗಿದ್ದರಿಂದ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ