ರಾಜಕಾಲುವೆ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ


Team Udayavani, Feb 22, 2021, 2:30 PM IST

ರಾಜಕಾಲುವೆ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಒತ್ತುವರಿ ಮಾಡಲಾಗಿರುವ ರಾಜಕಾಲುವೆಯನ್ನು ಒಂದು ವಾರದೊಳಗಾಗಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆರ್‌.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಭಾನುವಾರ ಮುಂಜಾನೆ ಬೋದಗೂರು ಗ್ರಾಮದಲ್ಲಿ ಸಂಚರಿಸಿ, ಆಶ್ರಯ ಯೋಜನೆಯಡಿಮಂಜೂರಾದ ನಿವೇಶನ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತದ ನಂತರ ರಾಜ ಕಾಲುವೆಗಳಒತ್ತುವರಿ ವೀಕ್ಷಿಸಿ ವಾರದೊಳಗಾಗಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆಗಡುವು ನೀಡಿದರು.

ಸ್ವಚ್ಛತೆಗೆ ಆದ್ಯತೆ ನೀಡಿ: ಬೆಳ್ಳಂಬೆಳಗ್ಗೆ ಗ್ರಾಮದ ಕೆಲ ನಾಗರಿಕರು ತಮ್ಮ ಮನೆಗಳ ಮುಂದಿರುವ ಸಮಸ್ಯೆಗಳ ಕುರಿತು ಮನವಿ ಮಾಡಿದಾಗ, ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿ ಬಗೆಹರಿಸಿದರು. ಮನೆಗಳ ಮುಂದೆ ಕಸಹಾಕದಂತೆ, ಪ್ಲಾಸ್ಟಿಕ್‌ ಬಳಸದಂತೆ ಅರಿವು ಮೂಡಿಸಿ, ಚರಂಡಿಯನ್ನು ಸ್ವಚ್ಚಗೊಳಿಸಲು ಕ್ರಮ  ವಹಿಸಬೇಕು. ಒಗ್ಗಟ್ಟಿನಿಂದ ಹಳ್ಳಿಯ ಸ್ವತ್ಛತೆಯ ಕಡೆಯೂ ಜನರು ಗಮನ ಹರಿಸಬೇಕು ಎಂದರು.

ಕಮಲಮ್ಮ ಭೇಟಿ: ಆರೋಗ್ಯ ಕೇಂದ್ರ ಮತ್ತು ಡೇರಿ, ನರೇಗಾ ಯೋಜನೆಯಡಿನಿರ್ಮಿಸಲಾಗಿರುವ ಹಸು ಮತ್ತು ಕುರಿ ರೆಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತದ ನಂತರ ರೇಷ್ಮೆ ಕೃಷಿಯಲ್ಲಿ ಉತ್ತಮ ಸಾಧನೆಗಾಗಿ 2019-20ನೇಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಸಮಿತಿಯಜಿಲ್ಲಾ ಮಟ್ಟದ ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದಿದ ª ಬೋದಗೂರು ಗ್ರಾಮದ 65 ವಯಸ್ಸಿನ ಕಮಲಮ್ಮ ಅವರನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿಗಳು, ರೇಷ್ಮೆ ಕೃಷಿಯಲ್ಲಿನ ಕಮಲಮ್ಮನವರ ಅನುಭವ ಆಲಿಸಿದರು.

ಇದೇ ಸಂದರ್ಭದಲ್ಲಿ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಆಸಕ್ತಿಯಿಂದ ಪಾಠ ಆಲಿಸಿದರೆ ಪರೀಕ್ಷೆಯಲ್ಲಿ ತೇರ್ಗಡೆ ಸುಲಭ ಎಂದು ಧೈರ್ಯ ತುಂಬಿದರು. ಡಿಡಿಪಿಐ ಜಯರಾಂರೆಡ್ಡಿ, ಕೃಷಿ ಇಲಾಖೆಯಜಂಟಿ ನಿರ್ದೇಶಕಿ ರೂಪಾ, ಡಿಹೆಚ್‌ಐ ಇಂದಿರಾ ಆರ್‌.ಕಬಾಡೆ, ತಹಶೀಲ್ದಾರ್‌ ರಾಜೀವ್‌, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರೂಪಾ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಇಂದಿರಾ ಕಬಾಡೆ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ ಸೇರಿದಂತೆ ಇತರೆ ಅಧಿಕಾರಿ ಸಿಬ್ಬಂದಿ ಇದ್ದರು.

ಸ್ತ್ರೀಶಕ್ತಿ ಭವನದಲ್ಲಿ ವಾಸ್ತವ್ಯ: ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉತ್ತಮವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡಿ ಪ್ರೀತಿ ವಾತ್ಸಲ್ಯ ತೋರಿಸಿದ ಬೋದಗೂರು ಗ್ರಾಮಸ್ಥರ ಪ್ರೀತಿಗೆಜಿಲ್ಲಾಧಿಕಾರಿ ಆರ್‌.ಲತಾ ಮನಸೋತರು. ಗ್ರಾಮದ ಸ್ತ್ರೀಶಕ್ತಿ ಭವನದಲ್ಲಿ ವಾಸ್ತವ್ಯ ಮಾಡಿದ್ದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಹಿಳಾ ಅಧಿಕಾರಿಗಳು ಸಾಥ್‌ ನೀಡಿದರು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.