ಚಿಕ್ಕಬಳ್ಳಾಪುರ ನೂತನ ಎಸ್ ಪಿಯಾಗಿ ಮಿಥುನ್ ಕುಮಾರ್ ಅಧಿಕಾರ ಸ್ವೀಕಾರ
Team Udayavani, Mar 19, 2020, 12:26 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿ.ಕೆಮಿಥುನ್ ಕುಮಾರ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಮಿಥುನ್ ಕುಮಾರ್ ಉಡುಪಿ ಜಿಲ್ಲೆಯ ಕಾರ್ಕಳದ ನಕ್ಸಲ್ ನಿಗ್ರಹ ಪಡೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲೆಯ ಎಸ್ ಪಿಯಾಗಿದ್ದ ಅಭಿನವ ಖರೆರನ್ನು ಕೇಂದ್ರ ಸರ್ಕಾರ ಸಿಬಿಐ ಸೇವೆಗೆ ನಾಲ್ಕು ವರ್ಷಗಳ ಕಾಲ ನಿಯೋಜಿಸಿದ್ದರಿಂದ ತೆರೆವಾದ ಹುದ್ದೆಗೆ ರಾಜ್ಯ ಸರ್ಕಾರ ಬುಧವಾರವಷ್ಟೆ ಮಿಥುನ್ ಕುಮಾರ್ ನ್ನು ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಿತ್ತು.
ಇಂದು ನಗರದ ಹೊರ ವಲಯದ ಅಣಕನೂರು ಸಮೀಪ ಇರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಪ್ರಭಾರಿ ಎಸ್ ಪಿ ಜಾಹ್ನವಿ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಜಿಲಾ ಪೊಲೀಸ್ ವೃಂದ ನೂತನ ಎಸ್ ಪಿಗೆ ಗೌರವ ವಂದನೆ ಸಲ್ಲಿಸಿ ಆತ್ಮೀಯವಾಗಿ ಜಿಲ್ಲೆಗೆ ಬರಮಾಡಿ ಕೊಂಡಿತು. ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!