ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಬಿಜೆಪಿ ವಿಧಾನ ಪರಿಷತ್ ಸದಸ್ಯ Y A.ನಾರಾಯಣಸ್ವಾಮಿ ಆಗ್ರಹ

 ವ್ಯಾಪಾರ ವಹಿವಾಟಿಗೆ ಮುಕ್ತ ಅವಕಾಶ ಶಾಲೆಗಳಿಗೆ ನಿರ್ಭಂಧವೇಕೆ?

Team Udayavani, Jul 8, 2021, 10:02 PM IST

Chikballapura News

ಶಿಡ್ಲಘಟ್ಟ  : ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಗೊಂಡಿರುವ ಹಿನ್ನೆಲೆಯಲ್ಲಿ ಅನ್‍ಲಾಕ್-03 ಜಾರಿಗೊಳಿಸಿ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕಲ್ಪಿಸಿರುವ ಮಾದರಿಯಲ್ಲಿ ಶಾಲೆಗಳನ್ನು ಆರಂಭಿಸಲು ಸಹ ಸರ್ಕಾರ ಅನುಮತಿ ನೀಡಬೇಕೆಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ತಿನ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಆಗ್ರಹಿಸಿದರು.

ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗೇಟ್ ಬಳಿಯಿರುವ ಬಿಜಿಎಸ್ ಶಾಲೆಯಲ್ಲಿ ಡಾ.ವೈ.ಎ.ಎನ್. ಹಾಗೂ ಚಿದಾನಂದ್ ಎಂ.ಗೌಡ ಅವರ ಬಳಗದಿಂದ ಅನುದಾನರಹಿತ ಶಿಕ್ಷಕರಿಗೆ ಆಹಾರದ ಕಿಟ್‍ಗಳನ್ನು ವಿತರಿಸುವ ಸಮಾರಂಭದಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕಿನ ಪ್ರಭಾವದಿಂದ ಅನೇಕ ಶಿಕ್ಷಕರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದಾರೆ ಸಂಬಂಧಗಳು ನಾಶವಾಗಿದೆ ಎಂದು ಕಳವಳ ವ್ಯಕ್ತಪಡಿಸಿ ರಾಜ್ಯಾದ್ಯಂತ 27 ಸಾವಿರ ಖಾಸಗಿ ಶಾಲೆಗಳ ಶಿಕ್ಷಕರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ ಬೇಸರ ವ್ಯಕ್ತಪಡಿಸಿದರು.

ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಸರ್ಕಾರ ಜನತಾ ಕರ್ಫಯೂ ಮತ್ತು ಲಾಕ್‍ಡೌನ್ ಜಾರಿಗೊಳಿಸಿತ್ತು ಪ್ರಸ್ತುತ ಕೋವಿಡ್-19 ಪಾಸಿಟಿವ್ ದರ ಕಡಿಮೆಯಾಗಿದ್ದರಿಂದ ಅನ್‍ಲಾಕ್-03 ರ ಮೂಲಕ ವ್ಯಾಪಾರ ವಹಿವಾಟು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಆದರೇ ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ತಕಾರರು ತೆಗೆಯುವುದು ಸೂಕ್ತವಲ್ಲ ಸರ್ಕಾರ ಕೂಡಲೇ ಶಾಲೆಗಳನ್ನು ಆರಂಭಿಸಿ ಮಕ್ಕಳಿಗೆ ಶಿಸ್ತುಬದ್ದ ಶಿಕ್ಷಣದ ವ್ಯವಸ್ಥೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ : ಕೋವಿಡ್ ಸಮಸ್ಯೆ ಎದುರಿಸಲು 23,000 ಕೋಟಿ ಪ್ಯಾಕೇಜ್ : ನೂತನ ಆರೋಗ್ಯ ಸಚಿವರ ಕ್ವಿಕ್ ಆ್ಯಕ್ಶನ್

ಆನ್‍ ಲೈನ್-ಆಫ್‍ಲೈನ್ ಪ್ರಯೋಜನವಿಲ್ಲ: ಕೊರೊನಾ ಸೋಂಕಿನ ನೆಪದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ತರಗತಿಗಳನ್ನು ನಡೆಸುವ ವ್ಯವಸ್ಥೆ ಜಾರಿಯಲ್ಲಿದೆ ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಮಕ್ಕಳಿಗೆ ಶಾಲೆಯಲ್ಲಿ ಶಿಸ್ತು ಬರುತ್ತದೆ ಆನ್‍ಲೈನ್ ಮತ್ತು ಆಫ್‍ಲೈನ್‍ನಿಂದ ಮೌಲ್ಯಾಧಾರಿತ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ ಕೋವಿಡ್-19 ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ದೇಶದ ಮಾದರಿ ಯೋಜನೆ: ಕೊರೊನಾ ಸಂಕಷ್ಟದಲ್ಲಿರುವ ಸಿಲುಕಿದ ಖಾಸಗಿ ಶಾಲಾ ಶಿಕ್ಷಕರಿಗೆ ನೆರವು ಒದಗಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಮನವಿಗೆ ಸ್ಪಂದಿಸಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಅತಿ ಶೀಘ್ರದಲ್ಲಿ ಶಾಲಾ ಶಿಕ್ಷಕರ ಖಾತೆಗಳಿಗೆ ಹಣ ಜಮಾ ಆಗಲಿದ್ದು ಈ ನಿಟ್ಟಿನಲ್ಲಿ ಅರ್ಹರಿಗೆ ಸೌಲಭ್ಯ ಕಲ್ಪಿಸಲು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಇದರಲ್ಲಿ ಗೋಲ್‍ಮಾಲ್ ಮಾಡಿದರೆ ಮೊದಲು ನರಕಕ್ಕೆ ಹೋಗ್ತಾರೆ ಜೊತೆಗೆ ತಲೆದಂಡ ಖಾತ್ರಿಯೆಂದು ಎಚ್ಚರಿಸಿದರು.

ಆಯುಷ್ಮಾನ ಕಾರ್ಡ್ ವಿತರಣೆ: ದೇಶದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಆರೋಗ್ಯ ಕಾರ್ಡ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿ ಉಚಿತವಾಗಿ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿದ್ದಾರೆ ಅದೇ ರೀತಿಯಲ್ಲಿ ಅನುದಾನರಹಿತ ಖಾಸಗಿ ಶಾಲಾ ಶಿಕ್ಷಕರಿಗೆ ಆಯುಷ್ಮಾನ ಭಾರತ ಆರೋಗ್ಯ ಕಾರ್ಡ್ ನೀಡಲು ಈಗಾಗಲೇ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದು ಅತಿ ಶೀಘ್ರದಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಘೋಷಣೆ ಮಾಡಲಿದೆಯೆಂದು ಭರವಸೆ ನೀಡಿದರು.

ನಾನು ಮತ್ತು ಎಂಎಲ್ಸಿ ಚಿದಾನಂದ ಎಂ ಗೌಡ ಅವರು ಶಿಕ್ಷಕರು ಮತ್ತು ಪದವಿಧರ ಕಲ್ಯಾಣಕ್ಕಾಗಿ ಜೋಡೆತ್ತುಗಳಂತೆ ಕಾರ್ಯನಿರ್ವಹಿಸುತ್ತೇವೆ ಡಿಕೆ ಶಿವಕುಮಾರ್ ಮತ್ತು ಹೆಚ್.ಡಿ.ಕುಮಾರಸ್ವಾಮಿಗಳಂತೆ ಅಲ್ಲವೆಂದು ವ್ಯಂಗ್ಯವಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ರದ್ದುಗೊಳಿಸಲು ಆಗ್ರಹಿಸಿದ ಕನ್ನಡ ಚಳುವಳಿ ವಾಟಾಲ್ ಪಕ್ಷದ ವಾಟಾಳ್ ನಾಗರಾಜ್ ವಿರುಧ್ಧ ವಾಗ್ದಾಳಿ ನಡೆಸಿದ ವೈ.ಎ.ಎನ್ ಡೋಂಗಿ ಬುದ್ದಿಜೀವಿಗಳ ಮಾತುಗಳಿಗೆ ಮರಳಾಗದೆ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಚಿದಾನಂದ್ ಎಂ.ಗೌಡ ಖಾಸಗಿ ಶಾಲಾ ಆಡಳಿತ ಮಂಡಳಿಯವರು ಸುಲಿಗೆ ಮಾಡುತ್ತಾರೆ ಎಂಬುದು ಸುಳ್ಳು ಕೆಲವರು ಇರಬಹುದು ಇಲ್ಲ ಅನ್ನುವುದಕ್ಕೆ ಆಗುವುದಿಲ್ಲ ಆದರೇ ಎಲ್ಲರನ್ನು ಒಂದೇ ದೃಷ್ಠಿಯಿಂದ ನೋಡಬಾರದು ವಿಧಾನಪರಿಷತ್ತಿನ ಸದಸ್ಯರಾಗಿ 9 ತಿಂಗಳ ನಂತರ ಕ್ಷೇತ್ರಕ್ಕೆ ಬಂದಿಕ್ಕೆ ಮತದಾರರಲ್ಲಿ ಕ್ಷೆಮೆಯಾಚಿಸಿ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರ ಧಾವಿಸಿದೆ ಅದೇ ರೀತಿಯ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರು ಸಹ ಸಹಕಾರ ನೀಡಬೇಕೆಂದರು.

ಮಾಜಿ ಶಾಸಕ ಎಂ.ರಾಜಣ್ಣ, ರಾಜ್ಯ ಅನುದಾನಿತ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಗೋಪಿನಾಥ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಂಪಣ್ಣ, ತಾಲೂಕು ಅಧ್ಯಕ್ಷ ಗೋಪಿನಾಥ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಮಹದೇವ, ಶಿಡ್ಲಘಟ್ಟ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿಸಿ ನಂದೀಶ್ ಮತ್ತಿತರರು ಉಪಸ್ಥಿತರಿದ್ದರು.

ಹಸು ಹಾಲು ಕೊಡುವುದನ್ನು ನಿಲ್ಲಿಸಿದ ತಕ್ಷಣ ಅದನ್ನು ಕಸಾಯಿಖಾನೆಗೆ ತಳ್ಳುವುದು ಸರಿಯೇ? ಯೆಂದು ಶಾಸಗಿ ಶಾಲಾ ಆಡಳಿತ ಮಂಡಳಿಯವರ ಧೋರಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು, ಎಲ್ಲವನ್ನು ಅನ್‍ಲಾಕ್ ಮಾಡಿದ್ದೀವಿ ಎಲ್ಲಾ ಓಪನ್‍ಯಿದೆ ಆದರೇ ಶಾಲೆ ಮಾತ್ರ ಓಪನ್ ಆಗಬಾರದಂತೆ ಇದು ಯಾವ ನ್ಯಾಯವೆಂದು ಪ್ರಶ್ನಿಸಿದ ಅವರು ಕೆಲವು ಡೋಂಗಿ ಸಾಹಿತಿಗಳಿದ್ದಾರೆ ಸಮಾಜವನ್ನು ಉತ್ತರದಾಯತ್ವವಾಗಿ ತೆಗೆದುಕೊಂಡಿದ್ದಾರೆ ವಾಟಾಳ ನಾಗರಾಜ್ ಎಂಬಂತಹ ವಿಡಂಬಡಣೆಯುಳ್ಳ ವ್ಯಕ್ತಿ ಪರೀಕ್ಷೆ ಮಾಡಬಾರದೆಂದು ಇಲ್ಲದಿದ್ದರೆ ಧರಣಿ ಮಾಡುತ್ತೇನೆ ಎಂದು ಹೇಳುತ್ತಾರೆ ಅವರ ಮೊಮ್ಮಕ್ಕಳಿಗೆ ಎಕ್ಸಾಮ್ ಮಾಡದಿದ್ದರೇ ಗೊತ್ತಾಗುತ್ತದೆ ಅವರ ಮಕ್ಕಳು ಶಾಲಾ ಕಾಲೇಜಿಗೆ ಹೋಗಿದ್ದಾರಾಯೆಂದು ನೋಡಿಕೊಂಡು ಬನ್ನಿ ಹರಿಕಥೆ ದಾಸರು ಬದನೆಬಾಯಿ ಭಾಷಣ ಮಾಡದಂಗೆ ಸ್ಟೇಜ್‍ನಲ್ಲಿ ಭಾಷಣ ಮಾಡುವುದು ಅಲ್ಲ ಇವತ್ತು ಹಳ್ಳಿಯಲ್ಲಿ ಮಕ್ಕಳ ಗತಿ ಏನಾಗಿದೆ ಕೂಲಿ ಹೋಗುತ್ತಿದ್ದಾರೆ ಬಾಲ ಕಾರ್ಮಿಕರ ಸಂಖ್ಯೆ ಜಾಸ್ತಿಯಾಗಿದೆ ಮಾನಸಿಕವಾಗಿ ಎಲ್ಲೂ ಒಂದು ಕಡೆ ಈ ಶಿಕ್ಷಣ ಬೇಡವೆಂದು ಆನ್‍ಲೈನ್ ಕ್ಲಾಸೆಸ್ ಹೋಗೋಣವೆಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದರು.

ಇದನ್ನೂ ಓದಿ : ಪಶ್ಚಿಮ ಬಂಗಾಳದ ಜನರು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಭಯಭೀತರಾಗಿದ್ದಾರೆ : ಜಾನ್ ಬಾರ್ಲಾ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.