ಚಿಕ್ಕಬಳ್ಳಾಪುರ: ಶೇ.16.09 ಅರಣ್ಯ ಕೊರತೆ


Team Udayavani, Jun 5, 2020, 7:18 AM IST

aranya korate

ಚಿಕ್ಕಬಳ್ಳಾಪುರ: ಜಿಲ್ಲೆಯ ಭೌಗೋಳಿಕ ವಿಸ್ತರಣೆ ಆಧಾರವಾಗಿಟ್ಟುಕೊಂಡು ನೋಡುವುದಾದರೆ ಜಿಲ್ಲೆಯಲ್ಲಿ ಸರಾಸರಿ ಶೇ.33 ರಷ್ಟು ಅರಣ್ಯ ಇರಬೇಕು. ಆದರೆ ಜಿಲ್ಲೆಯಲ್ಲಿ ಕೇವಲ ಶೇ.16.91ರಷ್ಟು ಮಾತ್ರ ಕಾಡು ಇದ್ದು, ಶೇ.16.09 ರಷ್ಟು  ಅರಣ್ಯ ಕೊರತೆ ಇರುವುದು ಕಂಡು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ ದಶಕ ಉರುಳಿದರೂ ಅರಣ್ಯ ಬೆಳೆಸುವ ಕಾರ್ಯ ಮಾತ್ರ ಹಳ್ಳ ಹಿಡಿದಿದೆ ಎನ್ನುವುದು ಸ್ಪಷ್ಟವಾಗಿದೆ.

ಜಿಲ್ಲಾದ್ಯಂತ 75 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ  ಅರಣ್ಯ ಪ್ರದೇಶ ಇದೆ. ಆದರೆ ಅರಣ್ಯ ಇಲಾಖೆ ನೀಡಿರುವ ಅಂಕಿ, ಅಂಶಗಳ ಪ್ರಕಾರವೇ ಜಿಲ್ಲೆಯಲ್ಲಿ ಅರ್ಧಕ್ಕರ್ಧ ಅರಣ್ಯ ಪ್ರದೇಶ ಕಡಿಮೆ ಇರುವುದು ತೀವ್ರ ಆತಂಕ ಹಾಗೂ ಗಂಭೀರ ವಿಷಯವಾಗಿದ್ದು, ಜಿಲ್ಲೆಯಲ್ಲಿ ಕೈಗೊಂಡ  ಅರಣ್ಯೀಕರಣ ಕಾರ್ಯಕ್ರಮಗಳು ಎತ್ತ ಸಾಗಿವೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಆತ್ಮವಲೋಕನ ಮಾಡಿಕೊಳ್ಳಬೇಕಿದೆ: ಸತತ ಹಲವು ವರ್ಷಗಳಿಂದಲೂ ಮಳೆ, ಬೆಳೆ ಇಲ್ಲದೇ ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಅರಣ್ಯ ಇಲ್ಲದೇ ಇರುವುದು ಜಿಲ್ಲೆಯ ಬರಕ್ಕೆ ಕಾರಣ ಎನ್ನುವ ಮಾತುಗಳು ಸಹಜವಾಗಿಯೇ  ಕೇಳಿ ಬರುತ್ತಿದ್ದರೂ ಸುಮಾರು ಅರ್ಧದಷ್ಟು ಕೊರತೆ ಇರುವ ಅರಣ್ಯ ಬೆಳೆಸುವಲ್ಲಿ ಇದುವರೆಗೂ ಜಿಲ್ಲಾಡಳಿತ, ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಕೊಡುಗೆ ಏನು ? ಎಂಬುದನ್ನು ಇಂದಿನ ವಿಶ್ವ ಪರಿಸರ ದಿನಾಚರಣೆಯ  ಸಂದರ್ಭದಲ್ಲಿ ಆತ್ಮವಲೋಕನ ಮಾಡಿಕೊಳ್ಳಬೇಕಿದೆ.

ಜಿಲ್ಲೆಯಲ್ಲಿ ಯಾವುದೇ ಶಾಶ್ವತ ನದಿ, ನಾಲೆಗಳು ಇಲ್ಲದೆ ಮಳೆ ಆಶ್ರಯಿಸಿಕೊಂಡು ರೈತಾಪಿ ಕೂಲಿ ಕಾರ್ಮಿಕರು ಬದುಕು ಕಟ್ಟಿಕೊಳ್ಳಬೇಕಿದೆ. ಆದರೆ ಪ್ರತಿ ವರ್ಷ ಅರಣ್ಯೀಕರಣಕ್ಕೆ  ಕೋಟ್ಯಂತರ ರೂ. ವೆಚ್ಚ ಮಾಡುವ ಸರ್ಕಾರದ ನಡೆ ಜಿಲ್ಲೆಯ ಪಾಲಿಗೆ ಕೇವಲ ಅರಣ್ಯರೋದನವಾಗಿದ್ದು, ಅರ್ಧ ಕ್ಕರ್ಧ ಕೊರತೆ ಇರುವ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯ ಜನರ ಸಹಭಾಗಿತ್ವದಲ್ಲಿ ಚುನಾಯಿತ ಜನಪ್ರತಿನಿಧಿಗಳು,  ಜಿಲ್ಲಾಡಳಿತ ಮುಂದಾಗದಿದ್ದರೆ ಜಿಲ್ಲೆಗೆ ಭವಿಷ್ಯವಿಲ್ಲ ಎನ್ನುವ ಅಭಿಪ್ರಾಯ ತಜ್ಞರಿಂದ ಕೇಳಿ ಬರುತ್ತಿದೆ.

ಗಡಿಯಲ್ಲಿ ಅರಣ್ಯ ನಾಶ: ಚಿಕ್ಕಬಳ್ಳಾಪುರ ಜಿಲ್ಲೆ ಆಂಧ್ರದ ಗಡಿಯಲ್ಲಿದ್ದು, ಇದರ ಪರಿಣಾಮ ಜಿಲ್ಲೆಯಲ್ಲಿ ಸದ್ದಿಲ್ಲದೇ ಅರಣ್ಯ ನಾಶ ಮಿತಿ ಮಿರಿದೆ. ಚಿಂತಾಮಣಿ, ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು ಹಾಗೂ ಶಿಡ್ಲಘಟ್ಟ  ತಾಲೂಕುಗಳಲ್ಲಿ ಅರಣ್ಯ ನಾಶ ಹೆಚ್ಚಾಗಿದ್ದು, ಬ್ರೇಕ್‌ ಹಾಕುವ ಕಾರ್ಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆಗಬೇಕಿದೆ.

ಜಿಲ್ಲೆಯ ಒಟ್ಟಾರೆ ಭೌಗೋಳಿಕ ಪ್ರದೇಶದಲ್ಲಿ ಸರಾಸರಿ ಶೇ.33 ರಷ್ಟು ಅರಣ್ಯ ಪ್ರದೇಶ ಇರಬೇಕು. ಆದರೆ ಜಿಲ್ಲೆಯಲ್ಲಿ 16.91 ರಷ್ಟು ಅರಣ್ಯ ಪ್ರದೇಶ ಇದ್ದು 16.09 ರಷ್ಟು ಅರಣ್ಯ ಕೊರತೆ ಇದೆ. ಪ್ರತಿ ವರ್ಷ ಸರ್ಕಾರದ ಮಾರ್ಗಸೂಚಿಯಂತೆ  ಅರಣ್ಯ ಬೆಳೆಸುವ ಕಾರ್ಯ ಇಲಾಖೆಯಿಂದ ನಡೆಯುತ್ತಿದೆ. 
-ಶ್ರೀಧರ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.