ಚಿಕ್ಕಬಳ್ಳಾಪುರ: ದರೋಡೆ ಮಾಡಿದರೆಂದು ದೂರು ಕೊಟ್ಟಾತನೇ ಆರೋಪಿಯಾಗಿ ಸಿಕ್ಕಿಬಿದ್ದ!
Team Udayavani, Jul 26, 2020, 12:34 PM IST
ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗೆ ಸೇರಿದ ಕೋಳಿಗಳನ್ನು ಮಾರಾಟ ಮಾಡಿದ ಹಣ ತೆಗೆದುಕೊಂಡು ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳು ನಮ್ಮನ್ನು ಅಡ್ಡಗಟ್ಟಿ ಚಾಕು ತೋರಿಸಿ ಹಣ ದೋಚಿ ಪರಾರಿಯಾದರೆಂದು ಹೇಳಿ ಪೊಲೀಸರಿಗೆ ದೂರು ಕೊಟ್ಟಿದ್ದ ಖಾಸಗಿ ಕಂಪನಿ ಸೂಪರ್ ವೈಸರ್ ಒಬ್ಬ ತನಿಖೆ ವೇಳೆ ತಾನೇ ಆರೋಪಿಯಾಗಿ ಸಿಕ್ಕಿ ಬಿದ್ದಿರುವ ಪ್ರಸಂಗ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಏನಿದು ಘಟನೆ?
ಕಳೆದ ಜುಲೈ 21ರಂದು ದೇವನಹಳ್ಳಿ ಮೂಲದ ಲೋಟಸ್ ಫಾರ್ಮ್ ಕಂಪನಿಯ ಲೈನ್ ಸೂಪರ್ ವೈಸರ್ ಉದಯಕುಮಾರ್ ಎಂಬುವರು ತಮ್ಮ ಸಹೋದ್ಯೋಗಿ ಮಂಜುನಾಥ ಜೊತೆ ಸೇರಿ ಚಿಕ್ಕಬಳ್ಳಾಪುರ ತಾಲೂಕಿನ ಆನೆಮಡಗು ಕೊತ್ತೂರರು ರಸ್ತೆಯ ಹರೀಶ್ ಎಂಬುವರ ಕೋಳಿ ಫಾರಂ ಹೋಗಿ ಕಂಪನಿಯ ಒಪ್ಪಂದದಂತೆ ಸಾಕಾಣೆಕೆ ಮಾಡಲಾಗಿದ್ದ ಕೋಳಿಗಳನ್ನು ವ್ಯಾಪಾರಿಗಳಿಗೆ ಮಾರಾಟ ಮಾಡಿ ಸಂಗ್ರಹವಾಗಿದ್ದ ಬರೋಬರಿ 7.91 ಲಕ್ಷ. ರೂ ಹಣವನ್ನು ತೆಗೆದುಕೊಂಡ ಬರುವ ವೇಳೆ ನಾಲ್ವರು ಅಪರಿಚಿತರು ಬೈಕ್ ನ್ನು ಅಡ್ಡಗಟ್ಟಿ ಚಾಕು ತೋರಿಸಿ ಮದ್ಯದ ಬಾಟಲುಗಳಿಂದ ನಮ್ಮ ಹಲ್ಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದರೆಂದು ಉದಯಕುಮಾರ್ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ವೇಳೆ ದೂರುದಾರನೇ ಆರೋಪಿ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲಿಸರು ಪ್ರಕರಣವನ್ನು ಚಿಕ್ಕಬಳ್ಳಾಪುರ ಆರಕ್ಷಕ ಉಪ ಅಧೀಕ್ಷಕ ರವಿಶಂಕರ್, ಸಿಪಿಐ ಪ್ರಶಾಂತ್, ಪಿಎಸ್ಐ ಚೇತನ್ ಕಯಮಾರ್ ಹಾಗೂ ಸಿಬ್ಬಂದಿ ವೈಜ್ಞಾನಿಕವಾಗಿ ತನಿಖೆ ನಡೆಸಿ ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿಯ ಪ್ರಶಾಂತ್, ನರಸಿಂಹ ಮೂರ್ತಿ, ಪೃಥ್ವಿರಾಜ್, ಕಿರಣ್, ನವೀನ್ ಕುಮಾರ್ ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
ಕೃತ್ಯಕ್ಕೆ ಉದಯಕುಮಾರ್ ಪ್ರೇರಣೆ
ಬಂಧಿತ ಆರೋಪಿಗಳು ವಿಚಾರಣೆ ವೇಳೆ ತಾವು ಡಕಾಯಿತಿ ನಡೆಸಲು ಉದಯಕುಮಾರ್ ಸಹಕಾರ ಇತ್ತು. ಮೊದಲಿಗೆ ಆತ ಸಂಚು ರೂಪಿಸಿ ನಾವು ಲೋಟಸ್ ಕಂಪನಿಗೆ ಸೇರಿದ ಕೋಳಿಗಳನ್ನು ಮಾರಾಟ ಮಾಡಿ ಹಣ ತರುವ ವೇಳೆ ನೀವು ನಮ್ಮನ್ನು ಅಡ್ಡಗಟ್ಟಿ ಚಾಕು ತೋರಿಸಿ ಹಲ್ಲೆ ಮಾಡಿದಂತೆ ನಾಟಕವಾಡಿ ಹಣ ಸುಲಿಗೆ ಮಾಡಿಕೊಂಡು ಹೋಗುವಂತೆ ಹೇಳಿದ್ದರು. ನಮಗೆ ಮೊದಲೇ ತಿಳಿಸಿದಂತೆ ನಾವು ಮಾಡಿದ್ದೇವೆಂದು ಪೊಲೀಸರ ವಿಚಾರಣೆ ವೇಳೆ ಬಂಧಿತರು ಬಾಯಿ ಬಿಡುವ ಮೂಲಕ ಡಕಾಯಿತಿ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಇಡೀ ಪ್ರಕರಣಕ್ಕೆ ಪೊಲೀಸರಿಗೆ ದೂರು ನೀಡಿದ್ದ ಅಸಾಮಿ ಉದಯಕುಮಾರ್ ನೇ ಸೂತ್ರದಾರ ಎನ್ನುವುದು ಈಗ ಬೆಳಕಿಗೆ ಬಂದಿದೆ.
ಇನ್ನೋವಾ ಕಾರು ಜಪ್ತಿ
ಆರೋಪಿಗಳಿಂದ ಕೃತ್ಯಕ್ಕೆ ಬಳಕೆ ಮಾಡಿದ್ದ ಇನ್ನೋವಾ ಕಾರು, ಪಲ್ಸರ್ ದ್ವಿಚಕ್ರ ವಾಹನ, ನಾಲ್ಕು ಮೊಬೈಲ್ ಗಳ ಸಹಿತ ಆರೋಪಿಗಳಿಂದ 7.60 ಲಕ್ಷ ರೂ, ನಗದು ವಶಪಡಿಸಿಕೊಳ್ಳಾಗಿದೆಯೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ