ಚಿಕ್ಕಬಳ್ಳಾಪುರ: ಮಳೆಗಾಲ ಶುರುವಾದಂತೆ ಹಾಲು ಉತ್ಪಾದನೆ ಜಿಗಿತ
ಪ್ರತಿ ಲೀ.ಗೆ ಕನಿಷ್ಠ 50 ರೂ. ಕೊಡಬೇಕು ಬೇಸಿಗೆಯಲ್ಲಿ ಹಾಲಿನ ಉತ್ಪಾದನೆ ಕುಸಿದಿತ್ತು.
Team Udayavani, May 26, 2023, 10:41 AM IST
ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಬೇಸಿಗೆಯಲ್ಲಿ ಹಾಲು ಉತ್ಪಾದನೆಯಲ್ಲಿ ಈಗ ಮಳೆಗಾಲ ಶುರುವಾದಂತೆ ಚೇತರಿಕೆ ಕಂಡಿದ್ದು, ಸರಾಸರಿ ನಿತ್ಯ ಜಿಲ್ಲೆಯಲ್ಲಿ 50 ಸಾವಿರ ಲೀ.ಗೂ ಅಧಿಕ ಪ್ರಮಾಣದಲ್ಲಿ ಹಾಲು ಉತ್ಪಾದನೆ ಹೆಚ್ಚಳ ಕಂಡಿದೆ. ಹೈನೋದ್ಯಮದಲ್ಲಿ ರಾಜ್ಯದ ಗಮನ ಸೆಳೆದಿರುವ ಅಖಂಡ ಕೋಲಾರ ಚಿಕ್ಕ ಬಳ್ಳಾಪುರ ಜಿಲ್ಲೆಗಳ ರೈತರ ಪಾಲಿಗೆ ಹೈನುಗಾರಿಕೆ ಜೀವನಾಡಿ ಆಗಿದೆ. ಆದರೆ ಬೇಸಿಗೆ ಅವಧಿಯಲ್ಲಿ ಹಸಿರು ಮೇವಿನ ಕೊರತೆ ಪರಿಣಾಮ ಹಾಲು ದಿಢೀರ್ ಕುಸಿತ ಕಂಡು ಹಾಲು ಉತ್ಪಾದಕರು ಕಂಗಾಲಾಗಿದ್ದರು.
ಹಾಲು ಉತ್ಪಾದನೆಯಲ್ಲಿ ಚೇತರಿಕೆ: ಸದ್ಯ ಮಳೆಗಾಲ ಶುರುವಾಗುತ್ತಿದ್ದಂತೆ ಹಾಲು ಉತ್ಪಾದನೆಯಲ್ಲಿ ಚೇತರಿಕೆ ಕಂಡು
ಹೈನುಗಾರರು ನಿಟ್ಟುಸಿರು ಬಿಡುವಂತಾಗಿದೆ. ಬೇಸಿ ಗೆಯಲ್ಲಿ ಜಿಲ್ಲೆಯ ಹಾಲಿನ ಉತ್ಪಾ ದನೆ ಪ್ರತಿ ನಿತ್ಯ ಸರಾಸರಿ 3.40 ಲಕ್ಷ ಲೀ.ಗೆ ಕುಸಿದಿತ್ತು. ಇದು ಪರೋಕ್ಷ ವಾಗಿ ರೈತರ ಆದಾಯದ ಮೇಲೆ ದುಷ್ಪರಿಣಾಮ ಬೀರಿತ್ತು. ಹೈನು ದ್ಯೋವನ್ನೆ ನಂಬಿ ಜೀವನ ನಡೆಸುವ ರೈತರಿಗೆ ಹಾಲು ಉತ್ಪಾದನೆ ಕುಸಿತದಿಂದ ಬೇಸಿಗೆ ಕಳೆಯು ವವರೆಗೂ ಸಂಕಷ್ಟದಲ್ಲಿ ಜೀವನ ನಡೆಸಬೇಕಿತ್ತು.
ಆದರೆ, ಈಗ ಮಳೆಗಾಲ ಶುರುವಾಗಿರುವ ಹಿನ್ನೆಲೆ ಯಲ್ಲಿ ಹಾಲಿನ ಉತ್ಪಾದನೆ ಜಿಲ್ಲೆಯಲ್ಲಿ 50 ಸಾವಿರ ಲೀ. ಹೆಚ್ಚಾಗಿದ್ದು, ಸದ್ಯ ಚಿಮೂಲ್ಗೆ ಪ್ರತಿ ನಿತ್ಯ 3.90 ಲಕ್ಷ ಲೀ. ಹಾಲು ಪೂರೈಕೆ ಆಗುತ್ತಿದೆ. ಮುಂಗಾರು ಹಂಗಾಮು ಶುರುವಾಗಿ ಬಿತ್ತನೆ ವೇಳೆಗೆ ಜಿಲ್ಲೆಯ ಹಾಲಿನ ಉತ್ಪಾದನೆ 4 ಲಕ್ಷ ಲೀ.ಮೀರಿದರೂ ಅಚ್ಚರಿ ಇಲ್ಲ ಎಂದು ಚಿಮೂಲ್ ಅಧಿಕಾರಿಗಳು ಹೇಳುತ್ತಿದ್ದಾರೆ.
ವಿಶೇಷವಾಗಿ ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟದಲ್ಲಿ ಉತ್ಪಾದನೆಯಲ್ಲಿ ಹೆಚ್ಚಳ ಕಂಡಿದ್ದು ಗೌರಿಬಿದನೂರು, ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಅಷ್ಟೇ ಹಾಲು ಉತ್ಪಾದನೆಯಲ್ಲಿ ಏರಿಕೆ ಕಂಡಿದೆ.ಸದ್ಯ ಇಡೀ ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕುಗಳಲ್ಲಿ ಹಾಲು ಉತ್ಪಾದನೆ ಅಧಿಕವಾಗಿದೆ.
ಪ್ರತಿ ಲೀ. ಹಾಲಿಗೆ ಸಿಗುತ್ತದೆ 33.90 ರೂ.
ಕೋಚಿಮುಲ್ ವತಿಯಿಂದ ಶೇ. 4 ಪ್ಯಾಟ್, 8.5 ಎಸ್ಎನ್ಎಫ್ ಇದ್ದರೆ ರೈತರು ಪೂರೈಸುವ ಪ್ರತಿ ಲೀ.ಹಾಲಿಗೆ 33.90 ರೂ. ದರ ನೀಡಲಾಗುತ್ತಿದೆ. ಶೇ.4ಕ್ಕಿಂತ ಅಧಿಕ ಪ್ಯಾಟ್ ಇರುವ ಪ್ರತಿ ಲೀ.ಹಾಲಿಗೆ ಇನ್ನೂ ಹೆಚ್ಚಿನ ದರ ಸಿಗುತ್ತದೆ. ಕಡಿಮೆ ಇದ್ದರೆ ದರ ಕೂಡ ಕಡಿಮೆ ಆಗುತ್ತದೆ. ಒಟ್ಟಾರೆ ಜಿಲ್ಲೆಯ ರೈತರಿಗೆ ಸರ್ಕಾರದ ಪ್ರೋತ್ಸಾಹ ಹೊರತುಪಡಿಸಿ ಪ್ರತಿ ಲೀ.ಹಾಲಿಗೆ 33.90 ರೂ. ನೀಡಲಾಗುತ್ತಿದೆ.
ಪ್ರತಿ ಲೀ.ಗೆ ಕನಿಷ್ಠ 50 ರೂ. ಕೊಡಬೇಕು
ಬೇಸಿಗೆಯಲ್ಲಿ ಹಾಲಿನ ಉತ್ಪಾದನೆ ಕುಸಿದಿತ್ತು. ಆದರೆ ಈಗ ಮಳೆಗಾಲ ಆರಂಭವಾಗಿ ರುವುದರಿಂದ ಹಾಲಿನ ಉತ್ಪಾದನೆ ಹೆಚ್ಚಾಗಿದೆ. ರೈತರಿಗೆ ಪ್ರತಿ ಲೀ.ಹಾಲಿಗೆ ಕನಿಷ್ಠ 50 ರೂ. ನಿಗದಿಪಡಿಸಬೇಕು. ಬೂಸು, ಚಕ್ಕೆ ಮತ್ತಿತರ ಪಶು ಆಹಾರ ಬೆಲೆ ಗಗನಕ್ಕೇರಿದೆ ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ.
ಬೇಸಿಗೆಯಲ್ಲಿ ಕೇವಲ 3.40 ಲಕ್ಷ ಲೀ. ಹಾಲು ಮಾತ್ರ ಜಿಲ್ಲೆಯಲ್ಲಿ ಉತ್ಪಾದನೆ ಆಗುತ್ತಿತ್ತು. ಮಳೆಗಾಲ ಶುರುವಾದ ಬಳಿಕ ಹಾಲಿನ
ಉತ್ಪಾದನೆಯಲ್ಲಿ ಏರಿಕೆ ಕಂಡಿದ್ದು ನಿತ್ಯ ಸರಾಸರಿ 3.90 ಲಕ್ಷ ಲೀ.ಹಾಲು ಚಿಮೂಲ್ಗೆ ಸರಬರಾಜು ಆಗುತ್ತಿದೆ.
●ಗುರುಮೂರ್ತಿ, ಪ್ರಭಾರಿ ಎಂಡಿ,
ಚಿಮೂಲ್ ಚಿಕ್ಕಬಳ್ಳಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ