ಚಿಕ್ಕಬಳ್ಳಾಪುರ ಜಿಲ್ಲಾ ಬಂದ್ಗೆ ಜೆಡಿಎಸ್ ಬೆಂಬಲ
Team Udayavani, Sep 27, 2020, 11:55 AM IST
ಚಿಕ್ಕಬಳ್ಳಾಪುರ: ಭೂಸುಧಾರಣೆ, ಕಾರ್ಮಿಕ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಿದೆ.
ಉದಯವಾಣಿಯೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಕೀಲ ಮುನೇಗೌಡ ಮಾತನಾಡಿ ರೈತರ,ಕೂಲಿ ಕಾರ್ಮಿಕರಿಗೆ ಮಾರಕವಾಗಿರುವ ಕಾಯ್ದೆಗಳನ್ನು ಜಾರಿಗೊಳಿಸಲು ಹೊರಟಿರುವ ಸರ್ಕಾರಗಳ ವಿರುದ್ಧ ರೈತ ಸಂಘಗಳು ಸಹಿತ ವಿವಿಧ ಸಂಘನೆಗಳು ಕರೆ ನೀಡಿರುವ ಬಂದ್ಗೆ ಜೆಡಿಎಸ್ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡುವ ಜೊತೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು ಮತ್ತು ಮತ್ತು ಕಾರ್ಯಕರ್ತರು ಹೋರಾಟದಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ರೈತ ಸಂಘಟನೆಗಳಿಂದ ರಾಜ್ಯ ಬಂದ್: ಕರಾವಳಿಯಲ್ಲೂ ಬೆಂಬಲ, ಏನಿರುತ್ತೇ- ಏನಿರಲ್ಲ?
ಭೂ ಸುಧಾರಣೆ ಕಾಯ್ದೆ ಕುರಿತು ಜೆಡಿಎಸ್ ಪಕ್ಷ ದ್ವಂದ್ವ ನಿಲುವು ಹೊಂದಿದೆಯೇ ಎಂಬ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಭೂ ಸುಧಾರಣೆ ಕಾಯ್ದೆ ಮತ್ತು ಕಾರ್ಮಿಕರ ತಿದ್ದುಪಡಿ ಕಾಯ್ದೆ ಕುರಿತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಳ್ಳುವ ತೀರ್ಮಾನಕ್ಕೆ ಬದ್ದ ಇರುವುದಾಗಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ