ಬರದಿಂದ ಕಂಗೆಟ್ಟಿದ್ದರೂ ನೆರೆ ಪರಿಹಾರ ನಿಧಿಗೆ 51.41 ಲಕ್ಷ ಕೊಟ್ಟ ಚಿಕ್ಕಬಳ್ಳಾಪುರ ಜನತೆ
ರಾಜ್ಯಕ್ಕೆ ಮಾದರಿಯಾಗಿ ನಿಂತ ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆ
Team Udayavani, Aug 22, 2019, 12:59 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಜನ ಬರದಿಂದ ಕಂಗೆಟ್ಟಿದ್ದರೂ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 51.41ಲಕ್ಷ ರೂ.ಗಳ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ಪ್ರತೀ ಗ್ರಾ.ಪಂ ವ್ಯಾಪ್ತಿಯಲ್ಲೂ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ದೇಣಿಗೆ ಸಂಗ್ರಹಿಸಿದಾಗ ಉದಾರವಾಗಿ ಸ್ಪಂದಿಸುವ ಮೂಲಕ ಇತರ ಜಿಲ್ಲೆಗಳಿಗೂ ಮಾದರಿಯಾಗಿದ್ದಾರೆ.
ಶಾಶ್ವತ ಬರಪೀಡಿತ ಜಿಲ್ಲೆಯಿಂದ ನೆರೆ ಪರಿಹಾರಕ್ಕಾಗಿ ಸಂಗ್ರಹವಾದ ಒಟ್ಟು ಹಣ 51.41 ಲಕ್ಷಗಳಾಗಿದ್ದರೆ, ಅದರಲ್ಲಿ ಸಾರ್ವಜನಿಕರು ನೀಡಿರುವ ಹಣವೇ 32.56 ಲಕ್ಷ ರೂ.ಗಳು. ಉಳಿದಂತೆ ಪಂಚಾಯಿತಿಗಳ ಸ್ವಂತ ಆದಾಯದಿಂದ ನೀಡಿದ ಹಣ 17.85 ಲಕ್ಷ ರೂ.ಗಳು.
ನೆರೆ ಪೀಡಿತ ಜನರ ಸಂಕಷ್ಟಕ್ಕೆ ಹೆಗಲು ನೀಡಿದ ಜಿಲ್ಲೆಯ ಜನತೆ ಮಾನವೀಯ ಗುಣಕ್ಕೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲಾಡಳಿತ, ನಗರಸಭೆ, ಪುರಸಭೆ, ಪಂಚಾಯಿತಿಗಳ ಜನಪ್ರತಿನಿಧಿಗಳು ಧೇಣಿಗೆ ಸಂಗ್ರಹಕ್ಕೆ ಕೈ ಜೋಡಿಸಿದ್ದು ಈ ಹಣವನ್ನು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ನೀಡಲಾಗುವುದೆಂದು ಜಿಪಂ ಅಧ್ಯಕ್ಷ ಹೆಚ್.ವಿ.ಮಂಜುನಾಥ ಉದಯವಾಣಿಗೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್, ಜಿಪಂ ನೂತನ ಸಿಇಒ ಬಿ.ಫೌಜಿಯಾ ತರುನ್ನಮ್ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ