Chikkaballapur: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿಕೆ
Team Udayavani, Sep 28, 2023, 7:52 PM IST
ಚಿಕ್ಕಬಳ್ಳಾಪುರ: ಕಾವೇರಿ ವಿಚಾರವಾಗಿ ಸೆ.29 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆ ಎಂದಿನಂತೆ ಶಾಲಾ, ಕಾಲೇಜುಗಳು ಕಾರ್ಯನಿರ್ವಹಿಸಲಿವಯೆಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸ್ಪಷ್ಪಪಡಿಸಿದ್ದಾರೆ.
ಈ ಕುರಿತು ತಮ್ಮನ್ನು ಉದಯವಾಣಿಗೆ ಪ್ರತಿಕ್ರಿಯೆ ನೀಡಿದ ಅವರು, ಶುಕ್ರವಾರ ಜಿಲ್ಲೆಯಲ್ಲಿ ಶಾಲಾ. ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದರು.
ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟದಲ್ಲಿ ಮಾತ್ರ ಕೆಲ ಕನ್ನಡಪರ ಸಂಘಟನೆಗಳು ಕಾವೇರಿ ವಿಚಾರವಾಗಿ ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ಘೋಷಿಸಿದ್ದು ಉಳಿದಂತೆ ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ಕರ್ನಾಟಕ ಬಂದ್ಗೆ ಬೆಂಬಲ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆಯಲ್ಲಿ ಕರ್ನಾಟಕ ಬಂದ್ ಆಚರಿಸುವ ನಿಟ್ಟಿನಲ್ಲಿ ಯಾವ ಸಂಘಟನೆಗಳು ಇನ್ನೂ ಮುಂದೆ ಬಂದಿಲ್ಲ.