Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಮಂಜುನಾಥ ಸೇರಿ ಇಬ್ಬರು ಬಾಲಕರ ಜಲಸಮಾಧಿ
Team Udayavani, Apr 30, 2024, 8:49 PM IST
ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಬ್ಲೂಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಪನಹಳ್ಳಿ ಗ್ರಾಮದಲ್ಲಿ ಏ. 30ರ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತ ಬಾಲಕರನ್ನು ಗ್ರಾಮದ ಸುಬ್ರಮಣಿ ಮತ್ತು ಗೌರಮ್ಮ ದಂಪತಿಯ ಪುತ್ರ ನಿತಿನ್ ಕುಮಾರ್ (15) ಹಾಗೂ ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಅಂಗರೇಖನಹಳ್ಳಿ ಗ್ರಾಮದ ಹನುಮಂತಪ್ಪ-ಪದ್ಮ ದಂಪತಿಯ ಪುತ್ರ ಮಂಜುನಾಥ್ (16) ಎಂದು ಗುರುತಿಸಲಾಗಿದೆ.
ನಿತಿನ್ ಕುಮಾರ್ ಹಾಗೂ ಮಂಜುನಾಥ ಇಬ್ಬರು ಕೃಷಿ ಹೊಂಡದಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಇಬ್ಬರು ಹೊಂಡದ ಆಳಕ್ಕೆ ಇಳಿದಿದ್ದು, ಈಜಿ ಹೊರ ಬರಲು ಆಗದೇ ಮುಳುಗಿದ್ದಾರೆ.
ಇದನ್ನು ನೋಡಿ ಮತ್ತೊಬ್ಬ ಯುವಕ ಬಾಲಕರ ಮನೆಗೆ ತೆರಳಿ ಘಟನೆಯ ಬಗ್ಗೆ ತಿಳಿಸಿದ ನಂತರ ಪೋಷಕರು ಸ್ಥಳಕ್ಕೆ ಆಗಮಿಸುವ ವೇಳೆಗೆ ಇಬ್ಬರು ಹೊಂಡದಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಆಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಇಬ್ಬರು ಬಾಲಕರ ಮೃತ ದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸ್ ಎಂ, ಗ್ರಾಮಾಂತರ ಪಿಎಸ್ ಐ ಸತೀಶ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!