ಚಿಕ್ಕಬಳ್ಳಾಪುರ: ಬಸ್ ನಲ್ಲಿ ಪ್ರತ್ಯಕ್ಷವಾದ ನಾಗರಹಾವು; ಬೆಚ್ಚಿ ಕೆಳಗಿಳಿದ ಪ್ರಯಾಣಿಕರು
Team Udayavani, Aug 27, 2022, 6:22 PM IST
ಚಿಕ್ಕಬಳ್ಳಾಪುರ: ನಗರದಲ್ಲಿ ಗ್ರಾಮಾಂತರ ಸಾರಿಗೆ ಬಸ್ನಲ್ಲಿ ನಾಗರ ಹಾವೊಂದು ಪ್ರತ್ಯಕ್ಷವಾಗಿದ್ದು, ಪ್ರಯಾಣಿಕರೆಲ್ಲರೂ ಆತಂಕದಿಂದ ಬಸ್ನಿಂದ ಕೆಳಗಿಳಿದ ಘಟನೆ ಶನಿವಾರ ನಡೆದಿದೆ.
ಚಿಕ್ಕಬಳ್ಳಾಪುರದಿಂದ ಶಿಡ್ಲಘಟ್ಟ ಕಡೆಗೆ ತೆರಳುತ್ತಿದ್ದ ಗ್ರಾಮಾಂತರ ಸಾರಿಗೆ ಬಸ್ನಲ್ಲಿ ಹಾವು ಕಾಣಿಸಿಕೊಂಡ ತತ್ ಕ್ಣಣ ಬಸ್ ನಿಲ್ಲಿಸಿ ಚಾಲಕ,ನಿರ್ವಾಹಕ ಹಾಗೂ ಪ್ರಯಾಣಿಕರು ಹಾವಿಗಾಗಿ ಹುಡುಕಾಟ ನಡೆಸಿದ್ದಾರೆ.
ಹಾವು ಹಿಡಿಯುವ ಪರಿಣಿತರನ್ನು ಚಿಕ್ಕಬಳ್ಳಾಪುರ ಡಿಪೋ ವ್ಯವಸ್ಥಾಪಕರು ಕರೆಸಿ ಬಸ್ಸಿನ ಹೆಡ್ಲೈಟ್ ಒಳಗೆ ಅವಿತುಕೊಂಡಿದ್ದ ಹಾವನ್ನು ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹಾವ ಹಿಡಿದ ಬಳಿಕ ಬಸ್ ಶಿಡ್ಲಘಟ್ಟ ಮಾರ್ಗ ದತ್ತ ಸಂಚರಿಸಿದೆ ಎಂದು ಡಿಪೋ ವ್ಯವಸ್ಥಾಪಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ