ಬಾರದ 108, ಹೊಂಡಕ್ಕೆ ಬಿದ್ದ ಮಕ್ಕಳಿಬ್ಬರು ಸಾವು ; ಆಸ್ಪತ್ರೆಯಲ್ಲಿ ಯುವಕರಿಂದ ದಾಂಧಲೆ


Team Udayavani, Jan 25, 2021, 5:09 PM IST

ಬಾರದ 108, ಹೊಂಡಕ್ಕೆ ಬಿದ್ದ ಮಕ್ಕಳಿಬ್ಬರು ಸಾವು ; ಆಸ್ಪತ್ರೆಯಲ್ಲಿ ಯುವಕರಿಂದ ದಾಂಧಲೆ

ಚಿಂತಾಮಣಿ: ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದ ಇಬ್ಬರು ಬಾಲಕರನ್ನು ಪೋಷಕರು ಮೇಲೆತ್ತಿ 108 ಕರೆ ಮಾಡಿ ಗಂಟೆಗಳೇ ಕಳೆದರೂ ಬಾರದ ಕಾರಣ ಹಳೆ ಟೆಂಪೋದಲ್ಲಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಟೆಂಪೋ ಕೆಟ್ಟು ನಿಂತಿದ್ದು, ಬೇಗನೇ ತಪಾಸಣೆ ಮಾಡಿದ್ದರೆ ಮಕ್ಕಳು ಬದುಕುತ್ತಿದ್ದರು. 108 ಬಾರದಿರುವುದು ಹಾಗೂ ವೈದ್ಯರ ನಿರ್ಲಕ್ಷ್ಯವೇ ಮಕ್ಕಳ ಸಾವಿಗೆ ಕಾರಣ ಎಂದು ಪೋಷಕರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ಮೂಗಲ ಮರಿಯ ಶಿವರಾಜ್‌ ಅವರ ಮಗ ಚರಣ್‌(10) ಮತ್ತು ರಾಮಾಂಜಿ ಅವರ ಮಗ ತೇಜಸ್‌ (11) ಮೃತರು.

ಆಗಿದ್ದೇನು?: ತಾಲೂಕಿನ ಮೂಗಲಮರಿ ಗ್ರಾಮದ ಹೊರ ವಲಯ ದಲ್ಲಿಯ ಕೃಷಿ ಹೊಂಡಕ್ಕೆ ಮಕ್ಕಳು ಬಿದ್ದಿದ್ದರು. 108
ಬರದಿದ್ದರಿಂದ ಟೆಂಪೋದಲ್ಲಿ ಕರೆದ್ಯೊಯುತ್ತಿದ್ದ ವೇಳೆ ಕೆಟ್ಟು ನಿಂತಿದ್ದು, ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ತಲುಪಿದ ವೇಳೆ
ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮದ ಯುವಕರು ನಗರದ ಸಾರ್ವಜನಿಕ ಆಸ್ಪತ್ರೆಯ ಕಿಟಕಿ, ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ್ಯಂತರ ರೂ. ವೆಚ್ಚ ಮಾಡಿ ತುರ್ತು ಸೇವೆಗೆಂದು ಸರ್ಕಾರ ನೇಮಿಸಿರುವ 108 ವಾಹನಗಳು ತಾಲೂಕಿನಲ್ಲಿ ಬಹಳ ಮಂದಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಹಲವು ಪ್ರಾಣಹಾನಿ ಆಗಿರುವ ಪ್ರಸಂಗಗಳು ಹೆಚ್ಚಿವೆ.

ಇದನ್ನೂ ಓದಿ:ಕೆಜಿಎಫ್: ಮೂರ್ತಿ ಭಂಜನ, ಕತ್ತಿ ಹಿಡಿದು ತಿರುಗಿದ ದುಷ್ಕರ್ಮಿ

ಆಸ್ಪತ್ರೆಯಿಂದ ಕ್ಷಣಾರ್ಧದಲ್ಲಿ ನಾಪತ್ತೆ
ಮಕ್ಕಳನ್ನು ಆಸ್ಪತ್ರೆಗೆ ಕರೆ ತಂದಾಗ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮದ ಯುವಕರು, ಆಸ್ಪತ್ರೆಯ ಕಿಟಕಿ ಬಾಗಿಲುಗಳ ಗಾಜು ಮತ್ತು ಸಹಾಯವಾಣಿ ಕೇಂದ್ರದ ಗಾಜುಗಳನ್ನು ಒಡೆದು ವೈದ್ಯರನ್ನು ಯುವಕರು ನಿಂದಿಸಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ಆಸ್ಪತ್ರೆಯಿಂದ ಹೊರಟು ಹೋಗಿದ್ದಾರೆಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರು.

ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ರಿಪೇರಿ
ದಾಂಧಲೆ ನಡೆಸಿದ ಯುವಕರನ್ನು ಪತ್ತೆ ಹಚ್ಚಲು ಪೊಲೀಸರು ಆಸ್ಪತ್ರೆಯ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಸಿಸಿ ಕ್ಯಾಮೆರಾ ಕೆಟ್ಟಿರುವುದು ಬೆಳಕಿಗೆ ಬಂದಿದೆ. ಇದು ಆಸ್ಪತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಕುರಿತು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

108 ಇರುವುದೇ ಮೂರು, ಒಂದು ಕೆಟ್ಟಿದೆ
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂತೋಷ್‌, ತಾಲೂಕಿನಲ್ಲಿ 108 ವಾಹನಗಳು ಇರುವುದು ಮೂರು. ಅದರಲ್ಲಿ ಒಂದು ಕೆಟ್ಟಿರುವುದರಿಂದ ಉಳಿದವುಗಳಿಗೆ ಬಿಡುವಿರುವುದಿಲ್ಲ. ಯಾವುದೇ ಕರೆಗೆ ಸ್ಪಂದಿಸಿ ಅಲ್ಲಿಗೆ ತೆರಳಬೇಕಾದರೆ ತಡವಾಗುತ್ತದೆ. ಆ್ಯಂಬುಲೆನ್ಸ್‌ ಬಾರದ ಕೋಪಕ್ಕೆ ಆಸ್ಪತ್ರೆಯ ಮೇಲೆ ದಾಳಿ ಮಾಡಿರುವುದು ಸರಿಯಲ್ಲ. ಮುಳಬಾಗಿಲಿನಲ್ಲಿ ಏಳು 108 ವಾಹನಗಳಿವೆ. ಆದರೆ ನಮ್ಮ ತಾಲೂಕಿಗೆ ಕೇವಲ ಮೂರೇ ಮೂರು ವಾಹನಗಳಿರುವುದು ದುರದೃಷ್ಟಕರ.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.