ಚಿಕ್ಕಬಳ್ಳಾಪುರ: 5 ಕೋಟಿ 93 ಲಕ್ಷ ತೆರಿಗೆ ವಸೂಲಿ ಗುರಿ
ಪೌರಾಯುಕ್ತ ಡಿ. ಲೋಹಿತ್ ನೇತೃತ್ವದಲ್ಲಿ ತೆರಿಗೆ ಸಂಗ್ರಹ ಅಭಿಯಾನ
Team Udayavani, Sep 29, 2020, 10:17 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರವನ್ನು ರಾಜ್ಯದಲ್ಲಿ ಮಾದರಿ ಮಾಡಲು ಪಣ ತೊಟ್ಟಿರುವ ನಗರಸಭೆಯ ಅಧಿಕಾರಿಗಳು ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡುವ ಜೊತೆಗೆ ನಗರಾಭಿವೃಧ್ಧಿಗಾಗಿ ತೆರಿಗೆ ಸಂಗ್ರಹ ಅಭಿಯಾನವನ್ನು ಆರಂಭಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ 5 ಕೋಟಿ 93 ಲಕ್ಷ ವಸೂಲಿ ಮಾಡುವ ಗುರಿ ಹಾಕಿಕೊಂಡು ಈಗಾಗಲೇ 2 ಕೋಟಿ 60 ಲಕ್ಷ ರೂಗಳು ಸಂಗ್ರಹ ಮಾಡುವುದರಲ್ಲಿ ನಗರಸಭೆಯ ಪೌರಾಯುಕ್ತ ಲೋಹಿತ್ ಅವರ ನೇತೃತ್ವದ ನಗರಸಭೆಯ ಅಧಿಕಾರಿಗಳ ತಂಡ ಸಫಲವಾಗಿದೆ ನಗರದ 27ನೇ ವಾರ್ಡಿನಲ್ಲಿ ತೆರಿಗೆ ವಸೂಲಿ ಅಭಿಯಾನ ನಡೆಸಿ ಸುಮಾರು 4 ಲಕ್ಷ ರೂಗಳನ್ನು ಸಂಗ್ರಹ ಮಾಡಿದ್ದಾರೆ.
ಮೂರು ಮನೆಗಳ ನೀರು ಸಂಪರ್ಕ ಕಡಿತ: ನಗರದ 27ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ತೆರಿಗೆ ಅಭಿಯಾನ ನಡೆಸಿ ತೆರಿಗೆ ಪಾವತಿಸದ ನಾಗರಿಕರಿಗೆ ನೋಟಿಸ್ ಜಾರಿಗೊಳಿಸಿ ನೀರು ಶುಲ್ಕವನ್ನು ಪಾವತಿಸದ ಮೂರು ಮನೆಗಳ ನೀರಿನ ಸಂಪರ್ಕ ಕಡಿತಗೊಳಿಸಿ ಶಾಕ್ ನೀಡಿದ್ದಾರೆ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಮಾತ್ರವಲ್ಲದೇ, ನೀರಿನ ಶುಲ್ಕ ಹಾಗೂ ಆಸ್ತಿ ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿ ನಗರಾಭಿವೃಧ್ಧಿಗೆ ಸಹರಿಕರಿಸಬೇಕೆಂದು ನಗರಸಭೆಯ ಪೌರಾಯುಕ್ತ ಡಿ.ಲೋಹಿತ್ ಮನವಿ ಮಾಡಿದ್ದಾರೆ
ನಗರಸಭೆಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ 4 ಕೋಟಿ 58 ಲಕ್ಷ ರೂಗಳು ವಸೂಲಿ ಮಾಡುವ ಗುರಿ ಹೊಂದಿ ಈಗಾಗಲೇ 2 ಕೋಟಿ 10 ಲಕ್ಷ ರೂಗಳು ವಸೂಲಿ ಮಾಡಲಾಗಿದೆ ಕುಡಿಯುವ ನೀರು ತೆರಿಗೆ 1 ಕೋಟಿ 31 ಲಕ್ಷ ರೂಗಳು ವಸೂಲಿ ಮಾಡುವ ಗುರಿ ಹೊಂದಿದ್ದು 50 ಲಕ್ಷ ರೂಗಳು ವಸೂಲಿಯಾಗಿದೆ ಎಂದು ಪೌರಾಯುಕ್ತರು ಉದಯವಾಣಿಗೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆರ್.ಲತಾ ಅವರ ಮಾರ್ಗದರ್ಶನದಲ್ಲಿ ನಗರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಕಸಕಡ್ಡಿಗಳ ವಿಲೇವಾರಿ ಮಾಡಲು ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಇದರ ಜೊತೆಗೆ ನಗರವನ್ನು ಸ್ವಚ್ಛ ಮತ್ತು ಹಸಿರುಮಯ ಮಾಡಲು ಕಾರ್ಯಪ್ರವೃತರಾಗಿದ್ದಾರೆ.
ರಾಜ್ಯದಲ್ಲಿ ಚಿಕ್ಕಬಳ್ಳಾಪುರ ನಗರವನ್ನು ಮಾದರಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಸೂಚನೆ ಮೇರೆಗೆ ನಗರಸಭೆಯ ವ್ಯಾಪ್ತಿಯಲ್ಲಿ ವಾರ್ಡ್ಗಳ ಅಭಿವೃಧ್ಧಿಗಾಗಿ ನಾಗರಿಕ ಸಮಿತಿಗಳನ್ನು ಸಹ ರಚಿಸಿ ಅವರಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆದುಕೊಳ್ಳಲು ನಗರಸಭೆಯ ಅಧಿಕಾರಿಗಳು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ