ಪ್ರತಿ ತಾಲೂಕಿಗೆ 25 ಲಕ Ò “ನೀರನುದಾನ’


Team Udayavani, Apr 11, 2021, 5:58 PM IST

11-19

ಸಂದೀಪ ಜಿ.ಎನ್‌. ಶೇಡ್ಗಾರ್‌

ಚಿಕ್ಕಮಗಳೂರು: ಬೇಸಿಗೆ ಕಾಲ ಆರಂಭವಾಗಿದ್ದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಕುಡಿಯುವ ನೀರಿನ ನಿರ್ವಹಣೆಗಾಗಿ ಪ್ರತಿ ತಾಲೂಕಿಗೆ 25 ಲಕ್ಷ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

2017-18ರಲ್ಲಿ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಿಂದ ಜಿಲ್ಲೆ ನಲುಗಿ ಹೋಗಿತ್ತು. ಬರ ಪರಿಸ್ಥಿತಿಯನ್ನು ಜಿಲ್ಲಾಡಳಿತ ಸಮರ್ಥವಾಗಿ ಎದುರಿಸಿತ್ತು. ಅಂತಹ ಪರಿಸ್ಥಿತಿ ಮತ್ತೆ ಜಿಲ್ಲೆಯಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಬಹುತೇಕ ಕುಡಿಯುವ ನೀರಿನ ಸಮಸ್ಯೆ ಎದುರಾಗ ಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಜಿಲ್ಲಾಡಳಿತ ಗುರುತಿಸಿದೆ.

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಮತ್ತು ಕಸಬಾ ಹೋಬಳಿ (ಚಿಕ್ಕಮಗಳೂರು), ಕಡೂರು ತಾಲೂಕಿನ ಸಖರಾಯಪಟ್ಟಣ, ಸಿಂಗಟಗೆರೆ ಹಾಗೂ ಪಂಚನಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು, ಮೂಡಿಗೆರೆ ತಾಲೂಕಿನ ಬಾಳೂರು, ತರೀಕೆರೆ ತಾಲೂಕಿನ ಕೆಲವು ಗ್ರಾಮಗಳು, ಅಜ್ಜಂಪುರ ತಾಲೂಕಿನ ಶಿವನಿ, ಕೂಡ್ಲರು ವ್ಯಾಪ್ತಿಯ ಗ್ರಾಮಗಳು, ಶೃಂಗೇರಿ ತಾಲೂಕಿನ ಕಿಗ್ಗಾ ಹಾಗೂ ನರಸಿಂಹರಾಜಪುರ ತಾಲೂಕಿನ ಕಸಬಾ (ಬಾಳೆಹೊನ್ನೂರು) ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಈಗಾಗಲೇ ಗುರುತಿಸಿದೆ.

ಝರಿ ಪ್ರದೇಶದಿಂದ ಬರುವ ನೀರಿನ ಲಭ್ಯತೆ ಕಡಿಮೆಯಾಗುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹಾಗೂ ಚಿಕ್ಕಮಗಳೂರು ಹಾಗೂ ಖಾಂಡ್ಯ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡುವ ದೃಷ್ಟಿಯಿಂದ ಜಿಲ್ಲಾಡಳಿತ ಸಕಲ ಸಿದ್ಧತೆಗಳಿಗೆ ಮುಂದಾಗಿದೆ.

ಕುಡಿಯುವ ನೀರಿಗೆ ಕ್ರಿಯಾಯೋಜನೆ: ಬೇಸಿಗೆಯ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಈ ವರ್ಷ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕೈಗೊಂಡಿರುವ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಮುಂಚಿತವಾಗಿಯೇ ಪ್ರತೀ ತಾಲೂಕಿಗೆ ಕುಡಿಯುವ ನೀರಿನ ನಿರ್ವಹಣೆಗೆ 25 ಲಕ್ಷ ರೂ. ನೀಡಲಾಗಿದೆ.

265 ಗ್ರಾಮಗಳಲ್ಲಿ ಸಮಸ್ಯೆ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಅವುಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ 24 ಗ್ರಾಪಂನ 64ಜನವಸತಿ ಪ್ರದೇಶ, ಕಡೂರು ತಾಲೂಕಿನ 21 ಗ್ರಾಪಂನ 37ಜನವಸತಿ ಪ್ರದೇಶ, ಕೊಪ್ಪ ತಾಲೂಕಿನ 7 ಗ್ರಾಪಂನ 7 ಜನವಸತಿ ಪ್ರದೇಶ, ಮೂಡಿಗೆರೆ ತಾಲೂಕಿನ 19 ಗ್ರಾಪಂನ 27 ಜನವಸತಿ ಪ್ರದೇಶ, ನರಸಿಂಹರಾಜಪುರ ತಾಲೂಕಿನ 13 ಗ್ರಾಪಂನ 67 ಜನವಸತಿ ಪ್ರದೇಶ, ಶೃಂಗೇರಿ ತಾಲೂಕಿನ 7 ಗ್ರಾಪಂನ 13 ಜನವಸತಿ ಪ್ರದೇಶ ಹಾಗೂ ತರೀಕೆರೆ ತಾಲೂಕಿನ 21 ಗ್ರಾಪಂನ 50 ಜನವಸತಿ ಪ್ರದೇಶ ಸೇರಿದಂತೆ 265 ಜನವಸತಿ ಪ್ರದೇಶವನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ.

ಅನುದಾನಕ್ಕಾಗಿ ಪತ್ರ ವ್ಯವಹಾರ: ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕುಡಿಯುವ ನೀರಿನ ಸಮಸ್ಯೆ ಅಷ್ಟಾಗಿ ಉಲ½ಣಿಸಿರಲಿಲ್ಲ. ಈ ವರ್ಷವೂ ಕುಡಿಯುವ ನೀರಿನ ಸಮಸ್ಯೆ ಇದುವರೆಗೂ ಉಲ½ಣಿಸಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಏನಾದರೂ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಅನುದಾನ ನೀಡುವಂತೆ ಸರ್ಕಾರದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ.

ಟ್ಯಾಂಕರ್‌ ಸೌಲಭ್ಯಕ್ಕೆ ಸಿದ್ಧತೆ: 2018ರಲ್ಲಿ ಜಿಲ್ಲೆಯ 85 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲಣವಾದ ಹಿನ್ನೆಲೆಯಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಳ್ಳಲಾಗಿತ್ತು. ಈ ವರ್ಷವೂ ಅಗತ್ಯ ಬಿದ್ದಲ್ಲಿ ಟ್ಯಾಂಕರ್‌ ಮತ್ತು ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದುಕೊಳ್ಳುವ ಚಿಂತನೆ ನಡೆಸಿದ್ದು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಟಾಸ್ಕ್ಫೋರ್ಸ್‌ ಸಮಿತಿ: ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಮರ್ಥವಾಗಿ ನಿರ್ವಹಿಸಲು ಆರ್‌ಡಿಪಿಆರ್‌ ಮತ್ತು ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಆರ್‌ಡಿಪಿಆರ್‌ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ತಾಪಂ ಸಿಇಒ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದರೆ, ಜಿಲ್ಲಾ ಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ಜಿಪಂ ಸಿಇಒ, ತಹಶೀಲ್ದಾರ್‌ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದೆ. ಆಯಾ ಗ್ರಾಪಂ ಅಭಿವೃದ್ಧಿ ಅ ಧಿಕಾರಿಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.