ಕಾನೂನು ಸೇವಾ ಪ್ರಾಧಿಕಾರದ ಸದ್ಬಳಕೆ ಅಗತ್ಯ

ವಿದ್ಯಾರ್ಥಿಗಳಿಗೆ ಹಿರಿಯ ಸಿವಿಲ್‌ ನ್ಯಾಯಾಧೀಶ ಬಸವರಾಜ್‌ ಚೇಂಗಟಿ ಸಲಹೆ

Team Udayavani, Feb 7, 2020, 3:21 PM IST

7-February-17

ಚಿಕ್ಕಮಗಳೂರು: ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ತಿಳಿವಳಿಕೆ ಹಾಗೂ ನೆರವು ನೀಡುವ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ಕಾನೂನು ಸೇವೆಗಳ ಪ್ರಾಧಿಕಾರವಿದೆ. ಎಲ್ಲರೂ ಅದರ ಸದುಪಯೋಗ ಮಾಡಿಕೊಳ್ಳಬೇಕೆಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ ಹೇಳಿದರು.

ನಗರದ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಾಬ್‌ಸೆಟ್‌ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ಆರ್ಥಿಕವಾಗಿ ದುರ್ಬಲನಾದಾಗ ಶೋಷಣೆಗೆ ಒಳಗಾಗುವುದು ಸಾಮಾನ್ಯ. ಆದ್ದರಿಂದ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳುವ ಯೋಜನೆ ರೂಪಿಸಿಕೊಳ್ಳಬೇಕು. ಸಮಾನತೆ, ಸಹಬಾಳ್ವೆಯಿಂದ ಬದುಕಲು ಕಾನೂನು ತಿಳಿವಳಿಕೆಯೂ ಬೇಕು ಎಂದರು.

ಕಾನೂನು ಸರ್ವವ್ಯಾಪಿ ಸಂಗತಿಯಾಗಿದ್ದು, ಧರ್ಮ ಇರುವ ಜಾಗದಲ್ಲಿ ಕಾನೂನು ನಿಯಮಗಳಿಗೆ ಮಾನ್ಯತೆ ದೊರಕಿದೆ. ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವಂತೆ ಕಾನೂನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಬಡವನಾಗಿ ಹುಟ್ಟುವುದು ತಪ್ಪಲ್ಲ. ಆದರೆ, ಆದರ್ಶವಿಲ್ಲದೇ ಯಾವುದೇ ಸಾಧನೆ ಮಾಡದೇ ಸಾವನ್ನಪ್ಪಿದರೆ ಅದು ಅವಮಾನ. ಉನ್ನತ ಗುರಿಯನ್ನಿಟ್ಟುಕೊಂಡು ಸತತ ಪರಿಶ್ರಮದ ಮೂಲಕ ಸಾಧನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

12ನೇ ಶತಮಾನದಲ್ಲಿ ಬಸವಣ್ಣನವರ ವಚನಗಳಲ್ಲಿ ಕಾನೂನುಗಳ ಉಲ್ಲೇಖವಿದೆ. ಕಳ್ಳತನ ಮಾಡುವುದು, ಸುಳ್ಳು, ಮೋಸ, ವಂಚನೆ ಕಾನೂನಿನಡಿ ಅಪರಾಧ. ಅವುಗಳನ್ನು ಮಾಡದೇ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು. ನಕಾರಾತ್ಮಕ ಚಿಂತನೆಗಳು, ಕೀಳರಿಮೆ ಮನೋಭಾವ ಬಿಟ್ಟು ದೃಢ ವಿಶ್ವಾಸದಿಂದ ಗುರಿಯೆಡೆಗೆ ತಲುಪಬೇಕು ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಖಜಾಂಚಿ ಕೆ.ಸುರೇಶ್‌ ಮಾತನಾಡಿ, ಶಿಬಿರಾರ್ಥಿಗಳು ಆರ್ಥಿಕವಾಗಿ ಸಬಲರಾಗಬೇಕು. ಬ್ಯಾಂಕು, ಸಂಘ-ಸಂಸ್ಥೆಗಳಲ್ಲಿ ಸಾಲ ಪಡೆಯುವಾಗ ಕೆಲವೊಂದು ನಿಯಮಗಳಿರುತ್ತವೆ. ಅವುಗಳ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು. ಮನುಷ್ಯನಲ್ಲಿ ಮಾನವೀಯತೆ ಮರೆಯಾದಾಗ ಅಪರಾಧಗಳು ನಡೆಯುತ್ತವೆ.

ಅಪರಾಧಗಳಾಗುವುದನ್ನು ತಪ್ಪಿಸಲು ಪ್ರತಿಯೊಬ್ಬರು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾಬ್‌ಸೆಟ್‌ ಸಂಸ್ಥೆಯ ನಿರ್ದೇಶಕ ರಮೇಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರಿಗೆ ಸರ್ಕಾರಿ ಕೆಲಸ ಸಿಗುವುದು ಕಷ್ಟಸಾಧ್ಯ. ಹಾಗಾಗಿ ಸರ್ಕಾರಿ ನೌಕರಿ ಸಿಗಲಿಲ್ಲವೆಂದು ಯಾರು ಧೃತಿಗೆಡಬಾರದು. ದೃಢ ಮನಸ್ಸಿನಿಂದ ಸ್ವ-ಉದ್ಯೋಗ ಕೈಗೊಂಡು ದೊಡ್ಡ ಸಾಧನೆ ಮಾಡಬೇಕೆಂದು ಹೇಳಿದರು.

ಕೈಗಾರಿಕಾ ತರಬೇತಿ ಕೆಂದ್ರದ ನಿವೃತ್ತ ಉಪನಿರ್ದೇಶಕ ರಿಯಾಜ್‌ ಅಹಮ್ಮದ್‌ ಎನ್‌ಎಎಲ್‌ಎಸ್‌ಎ(ಬಡತನ ನಿವಾರಣೆ) ಯೋಜನೆ ಕುರಿತು ಮತ್ತು ವಕೀಲ ಹಾಗೂ ಬಾಲ ನ್ಯಾಯ ಮಂಡಳಿ ಸದಸ್ಯಎಚ್‌.ಸಿ.ನಟರಾಜ್‌ ಮಕ್ಕಳ ಕಲ್ಯಾಣ ಮತ್ತು ಬಾಲ ನ್ಯಾಯ ಮಂಡಳಿಯಲ್ಲಿನ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಎಸ್‌. ಶಿವಕುಮಾರ್‌, ವಕೀಲ ರುದ್ರಪ್ಪ, ಉಪನ್ಯಾಸಕ ರವಿಚಂದ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.