ಕೆರೆಯಾಗಿ ಬದಲಾದ ಮಕ್ಕಳ ಆಟದ ಪಾರ್ಕ್
Team Udayavani, Oct 23, 2021, 6:29 PM IST
ಗುಡಿಬಂಡೆ: ಪಟ್ಟಣದ ಹನ್ನೊಂದನೇ ವಾರ್ಡ್ನ ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ.
ಪಟ್ಟಣದಲ್ಲಿ ಒಟ್ಟು 7 ಪಾರ್ಕ್ಗಳಿದ್ದು, ಅವುಗಳಲ್ಲಿ ನಾರೆಪ್ಪ ಬಡಾವಣೆಯ ಪಾರ್ಕ್ನ ಅಭಿವೃದ್ಧಿಗಾಗಿ ಒಂದಷ್ಟು ಹಣವನ್ನು ವ್ಯಯ ಮಾಡಿ ಅಭಿವೃದ್ಧಿ ಮಾಡಿದ್ದರು, ನಂತರ ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ 2016-17ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಲ್ಲಿ ಸುಮಾರು 7.82 ಲಕ್ಷ ವೆಚ್ಚ ಮಾಡಿ ಪಾರ್ಕ್ಗೆ ಗೇಟ್ ಹಾಗೂ ಉಳಿಕೆ ಭಾಗದ ಕಾಂಪೌಂಡ್ ನಿರ್ಮಾಣಕ್ಕೆ ಖರ್ಚು ಮಾಡಿ ಅಭಿವೃದ್ದಿ ಮಾಡಲಾಗಿತ್ತು.
ಈಗ ಇದೇ ಪಾರ್ಕ್ನಲ್ಲಿ ಮಕ್ಕಳ ಆಟಿಕೆಗಾಗಿ ಸುಮಾರು 16.00 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಿ ಆಟಿಕೆ ಪರಿಕರಗಳನ್ನು ಹಾಕಿ, ರ್ಯಾಂಪ್ ವಾಕ್ ನಿರ್ಮಾಣ ಮಾಡಿ, ಕುರ್ಚಿಗಳನ್ನು ಹಾಕಿ, ಪಾರ್ಕ್ನ್ನು ಅಭಿವೃದ್ಧಿ ಮಾಡಿರುತ್ತಾರೆ.
ಮಳೆಯಿಂದ ಈ ಪಾರ್ಕ್ನಲ್ಲಿ ಮಳೆ ನೀರು ಹೊರಗೆ ಹೋಗಲು ದಾರಿಯಿಲ್ಲದೆ ಅಲ್ಲೆ ನಿಂತು ಕೆರೆಯಾಗಿ ಮಾರ್ಪಾಟಾಗಿದೆ.
ಅವೈಜ್ಞಾನಿಕವಾಗಿ ನಿರ್ಮಾಣ
ನಾರೆಪ್ಪ ಬಡಾವಣೆಯ ಪಾರ್ಕ್ನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಪಾರ್ಕ್ನಲ್ಲಿ ಈ ಹಿಂದೆ ಸುಮಾರು ಹಣವನ್ನು ವ್ಯಯ ಮಾಡಿ ಎರಡು ಇಂಗು ಗುಂಡಿಯನ್ನು ಸಹ ನಿರ್ಮಾಣ ಮಾಡಿದ್ದರು, ಅದರೆ ಇದನ್ನು ಪಾರ್ಕ್ನ ಅಭಿವೃದ್ಧಿಯ ದೃಷ್ಟಿಯಿಂದ ಮುಚ್ಚಿ ಹಾಕಿದ್ದು, ಇದ್ದ ಒಂದು ಗುಂಡಿಯು ಸರಿಯಾಗಿ ನಿರ್ಮಾಣ ಮಾಡದೆ ಇರುವುದರಿಂದ ಮಳೆ ನೀರು ಅಲ್ಲಿ ಇಂಗುತ್ತಿಲ್ಲ, ಹಾಗೂ ಮಳೆ ನೀರು ಹೊರಗೆ ಹೋಗದೆ ಕೆರೆಯಂತಾಗಿದೆ ಎಂದು ಸ್ಥಳಿಯರು ದೂರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್, ಬ್ಯಾನರ್ ತೆರವು!
H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ
LokSabha Election: ಕ್ಲೈಮ್ಯಾಕ್ಸ್ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!
Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್
Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ