ಕಡಲೇಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ


Team Udayavani, Dec 16, 2019, 3:00 AM IST

kadalekayi

ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಆದಿಚುಂಚನಗಿರಿ ಶಾಖಾ ಮಠದ ಎದುರು ನೆಲೆಸಿರುವ ಶ್ರೀ ವೀರಾಂಜನೆಯಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಡಲೇ ಕಾಯಿ ಪರಿಷೆ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಭವ್ಯ ಪಲ್ಲಕ್ಕಿ ಮೆರವಣಿಗೆ: ಕಡಲೇ ಕಾಯಿ ಪರಿಷೆ ಪ್ರಯುಕ್ತ ಮೊದಲು ಜಡಲತಿಮ್ಮನಹಳ್ಳಿ ಗ್ರಾಮದಿಂದ ವೀರಾಂಜನೇಯ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಭವ್ಯ ಮುತ್ತಿನ ಪಲ್ಲಕ್ಕಿಯೊಂದಿಗೆ ಬೆಂಗಳೂರು ರಸ್ತೆಯ ಮೂಲಕ ವೀರಗಾಸೆ, ಡೊಳ್ಳುಕುಣಿತ, ಪೂಜಾ ಕುಣಿತ ಮತ್ತಿತರ ಸಾಂಸ್ಕೃತಿಕ ಕಲಾ ಮೇಳಗಳೊಂದಿಗೆ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಮುಂಭಾಗದಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯದವರೆಗೂ ಶ್ರದ್ಧಾಭಕ್ತಿಯ ನಡುವೆ ಭವ್ಯ ಮೆರವಣಿಗೆ ನಡೆಸಲಾಯಿತು.

ರಥೋತ್ಸವಕ್ಕೆ ಶ್ರೀಗಳ ಚಾಲನೆ: ಈ ವೇಳೆ ಮುತ್ತಿನ ಪಲ್ಲಕ್ಕಿಯಲ್ಲಿ ತಂದಿದ್ದ ವೀರಾಂಜನೇಯಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ ಆದಿಚುಂಚನಗರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ವೇಳೆ ವೀರಾಂಜನೇಯಸ್ವಾಮಿ ಆಲಯ ಸುತ್ತ ರಥೋತ್ಸವ ಸಾಗಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ವೀರಾಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು.

ಜಾತ್ರೆಯಲ್ಲಿ ಹರಿದ ಸಂಗೀತ ಸುಧೆ: ಕಡಲೇ ಕಾಯಿ ಜಾತ್ರೆ ಹಾಗೂ ವೀರಾಂಜನೇಯಸ್ವಾಮಿ ದೇವರ ಉತ್ಸವದ ಪ್ರಯುಕ್ತ ವಿಶೇಷ ಸಾಂಸ್ಕೃತಿಕ ಹಾಗೂ ಸಂಗೀತ ಗಾಯನ ಕಚೇರಿ ನಡೆಯಿತು. ಬಿಜಿಎಸ್‌ ಸಾಂಸ್ಕೃತಿಕ ಕಲಾ ವೇದಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕೀರ್ತಿನಾಥ ಸ್ವಾಮೀಜಿ ಮತ್ತು ತಂಡದವರಿಂದ ಹಾಗೂ ಸುನಾದ ಸುಗಮ ಸಂಗೀತ ಮತ್ತು ಕಲಾ ಸಂಸ್ಥೆ ಕಲಾವಿದರಿಂದ ವಿಶೇಷ ಗಾಯನ ಕಾರ್ಯಕ್ರಮ ಮೂಡಿ ಬಂತು.

ಕಡಲೇ ಕಾಯಿ ಪರಿಷೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಕಡಲೇ ಕಾಯಿ ಖರೀದಿ ಜೋರಾಗಿತ್ತು. ನೆರೆಯ ಆಂಧ್ರಪ್ರದೇಶ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ವ್ಯಾಪಾರಸ್ಥರು ಕಡಲೇ ಕಾಯಿಗಳನ್ನು ಮಾರಾಟ ಮಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಕಡಲೇ ಕಾಯಿ ಪರಿಷೆಯಲ್ಲಿ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಂದನಾಥ ಸ್ವಾಮೀಜಿ,

ಬಿಜಿಎಸ್‌ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್‌.ಶಿವರಾಮರೆಡ್ಡಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಸ್ಥಳೀಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಸೇರಿದಂತೆ ಆದಿಚುಂಚನಗಿರಿ ಶಾಖಾ ಮಠದ ಕಿರಿಯ ಸ್ವಾಮೀಜಿಗಳು, ಮಠದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚಿಕ್ಕಬಳ್ಳಾಪುರ ನಂದಿ ಠಾಣೆ ಪಿಎಸ್‌ಐ ಓಂಪ್ರಕಾಶಗೌಡ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ವೀರಾಂಜನೇಯನಿಗೆ ತಂಬಿಟ್ಟಿನ ದೀಪೋತ್ಸವ: ಶ್ರೀ ವೀರಾಂಜನೇಯಸ್ವಾಮಿ ರಥೋತ್ಸವ ಪ್ರಯುಕ್ತ ಜಡಲತಿಮ್ಮನಹಳ್ಳಿ, ತುಮ್ಮಕಲಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಂಗಲಿಯರಿಂದ ನಡೆದ ತಂಬಿಟ್ಟಿನ ದೀಪೋತ್ಸವ ವೀರಾಂಜನೇಯಸ್ವಾಮಿ ಕಡಲೇ ಕಾಯಿ ಜಾತ್ರೆಗೆ ವಿಶೇಷ ಕಳೆ ತಂದು ಕೊಟ್ಟಿತು. ಜಾತ್ರೆ ಪ್ರಯುಕ್ತ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ಮರಿಯಪ್ಪ ರಾಮಯ್ಯ ಚಾರಿಟಬಲ್‌ ಟ್ರಸ್ಟ್‌ ಹಾಗೂ ಜಡಲತಿಮ್ಮನಹಳ್ಳಿ ಹಾಗೂ ತುಮಕಲ್ಲಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರಿಂದ ಪಾನಕ ವಿತರಿಸಲಾಯಿತು.

ಈ ವೇಳೆ ಚುಂಚಶ್ರೀ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಖುದ್ದು ಕಡಲೇ ಕಾಯಿ ವಿತರಿಸಿ ಪರಿಷೆಗೆ ವಿಶೇಷ ಮೆರಗು ನೀಡಿದರು. ಶ್ರೀಗಳು ಜನರ ಬಳಿಗೆ ಎಸೆಯುತ್ತಿದ್ದ ಕಳ್ಳೇಕಾಯಿ ಪಡೆಯಲು ತಾ ಮುಂದು ನಾ ಮುಂದು ಎಂದು ಪರಿಷೆಯಲ್ಲಿ ಜನರ ನೂಕುನುಗ್ಗಲು ಏರ್ಪಟಿತ್ತು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.