ಪೌರತ್ವ ಕಾನೂನು: ಕಾಂಗ್ರೆಸ್‌ ಅಪಪ್ರಚಾರ


Team Udayavani, Jan 12, 2020, 3:00 AM IST

powratva-kann

ಶಿಡ್ಲಘಟ್ಟ: ಪೌರತ್ವ ಕಾನೂನುನಿಂದ ದೇಶದ ಯಾರೊಬ್ಬರಿಗೂ ತೊಂದರೆಯಾಗದು. ಆದರೆ ಕಾಂಗ್ರೆಸ್‌ ಪಕ್ಷ ಅಪಪ್ರಚಾರ ಮಾಡುತ್ತಿದ್ದು ಯಾರೊಬ್ಬರೂ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ಚಲವಾದಿ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ದಿಬ್ಬೂರಹಳ್ಳಿಯಲ್ಲಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆಯಿಂದ ಪೌರತ್ವ ಕಾನೂನು ಕುರಿತು ಆಯೋಜಿಸಿದ್ದ ಜನ ಜಾಗೃತಿಯ ಅಭಿಯಾನದಲ್ಲಿ ಮಾತನಾಡಿದ ಅವರು, ದೇಶದ ಹಿಂದೂಗಳು, ಮುಸ್ಲಿಮರು, ಯಾವುದೇ ಧರ್ಮದವರಿಗೆ ತೊಂದರೆಯಾಗದು ಎಂದರು.

ನೆರೆಯ ಬಾಂಗ್ಲದೇಶ, ಪಾಕಿಸ್ತಾನ, ಅಪಘಾನಿಸ್ತಾನದಲ್ಲಿ ದೌರ್ಜನ್ಯ, ಶೋಷಣೆಗೆ ಒಳಗಾಗಿ 2014ಕ್ಕಿಂತ ಮುಂಚೆ ಭಾರತಕ್ಕೆ ಬಂದಂತಹ ಅಲ್ಪಸಂಖ್ಯಾತರಿಗೆ ಪೌರತ್ವ ಕೊಡುವುದು ಸಿಎಎ ಉದ್ದೇಶವೇ ಹೊರತು ದೇಶದಲ್ಲಿನ ಯಾರಿಗೂ ತೊಂದರೆ ಕೊಡುವುದಲ್ಲ. ಆದರೆ ಕಾಂಗ್ರೆಸ್‌ ಹಾಗೂ ಇತರೆ ವಿರೋಧ ಪಕ್ಷಗಳು ಅಪಪ್ರಚಾರ ಮಾಡಿ ಮುಸ್ಲಿಮರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಈ ಹಿಂದೆ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಪೌರತ್ವ ಕಾನೂನು ಬಗ್ಗೆ ಸಹಮತ ಹೊಂದಿತ್ತು. ಇದೀಗ ಏಕೆ ವಿರೋಧಿಸುತ್ತಿದೆ ಎಂದು ಪ್ರಶ್ನಿಸಿದ ಅವರು, ಮುಸ್ಲಿಮರನ್ನು ಕೇವಲ ಓಟ್‌ ಬ್ಯಾಂಕ್‌ ಆಗಿ ಮಾಡಿಕೊಂಡಿರುವ ಕಾಂಗ್ರೆಸ್‌ನ ನಿಜವಾದ ಬಣ್ಣ ಬಯಲಾಗಿದೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಮುಖಂಡ ಸತ್ಯನಾರಾಯಣ ಮಹೇಶ್‌, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಮೇಶ್‌ ಬಾಯಿರಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಶಿಡ್ಲಘಟ್ಟ ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಭಜರಂಗದಳ ಮುಖಂಡ ನರೇಶ್‌ ಕುಮಾರ್‌, ಶಿವಕುಮಾರ್‌, ಕನ್ನಪ್ಪನಹಳ್ಳಿ ಮಲ್ಲೇಶ್‌, ನಲ್ಲೋಜನಹಳ್ಳಿ ನಾಗರಾಜ್‌, ಭಜರಂಗದಳದ ಅಧ್ಯಕ್ಷ ಸದಾನಂದ, ಉಪಾಧ್ಯಕ್ಷ ನಾಗರಾಜು, ವಿಹೆಚ್‌ಪಿ ಮುಖಂಡ ಆರ್‌.ಕಿರಣ್‌ಕುಮಾರ್‌, ವಕೀಲ ರವೀಂದ್ರನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.