ಶಿಡ್ಲಘಟ್ಟ ವಲಯ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ


Team Udayavani, Mar 14, 2020, 3:44 PM IST

ಶಿಡ್ಲಘಟ್ಟ ವಲಯ ಅರಣ್ಯ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ

ಶಿಡ್ಲಘಟ್ಟ: ಅರಣ್ಯ ಇಲಾಖೆ ಜಾಗವನ್ನು ಸಂರಕ್ಷಣೆ ಮಾಡಿ ರಾಜ್ಯದಲ್ಲಿಯೇ ಗಮನ ಸೆಳೆದಿದ್ದ ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಸಹಿತ ಅರಣ್ಯ ಇಲಾಖೆ ಸಿಬ್ಬಂದಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆಯಲಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಾ.23 ರಂದು ನಡೆಯಲಿರುವ ಸಮಾರಂಭದಲ್ಲಿ ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಅವರೊಂದಿಗೆ ಶಿಡ್ಲಘಟ್ಟ ಅರಣ್ಯ ರಕ್ಷಕ ಟಿ.ಡಿ. ಸಂದೀಪ್‌ ಮತ್ತು ಅರಣ್ಯ ಕ್ಷೇಮಾ ಭಿವೃದ್ಧಿ ನೌಕರ ಎ.ಶ್ರೀರಾಮಯ್ಯ ಮುಖ್ಯಮಂತ್ರಿಗಳ ಗೌರವಕ್ಕೆ ಪಾತ್ರರಾಗಲಿದ್ದಾರೆ.

ಹೆಚ್‌.ಎಸ್‌.ಶ್ರೀಲಕ್ಷ್ಮೀ: ಕಳೆದ ಆಗಸ್ಟ್‌ ತಿಂಗಳಲ್ಲಿ ವಲಯ ಅರಣ್ಯಾಧಿಕಾರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಅವರು ತಮ್ಮ ಕೆಲವೇ ಸಿಬ್ಬಂದಿಯೊಂದಿಗೆ ತಾಲೂಕಿನ ವರದನಾಯಕನಹಳ್ಳಿ ಸರ್ವೆ ನಂ 10ರ ಅರಣ್ಯ ಭೂಮಿಯನ್ನು ರಾತ್ರೋ ರಾತ್ರಿ ಊಳಲು ಬಂದವರನ್ನು ಎದುರಿಸುತ್ತಿದ್ದರು. ಹಲವು ಮುಖಂಡರಿಂದ ಬೆದರಿಕೆ ಕರೆ ಬಂದರೂ ಜಗ್ಗದೇ ಒಂದಿಂಚು ಸಹ ಅರಣ್ಯ ಜಮೀನನ್ನು ಬಿಡುವುದಿಲ್ಲ ಎಂದು ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯಿಂದ ಅಲ್ಲಿ ಗಿಡಗಳನ್ನು ನೆಡುವಲ್ಲಿ ಯಶಸ್ವಿಯಾಗಿದ್ದರು. ಅವರ ಪರಿಶ್ರಮ, ಸೇವಾಕ್ಷಮತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪಿ.ಸಿ.ಸಿ.ಎಫ್‌. ಪುನಟಿ ಶ್ರೀಧರ್‌ ಶ್ಲಾಘಿಸಿದರು.

ಒತ್ತುವರಿ ತೆರವು, ಜಿಂಕೆ ರಕ್ಷಣೆ: ಅರಣ್ಯ ರಕ್ಷಕ ಟಿ.ಡಿ.ಸಂದೀಪ್‌ ಮತ್ತು ಅರಣ್ಯ ಕ್ಷೇಮಾಭಿವೃದ್ಧಿ ನೌಕರ ಎ.ಶ್ರೀರಾಮಯ್ಯ ಅವರು ಶಿಡ್ಲಘಟ್ಟ ತಾಲೂಕಿನ ವರದನಾಯಕನಹಳ್ಳಿ ಸರ್ವೇ ನಂ 10ರ 25 ಹೆಕ್ಟೇರ್‌ ಅರಣ್ಯ ಒತ್ತುವರಿ ತೆರವುಗೊಳಿಸುವ ಕಾರ್ಯದಲ್ಲಿ ಸಕ್ಷಮವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಅರಣ್ಯದಲ್ಲಿ ಅಪಘಾತಕ್ಕೀಡಾದ ಜಿಂಕೆಗಳನ್ನು ರಕ್ಷಿಸಿರುವುದಲ್ಲದೇ, ಅರಣ್ಯ ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣಾ ವರದಿಗಳನ್ನು ಸಲ್ಲಿಸಿದ್ದಾರೆ.

ಹೆಚ್‌.ಎಸ್‌.ಶ್ರೀಲಕ್ಷ್ಮೀ 2015 ರಲ್ಲಿ ವಲಯ ಅರಣ್ಯಾಧಿಕಾರಿಯಾಗಿ ನೇಮಕಗೊಂಡರು. ಎರಡು ವರ್ಷಗಳ ಕಾಲ ತೆಲಂಗಾಣ ಅರಣ್ಯ ಅಕಾಡೆಮಿಯಲ್ಲಿ ತರಬೇತಿ ಪಡೆದು ಶಿಡ್ಲಘಟ್ಟ ವಲಯ ಅರಣ್ಯಾಧಿಕಾರಿಯಾದರು. 2019 ರ ಆಗಸ್ಟ್ ನಲ್ಲಿ ಶಿಡ್ಲಘಟ್ಟ ತಾಲೂಕಿನ ವರದನಾಯಕನಹಳ್ಳಿ ಸರ್ವೆ ನಂ 10ರ 25 ಹೆಕ್ಟೇರ್‌ ಅರಣ್ಯ ಒತ್ತುವರಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅರಣ್ಯದಲ್ಲಿ ಅಪಘಾತಕ್ಕೀಡಾದ ಜಿಂಕೆಗಳನ್ನು ಸಂರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಅರಣ್ಯ ಒತ್ತುವರಿಗೆ ಸಂಬಂಧಿಸಿದಂತೆ ವಿಚಾರಣಾ ವರದಿಗಳನ್ನು ಸಲ್ಲಿಸಿದ್ದಾರೆ. 2020ರಲ್ಲಿ ತಲಕಾಯಲಬೆಟ್ಟ ವ್ಯಾಪ್ತಿಯ 4ಎಕರೆ ಅರಣ್ಯ ಒತ್ತುವರಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿರುವ ಕಳೆದ ಎರಡು ವರ್ಷಗಳಲ್ಲಿ ಅರಣ್ಯ ಉಳಿಸುವ ನಿಟ್ಟಿನಲ್ಲಿ ಸುಮಾರು 200 ಎಫ್‌ಐಆರ್‌ ದಾಖಲಿಸಿರುವುದು ವಿಶೇಷವಾಗಿದೆ.

ಶ್ರೀ ಲಕ್ಷ್ಮೀ ಕಿರು ಪರಿಚಯ :  ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯ ಸಂಜೀವಪ್ಪ ಮತ್ತು ಚೌಡಮ್ಮ ದಂಪತಿಗಳ ಪುತ್ರಿ ಹೆಚ್‌.ಎಸ್‌.ಶ್ರೀಲಕ್ಷ್ಮೀ ಒಂದರಿಂದ 10ನೇ ತರಗತಿ ವರೆಗೆ ಶ್ರೀಮುನೇಶ್ವರ ವಿದ್ಯಾನಿಕೇತನ ಆಂಗ್ಲ ಶಾಲೆಯಲ್ಲಿ ಮುಗಿಸಿ

ವಿಜಯ ಜೂನಿಯರ್‌ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿ ನಂತರ ಜಯ ನಗರದ ಈಸ್ಟ್‌ಪಾಯಿಂಟ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ನಲ್ಲಿ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯೂನಿಕೇಶನ್‌ನಲ್ಲಿ ಬಿಇ ಪದವಿ ಪಡೆದಿದ್ದಾರೆ. ಬಳಿಕ 2015ನೇ ಬ್ಯಾಚ್‌ನಲ್ಲಿ ರೇಂಜ್‌ ಆಫೀಸರ್‌ ಆಗಿ ಆಯ್ಕೆಯಾಗಿ 2 ವರ್ಷ ತೆಲಂಗಾಣ ರಾಜ್ಯದ ಅರಣ್ಯ ಅಕಾಡೆಮಿಯಲ್ಲಿ ತರಬೇತಿ ಪಡೆದ ಬಳಿಕ ಶಿಡ್ಲಘಟ್ಟ ತಾಲೂಕಿನಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಪ್ರಥಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.