ರೋಗಿಗಳಿಗೆ ತಣ್ಣೀರು, ಬಿಸಿ ನೀರು ಭಾಗ್ಯ

ಜಿಲ್ಲಾಸ್ಪತ್ರೆಯಲ್ಲಿ ಸೌಕರ್ಯ ವ್ಯವಸ್ಥೆ • ಡೀಸಿ ಕಾಳಜಿ • ನಿತ್ಯ ಹೋಟೆಲ್ನಲ್ಲಿ ಖರೀದಿಸುವ ಪಡಿಪಾಟಲಿಗೆ ಬ್ರೇಕ್‌

Team Udayavani, Jul 29, 2019, 10:40 AM IST

cb-tdy-1

ಚಿಕ್ಕಬಳ್ಳಾಪುರ: ಅಂತೂ ಇಂತೂ ಹಲವು ವರ್ಷಗಳ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಾಗೂ ಅವರ ಸಂಬಂಧಿಕರಿಗೆ ಹೋಟೆಲ್ನಲ್ಲಿ ಬಿಸಿ ನೀರು ಹಾಗೂ ಮಿನರಲ್ ವಾಟರ್‌ ಖರೀದಿ ಮಾಡುವ ಸಂಕಷ್ಟ ತಪ್ಪಿದ್ದು, ಜಿಲ್ಲಾಧಿಕಾರಿಗಳ ಖಡಕ್‌ ಆದೇಶಕ್ಕೆ ಜಿಲ್ಲಾಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿದೆ.

22 ಕೋಟಿ ರೂ. ವೆಚ್ಚದ ಜಿಲ್ಲಾಸ್ಪತ್ರೆಯಲ್ಲಿ ಬಿಸಿ ನೀರು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ನಿತ್ಯ ಆಸ್ಪತ್ರೆಗೆ ದಾಖಲಾಗುವ ಒಳ ರೋಗಿಗಳು, ಸಂಬಂಧಿಕರು ಬಿಸಿ ನೀರನ್ನು ಹೋಟೆಲ್ಗಳಲ್ಲಿ ಖರೀದಿಸಬೇಕಿತ್ತು. ಮಿನರಲ್ ವಾಟರ್‌ ಬಾಟಲುಗಳನ್ನು ಖರೀದಿಸಿ ಕೈ ಸುಟ್ಟುಕೊಳ್ಳುತ್ತಿದ್ದರು. ಈ ಬಗ್ಗೆ ಅನೇಕ ಬಾರಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿರ ಲಿಲ್ಲ.

ಡೀಸಿ ಆದೇಶಕ್ಕೆ ಶುದ್ಧ ನೀರಿನ ಘಟಕ: ಜಿಲ್ಲಾಸ್ಪತ್ರೆಯಲ್ಲಿ ಈಗ ಪ್ರತಿ ಮಹಡಿಯಲ್ಲೂ ಬಿಸಿ ನೀರು, ತಣ್ಣೀರು ಹಾಗೂ ಶುದ್ಧ ಕುಡಿಯುವ ಅತ್ಯಾಧುನಿಕ ನೀರಿನ ಘಟಕಗಳನ್ನು ಅಳವಡಿಸಿದೆ. ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಈ ಘಟಕಗಳನ್ನು ಅಳವಡಿಸಿದೆ. ಇದು ಆಸ್ಪತ್ರೆಗೆ ಬರುವ ಬಡಜನರಿಗೆ ಸಹಕಾರಿಯಾಗಿದೆ. ಆದರೆ ಜನರು ಹೊರಗೆ ಹೋಗಿ ಬಿಸಿ ನೀರು ಮತ್ತು ಶುದ್ಧ ಕುಡಿಯುವ ನೀರು ಖರೀದಿಸದೆ ಆಸ್ಪತ್ರೆಯಲ್ಲೇ ಇರುವ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ.

ದಿನದ 24 ಗಂಟೆಯೂ ಬಿಸಿ ನೀರು ಸಿಗುತ್ತದೆ. ಜನರಿಗೆ ಈ ಸೌಲಭ್ಯ ಎಲ್ಲಿದೆ ಎಂದು ಮಾರ್ಗಸೂಚಿ ಬರಹದ ಮೂಲಕ ಅರಿವು ಮೂಡಿಸಬೇಕಿದೆ. ಸದ್ಯಕ್ಕಂತೂ ಅನೇಕ ಮಂದಿ ಹೊರಗಡೆಯಿಂದ ಬಾಟಲು, ಬಿಸಿನೀರು, ತಣ್ಣೀರು ತರುವುದನ್ನು ಬಿಟ್ಟು ಸ್ಥಳೀಯವಾಗಿ ಆಸ್ಪತ್ರೆಯಲ್ಲಿ ಅಳವಡಿಸಿರುವ ಶುದ್ಧ ನೀರಿನ ಘಟಕಗಳಿಂದ ಅನುಕೂಲ ಪಡೆಯುತ್ತಿದ್ದಾರೆ. ಸದ್ಯ ಆಸ್ಪತ್ರೆಯ ನೆಲಮಹಡಿಯಲ್ಲಿ ( ಹೊರ ರೋಗಿಗಳ ವಿಭಾಗ ಇರುವ ಮಹಡಿ)ದಲ್ಲಿ ಕೊಠಡಿ ಸಂಖ್ಯೆ 54 ಮತ್ತು 56 ರ ಮಧ್ಯೆ (ಮಕ್ಕಳ ತಜ್ಞರ ಕೊಠಡಿ) ಅಳವಡಿಸಲಾಗಿದೆ.

ಸಾರ್ವಜನಿಕರ ದೂರಿನ ಹಿನ್ನೆಲೆ: ಬಿಸಿನೀರು ಮತ್ತು ಕುಡಿಯುವ ನೀರಿಗೆ ಜಿಲ್ಲಾಸ್ಪತ್ರೆಗೆ ಬರುವ ಸಾರ್ವ ಜನಿಕರು ಹಾಗೂ ರೋಗಿಗಳ ಪರದಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌, ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಯ ಡಿಎಸ್‌ಗೆ ಸೂಚನೆ ಕೊಟ್ಟಿದ್ದರ ಪ್ರತಿಫ‌ಲ ಈ ಸೌಲಭ್ಯ ಕಲ್ಪಿಸಲಾಗಿದೆ.

ಆಸ್ಪತ್ರೆಗೆ ಬರುವವರು ನಿತ್ಯ ನೀರಿಗಾಗಿ ಖರ್ಚು ಮಾಡಲಾಗುತ್ತಿದ್ದ 50, 60 ರೂ. ಹಣ ಉಳಿಯಲಿದೆ ಎನ್ನಬಹುದು. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಕೈಗೆಟುಕುತ್ತಿರುವ ಶುದ್ಧ ಕುಡಿಯುವ ನೀರು ಹಾಗೂ ಬಿಸಿ ನೀರಿಗೆ ರೋಗಿಗಳು ಸೇರಿದಂತೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.