ಕೊರೊನಾ 3ನೇ ಅಲೆ ಕೊನೆಗಾಣಿಸಲು ಸಹಕರಿಸಿ
Team Udayavani, Jan 14, 2022, 9:22 PM IST
ಮುಳಬಾಗಿಲು: ಕೊರೊನಾ ಮೂರನೆ ಅಲೆ ಕೊನೆಗಾಣಿಸಲು ಪ್ರತಿಯೊಬ್ಬರ ಸಹಕಾರ ತುಂಬಾ ಮುಖ್ಯ. ಆದ್ದರಿಂದ ಸರ್ಕಾರದ ನಿಯಮ ತಪ್ಪದೇ ಪಾಲನೆ ಮಾಡಬೇಕೆಂದು ಶಾಸಕ ಎಚ್.ನಾಗೇಶ್ ಹೇಳಿ ದರು.
ತಾಲೂಕಿನ ಜೆ.ಅಗ್ರಹಾರ ಬಳಿ ಇರುವ ವಾರಿಧಿ ಪಬ್ಲಿಕ್ ಶಾಲಾ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಯುವಸೌರಭ ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿ, ದೇಶವು ಕೊರೊನಾ ಎರಡು ಅಲೆಗಳಿಂದ ತುಂಬಾ ನಷ್ಟ ಅನುಭವಿಸಿತು. ಆದ್ದರಿಂದ ಈ ಬಾರಿ ಬರಲಿರುವ ಮೂರನೇ ಅಲೆಯನ್ನು ಮೊದಲಿನಲ್ಲಿಯೇ ತಡೆಗಟ್ಟಲು ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕೆಂದು ಸಲಹೆ ನೀಡಿದರು. ಸಂಪೂರ್ಣ ಸಹಕಾರ: ತಾಪಂ ಮಾಜಿ ಅಧ್ಯಕ್ಷ ಎ.ವಿ.ಶ್ರೀನಿವಾಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಂದಿ ಯುವಕರು ನಮ್ಮ ಸಂಸ್ಕೃತಿ ಮರೆಯುತ್ತಿದ್ದಾರೆ.
ಆದರೆ, ನಮ್ಮ ನಾಡು, ನುಡಿ ಹಾಗೂ ನಮ್ಮಲ್ಲಿನ ಕಲೆ ಮುಂದಿನ ತಲೆಮಾರಿನವರಿಗೆ ಪರಿಚಯ ಮಾಡಿಕೊಡುವ ಪ್ರಯತ್ನ ವನ್ನು ಮಾಡುವ ಇಂತಹ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು. ಮುಂದಿನ ತಲೆಮಾರಿಗೆ ಪರಿಚಯಿಸಿ: ಮಲ್ಲನಾಯಕನಹಳ್ಳಿ ಗ್ರಾಪಂ ಅಧ್ಯಕ್ಷ ಬಿ.ಎಸ್.ರಮೇಶ್ ಮಾತನಾಡಿ, ನಮ್ಮ ಪೂರ್ವಿಕರು ಬಿಟ್ಟು ಹೋದ ಹಲವು ಕಲೆಗಳನ್ನು ಇವತ್ತಿನ ಯುವ ಸಮುದಾಯದವರು ಬಳಕೆ ಮಾಡದ ಕಾರಣದಿಂದ ಸ್ಥಳೀಯ ಕಲೆಗಳು ಅಳಿವಿನಂಚಿಗೆ ಸರಿಯುತ್ತಿವೆ. ಆದ್ದರಿಂದ ನಮ್ಮ ಕಲೆಗಳನ್ನು ಉಳಿಸಿಕೊಂಡು ಮುಂದಿನ ತಲೆಮಾರಿನ ಜನರಿಗೆ ಪರಿಚಯ ಮಾಡುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕಿದೆ ಎಂದರು. ವಾರಿಧಿ ಶಾಲೆ ಅಧ್ಯಕ್ಷ ಮಂಜುನಾಥ್ ರೆಡ್ಡಿ, ಶಾಲೆ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ.
ಆದರೆ, ಕೊರೊನಾದಿಂದ ಶಾಲೆಗಳು ಮಾತ್ರ ನಡೆಯುತ್ತಿಲ್ಲ, ಮಕ್ಕಳ ವಿದ್ಯಾಭ್ಯಾಸವನ್ನು ದೃಷ್ಟಿಕೋನದಲ್ಲಿ ಇರಿಸಿಕೊಂಡು ಮನೆಯಲ್ಲಿ ಪಾಠಪ್ರವಚನ ಮಾಡಲಾಗಿದೆ. ಅಲ್ಲದೆ, ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ನಾಸಿಕ್ ಡೋಲು, ವೀರಗಾಸೆ, ಕಂಸಾಳೆ, ಗಾರುಡಿಗೊಂಬೆ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದ ಗೀತೆಗಳು, ಗಮಕ ಕಥಾ ಕೀರ್ಥನಾ, ನಾಟಕ ಸೇರಿ ವಿವಿಧ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಎನ್.ನರೇಂದ್ರ ಬಾಬು, ವಾರಿಧಿ ಶಾಲೆ ಸಂಸ್ಥಾಪಕ ಅಧ್ಯಕ್ಷ ಸುಬ್ಟಾರೆಡ್ಡಿ, ದರಕಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ಎಪಿಎಂಸಿ ಅಧ್ಯಕ್ಷ ಜಯರಾಮರೆಡ್ಡಿ, ಮಾಜಿ ಅಧ್ಯಕ್ಷ ಗೊಲ್ಲಹಳ್ಳಿ ವೆಂಕಟೇಶ್, ಯುವ ಮುಖಂಡ ಗೊಲ್ಲಹಳ್ಳಿ ಜಗದೀಶ್, ನಗರಸಭೆ ನಾಮ ನಿರ್ದೇಶಕ ರಾಜೇಶ್, ಪದ್ಮನಾಭ ಸ್ವಾಮಿ, ಅಂತಾರಾಷ್ಟ್ರೀಯ ಕ್ರೀಡಾಪಟು ರಾಮಮೂರ್ತಿ ನಾಯ್ಡು, ಪರಶುರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಕೀಲುಹೊಳಲಿ ಸತೀಶ್, ಗ್ರಾಮೀಣ ಮಹಿಳಾ ಒಕ್ಕೂಟ ಮುಖ್ಯಸ್ಥೆ ಜಯಮ್ಮ, ವಾರಿಧಿ ಶಾಲೆ ಸಂಯೋಜಕ ದೊಮ್ಮಸಂದ್ರ ನರಸಿಂಹ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ