ಪ್ರತಿಯೊಬ್ಬರ ಆರೋಗ್ಯ ಮಾಹಿತಿ ಸಂಗ್ರಹಿಸಿ


Team Udayavani, Aug 3, 2020, 10:29 AM IST

ಪ್ರತಿಯೊಬ್ಬರ ಆರೋಗ್ಯ ಮಾಹಿತಿ ಸಂಗ್ರಹಿಸಿ

ಶಿಡ್ಲಘಟ್ಟ: ಸ್ಥಳೀಯ ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸ್ವಯಂ ಸೇವಕರು ಮನೆ ಮನೆಗೆ ಭೇಟಿ ನೀಡಿ ಕುಟುಂಬದ ಪ್ರತಿಯೊಬ್ಬ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಕಣಜೇನಹಳ್ಳಿ, ಚಿಂತಾಮಣಿ ತಾಲೂಕಿನ ನಗರದ ಎನ್‌. ಆರ್‌. ಬಡಾವಣೆ, ಕೋನಪ್ಪಲ್ಲಿ ಪಂಚಾಯಿತಿ ಸೂರಪ್ಪಲ್ಲಿಯ ಕಂಟೈನ್ಮೆಂಟ್‌ ಝೋನ್‌ಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಅವರು ಮಾತನಾಡಿದರು.

ನಗರಗಳಿಗೆ ಮಾತ್ರ ಸೀಮಿತವಾಗಿದ್ದ ಕೋವಿಡ್ ಸೋಂಕು ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಿಗೆ ಹರಡುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸ ಬೇಕು. ಎಲ್ಲಾ ಗ್ರಾಪಂ ಅಧಿಕಾರಿಗಳು ಹೆಚ್ಚಿನ ಸಹಕಾರ ನೀಡಬೇಕು ಎಂದು ಹೇಳಿದರು.

ಮಾಹಿತಿ ಪಡೆಯಿರಿ: ಸ್ಥಳೀಯ ಅಧಿಕಾರಿಗಳು, ಆಶಾಕಾರ್ಯಕರ್ತರು ಸ್ವಯಂ ಸೇವಕರು ಮನೆ ಮನೆಗೆ ಭೇಟಿ ನೀಡಿ ಸದಸ್ಯರ ಆರೋಗ್ಯದ ಮಾಹಿತಿ ಪಡೆಯಬೇಕು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಿದಾಗ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಮಾತನಾಡಿ, ಸ್ಥಳೀಯ ಮಟ್ಟದ ಸಮಿತಿಗಳು ಹಾಗೂ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಬಗ್ಗೆ ಅರಿವು ಮೂಡಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಕೋವಿಡ್‌ ನೋಡಲ್‌ ಅಧಿಕಾರಿ ಡಾ.ಭಾಸ್ಕರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಸೇವಾ ಕೇಂದ್ರ :  ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಎಲ್ಲಾ ಗ್ರಾಮಗಳಲ್ಲಿ ಆರೋಗ್ಯ ಸೇವಾ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 50 ಗ್ರಾಮಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಸಿಇಒ ಬಿ.ಫೌಝೀಯಾ ತರುನ್ನುಮ್‌ ಹೇಳಿದ್ದಾರೆ. ಈ ಕುರಿತು ಜಂಟಿ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಎಲ್ಲಾ ಗ್ರಾಪಂ ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಸೋಂಕಿನ ಲಕ್ಷಣ ಇದ್ದರೆ ಅಥವಾ ಆರೋಗ್ಯಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಿ ತ್ವರಿತವಾಗಿ ಚಿಕಿತ್ಸೆ ಒದಗಿಸುವ ದೃಷ್ಟಿಯಿಂದ ಗ್ರಾಮ ಗಳಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.