ಚಿಕ್ಕಬಳ್ಳಾಪುರದಲ್ಲಿ ಕಾಲೇಜು ಆರಂಭ: ನೀರಸ ಪ್ರತಿಕ್ರಿಯೆ


Team Udayavani, Nov 18, 2020, 3:44 PM IST

ಚಿಕ್ಕಬಳ್ಳಾಪುರದಲ್ಲಿ ಕಾಲೇಜು ಆರಂಭ: ನೀರಸ ಪ್ರತಿಕ್ರಿಯೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್‌ಸೋಂಕು ದಿನೇ ದಿನೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಂಗಳವಾರ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳನ್ನು ತೆರೆಯಲು ನಿರ್ಧಾರ ತೆಗೆದುಕೊಂಡಿದ್ದು, ಆದರೆ ಜಿಲ್ಲೆಯಲ್ಲಿ ಕಾಲೇಜು ಆರಂಭವಾದರೂ ಸಹ ಶೇ.30-35 ರಷ್ಟು ವಿದ್ಯಾರ್ಥಿಗಳು ಮಾತ್ರ ಹಾಜರಾದರು.

ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸಹಿತ ಜಿಲ್ಲೆಯ 6ತಾಲೂಕುಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳನ್ನು ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಂಡು ಆರಂಭಿಸಲಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಿಲ್ಲ.ಮುನ್ನೆಚ್ಚರಿಕೆ ಕ್ರಮ ಪರಿಶೀಲನೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳುಕಾಲೇಜು ಆರಂಭಗೊಳ್ಳುವ ಮುನ್ನಕೋವಿಡ್‌-19ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಂಡಿರುವ ಕುರಿತು ಪರಿಶೀಲಿಸಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕಾಲೇಜಿನ ಕೊಠಡಿ ಗಳನ್ನು ಸ್ಯಾನಿಟೈಸ್‌ ಮಾಡಿಸಿ ಶುಚಿಗೊಳಿಸಿದರು. ಕಾಲೇಜು ಪ್ರವೇಶ ದ್ವಾರದಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಗುಂಪು ಸೇರುವುದಾಗಲಿ ಮಾಡಬಾರದೆಂದು ಮನವಿ ಮಾಡಿ ಸಾಮಾಜಿಕ ಅಂತರಕಾಯ್ದುಕೊಂಡು ತರಗತಿ ಆರಂಭಿಸಲಾಗಿದ್ದು, ಎಲ್ಲರು ಸಹಕರಿಸಬೇಕೆಂದು ಕೋರಿದರು.

ಜಿಲ್ಲಾ ಕೇಂದ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ಕಾಲೇಜಿನಲ್ಲಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಂಡು ತರಗತಿ ಆರಂಭಿ ಸಲಾಯಿತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಾತ್ರವಿದ್ಯಾರ್ಥಿಗಳು ಹಾಜರಾಗಿರಲಿಲ್ಲ. ಪ್ರಥಮ ದಿನ ಉಪನ್ಯಾಸಕರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕೇಳುವ ಭಾಗ್ಯ ಒದಗಿಬಂದಿತ್ತು.

ಶೇ.30-35 ವಿದ್ಯಾರ್ಥಿಗಳು ಹಾಜರ್‌: ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 142 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ವಿದ್ಯಾರ್ಥಿಗಳನ್ನು ಕೋವಿಡ್‌-19 ಪರೀಕ್ಷೆಗೊಳಪಡಿಸಿ ಪ್ರವೇಶ ನೀಡಲಾಗಿದೆ. ವಿಜ್ಞಾನ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಆಫ್ಲೈನ್‌ ಮತ್ತು ಆನ್‌ ಲೈನ್‌ ತರಗತಿಗಳು ಆರಂಭವಾಗಿದ್ದು, ಶೇ.30-35 ವಿದ್ಯಾರ್ಥಿಗಳುಕಾಲೇಜಿಗೆ ಹಾಜರಾಗಿದ್ದಾರೆ.

ಕೋವಿಡ್‌ ಪರೀಕ್ಷೆ, ಹಿಂಜರಿಕೆ :  ಕಾಲೇಜು ಆರಂಭಗೊಂಡರೂ ಸಹ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.ಕಾಲೇಜಿನಲ್ಲಿಕೋವಿಡ್‌-19 ಪರೀಕ್ಷೆ ಮಾಡುತ್ತಿದ್ದಾರೆ ಎಂದುಬಹುತೇಕ ವಿದ್ಯಾರ್ಥಿಗಳುಕಾಲೇಜಿಗೆಬರಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.

ತಹಶೀಲ್ದಾರ್‌ ಪರಿಶೀಲನೆ :  ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕೆ.ಅರುಂಧತಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಂಡಿರುವುದನ್ನು ಪರಿಶೀಲಿಸಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು ವಿದ್ಯಾರ್ಥಿಗಳುಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪಾಠಪ್ರಚನಗಳನ್ನುಕೇಳಬೇಕೆಂದು ಸಲಹೆ ನೀಡಿದರು.

ಸಾಮಾಜಿಕ ಅಂತರಕಾಯ್ದುಕೊಂಡು ಮಾಸ್ಕ್ ಧರಿಸಬೇಕೆಂದು ನಿರ್ದೇಶನನೀಡಲಾಗಿದೆ.ಕಾಲೇಜು ಆರಂಭವಾದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಿಲ್ಲ. ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ಕೊಂಡುಕೋವಿಡ್‌-19 ಪರೀಕ್ಷೆ ನಡೆಸಿ ಕಾಲೇಜಿನಲ್ಲಿ ಪ್ರವೇಶಕಲ್ಪಿಸಲಾಗಿದೆ. ಚಂದ್ರಯ್ಯ ಜಿ.ಡಿ, ಪ್ರಾಂಶುಪಾಲ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕಬಳ್ಳಾಪುರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣ ಸ್ವತ್ಛಗೊಳಿಸಿ ಸ್ಯಾನಿ ಟೈಸ್‌ ಮಾಡಲಾಗಿದೆ. ವಿದ್ಯಾರ್ಥಿಗಳುಕೋವಿಡ್‌ ಮುನ್ನೆಚ್ಚರಿಕೆಕ್ರಮಗಳನ್ನುಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಡಿ.ಎಸ್‌.ಆನಂದರೆಡ್ಡಿ, ನಗರಸಭಾಧ್ಯಕ್ಷ, ಡಿ.ಲೋಹಿತ್‌, ಪೌರಾಯುಕ್ತ

 

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.