ಸಮುದಾಯದ ಸಂಘಟನೆ ಅವಶ್ಯ
Team Udayavani, Oct 10, 2019, 3:00 AM IST
ಗೌರಿಬಿದನೂರು: ಸಮುದಾಯದ ಸಂಘಟನೆಯು ಇಂದಿನ ಸಮಾಜದ ಮೂಲಭೂತ ಅವಶ್ಯಕತೆಯಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ರಾಜ್ಯಾಧ್ಯಕ್ಷ ಎಸ್.ಎನ್.ಶಬರೀಶ್ ಅಭಿಪ್ರಾಯಪಟ್ಟರು. ಪಟ್ಟಣದ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ವತಿಯಿಂದ ಹಮ್ಮಿಕೊಂಡಿದ್ದ ವಿಭಾಗೀಯ ಪ್ರವಾಸದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಯುವಕರಿಗಾಗಿ ಮಹಾಸಭಾ: ಆರ್ಯವೈಶ್ಯ ಯುವಜನ ಮಹಾಸಭಾವು ಯುವಕರಿಂದ ಯುವಕರಿಗಾಗಿಯೇ ರೂಪು ಪಡೆದಿರುವ ಸಂಸ್ಥೆಯಾಗಿದೆ. ನಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬ ಯುವಕನಿಗೂ ಅವನ ಸಾಮರ್ಥ್ಯಕ್ಕೆ ಅನುಗುಣವಾದ ಜವಾಬ್ದಾರಿ ನೀಡಲಾಗುತ್ತದೆ. ಅವರು ತಮಗರಿವಿಲ್ಲದಂತೆ ಸೃಜನಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುತ್ತಾರೆ. ಇದರಿಂದ ಅವರ ವ್ಯಕ್ತಿತ್ವ ವಿಕಾಸದ ಜೊತೆ ಜೊತೆಗೆ ಸಾಮಾಜಿಕ ಕಾರ್ಯವೂ ನಿರ್ವಹಿಸಲ್ಪಡುತ್ತದೆ ಎಂದರು.
ನೇರ ಸಂಪರ್ಕ: ರಾಜ್ಯಾದ್ಯಂತ 350ಕ್ಕೂ ಹೆಚ್ಚು ವಾಸವಿ ಯುವಜನ ಸಂಘಗಳು ಅಸ್ತಿತ್ವದಲ್ಲಿದ್ದು, ಇವುಗಳ ಮುಖಾಂತರ ಹಲವು ಬಗೆಯ ಸಾಮಾಜಿಕ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಈ ಎಲ್ಲಾ ಸಂಸ್ಥೆಗಳನ್ನು ನೇರ ಸಂಪರ್ಕದ ಮೂಲಕ ತಲುಪುವುದೇ ನಮ್ಮ ಗುರಿಯಾಗಿದೆ ಎಂದರು. ನಮ್ಮೆಲ್ಲರ ಪ್ರಯತ್ನದ ಫಲವಾಗಿ ಆರ್ಯವೈಶ್ಯ ಅಭಿವೃದ್ಧಿ ನಿಗಮವು ಇಂದು ಅಸ್ತಿತ್ವ ಪಡೆದುಕೊಂಡಿದೆ. ಈ ಎಲ್ಲಾ ಸಂಗತಿಗಳನ್ನೂ ಗಮನಿಸುವುದರ ಮೂಲಕ ನಾವೆಲ್ಲರೂ ಸಂಘಟನೆಗಾಗಿ ಕಟ್ಟಿಬದ್ಧರಾಗಬೇಕಾಗಿದೆ ಎಂದು ಹೇಳಿದರು.
ನಾಯಕರನ್ನು ಬೆಳೆಸುವುದು ಅಗತ್ಯ: ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಎ.ಆರ್.ರಾಜಣ್ಣ ಮಾತನಾಡಿ, ಸಂಸ್ಥೆಗಳನ್ನು ಕಟ್ಟುವುದು ಅದರ ಮುಖೇನ ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸುವುದು ಒಂದು ಭಾಗವಾದರೆ, ಮುಂದಿನ ಭವಿಷ್ಯದ ಸಂದರ್ಭದಲ್ಲಿ ಆ ಸಂಸ್ಥೆಯ ಗತಿಯೇನು? ಎಂದು ಯೋಚಿಸುವುದು ಅಗತ್ಯವಾಗಿದೆ ಎಂದರು.
ಹೀಗಾಗಿ ನಮ್ಮ ನಂತರದ ನಾಯಕರನ್ನು ತಯಾರು ಮಾಡುವುದೂ ನಮ್ಮದೇ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಹೊಸ ಮುಖಗಳನ್ನು ಸಂಘಟನೆಗೆ ಪರಿಚಯಿಸಿ ಅವರಲ್ಲಿ ಸಂಘಟನಾ ಮನೋಭಾವವನ್ನು ಬೆಳೆಸಬೇಕಾಗಿದೆ ಎಂದರು. ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ಕಾರ್ಯದರ್ಶಿ ಬಿ.ಆರ್.ವಿಕ್ರಂ, ಬದ್ರಿಪ್ರಸಾದ್, ಸಿಎಂಎಸ್ ರಾಜೇಂದ್ರ ಪ್ರಸಾದ್, ಭಾನವಿ ಅರಂವಿದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…