ರಾಜಿ ಸಂಧಾನ: ತಾಳಹಳ್ಳಿಯಲ್ಲಿ ನೀರಿನ ಕಿತ್ತಾಟಕ್ಕೆ ತೆರೆ
Team Udayavani, Jan 25, 2018, 3:31 PM IST
ಚಿಕ್ಕಬಳ್ಳಾಪುರ: ಕುಡಿಯುವ ನೀರಿಗೆ ಹೊಸ ಕೊಳವೆಬಾವಿ ಕೊರೆಸುವ ವಿಚಾರದಲ್ಲಿ ಒಮ್ಮತ ಮೂಡದೇ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ತೀವ್ರ ವಿವಾದಕ್ಕೆ ಗುರಿಯಾಗಿದ್ದ ತಾಲೂಕಿನ ತಾಳಹಳ್ಳಿಯಲ್ಲಿ ಎರಡು ಬಣಗಳ ನಡುವಿನ ನೀರಿನ ಕಿತ್ತಾಟಕ್ಕೆ ಕೊನೆಗೂ ಬುಧವಾರ ಬ್ರೇಕ್ ಬಿದ್ದಿದೆ.
ತಾಳಹಳ್ಳಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಎರಡು ಗುಂಪುಗಳ ಪ್ರಮುಖರನ್ನು ಸೇರಿಸಿ ರಾಜೀ ಸಂಧಾನ ನಡೆಸುವ ಮೂಲಕ ಗ್ರಾಮದಲ್ಲಿ ಹೊಸ ಕೊಳವೆ ಬಾವಿಗೆ ಜಿಪಂ ಅಧ್ಯಕ್ಷರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಹೊಸ ಕೊಳವೆಬಾವಿ: ಕುಡಿಯುವ ನೀರಿನ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು. ಗ್ರಾಮಗಳಲ್ಲಿ ಸೌಹಾರ್ದತೆ ನೆಲಸಬೇಕು. ಈ ರೀತಿ ಕಿತ್ತಾಡಿಕೊಂಡರೆ ನೀರಿನ ಸಮಸ್ಯೆ ಎದುರಿಸುವರು ನೀವು ಎಂದು ಎರಡು
ಬಣಗಳ ಮುಖಂಡರಿಗೆ ಬುದ್ಧಿವಾದ ಹೇಳಿದ ಜಿಪಂ ಅಧ್ಯಕ್ಷರು ತಮ್ಮ ಸಮ್ಮುಖದಲ್ಲಿಯೇ ಗ್ರಾಮಕ್ಕೆ ಬೋರ್ವೆಲ್ ಲಾರಿ ಕರೆಸಿ ಹೊಸದಾಗಿ ಕೊಳವೆ ಬಾವಿ ಕೊರೆಯಲು ಚಾಲನೆ ನೀಡಿದರು.
ಗ್ರಾಮದಲ್ಲಿ ಇತ್ತೀಚೆಗೆ ಸರ್ಕಾರಿ ಕೊಳವೆ ಬಾವಿ ಕೊರೆಯುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಜಾಗದ ವಿಚಾರದಲ್ಲಿ ಒಮ್ಮತ ಮೂಡದೇ ಗ್ರಾಮಕ್ಕೆ ಬಂದಿದ್ದ ಬೋರ್ವೆಲ್ ಲಾರಿಗಳನ್ನು ಅಡ್ಡಗಟ್ಟಿ ಪರ, ವಿರೋಧವಾಗಿ ಅಹೋರಾತ್ರಿ ಧರಣಿ ನಡೆಸಿದ್ದರಿಂದ ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ನೆಲೆಸಿತ್ತು. ಅಲ್ಲದೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೊಟ್ಟ ಭರವಸೆಯಂತೆ ಗ್ರಾಮದಲ್ಲಿ ಹೊಸ ಕೊಳವೆ ಬಾವಿ ಕೊರೆಸಲಿಲ್ಲವೆಂದು ಆರೋಪಿಸಿ ತಾಳಹಳ್ಳಿ ಗ್ರಾಮದ ನೂರಾರು ಮಹಿಳೆಯರು ಕಳೆದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಲಿ ಬಿಂದಿಗೆಗಳ ಸಮೇತ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಈ ಸಂದರ್ಭದಲ್ಲಿ ಗ್ರಾಮದ ರಮೇಶ್, ದೇವರಾಜ್, ನಾರಾಯಣಸ್ವಾಮಿ, ಮುನಿರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ