ಶಾಸಕರ ಸಮ್ಮುಖದಲ್ಲಿ 2 ಗುಂಪುಗಳ ನಡುವೆ ಘರ್ಷಣೆ


Team Udayavani, Dec 29, 2019, 3:00 AM IST

shasakara

ಗುಡಿಬಂಡೆ: ತಾಲೂಕಿನ ಗೆಗ್ಗಿಲರಾಳ್ಳಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ವೇಳೆ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಸಮ್ಮುಖದಲ್ಲಿ ಎರಡು ಗುಂಪುಗಳ ನಡುವೆ ಅವಾಚ್ಯ ಶಬ್ದಗಳ ನಿಂದನೆ, ಘರ್ಷಣೆ ನಡೆದಿರುವ ಘಟನೆ ಗೆಗ್ಗಿಲರಾಳ್ಳಹಳ್ಳಿಯಲ್ಲಿ ಶನಿವಾರ ನಡೆದಿದೆ.

ತಾಲೂಕಿನ ಸೋಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಗೆಗ್ಗಿಲರಾಳ್ಳಹಳ್ಳಿಯಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಡಿ.28 ರಂದು ದಿನಾಂಕ ನಿಗದಿಯಾಗಿತ್ತು. ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಘಟಕದ ಉದ್ಘಾಟನೆ ನೆರವೇರಿಸಿ ವಾಪಸ್ಸಾಗುವ ವೇಳೆ ಸೋಮೇನಹಳ್ಳಿ ಗ್ರಾಪಂ ಅಧ್ಯಕ್ಷೆ ಪತಿ ಮಂಜುನಾಥ್‌ ಹಾಗೂ ತಾಪಂ ಅಧ್ಯಕ್ಷೆ ಪತಿ ಕೃಷ್ಣೇಗೌಡರ ನಡುವೆ ಹಳೆಯ ಕಾಮಗಾರಿಯೊಂದರ ವಿಚಾರಕ್ಕೆ ವಾಕ್ಸಮರ ಉಂಟಾಗಿದೆ.

ಇದೇ ವೇಳೆ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ಆಗಿದ್ದರೂ ಕೂಡ ತಾವು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಶಾಸಕ ಸುಬ್ಬಾರೆಡ್ಡಿ ವಿರುದ್ಧ ಮಂಜುನಾಥ ದೂರಿದ್ದಾರೆ. ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಮಂಜುನಾಥ ಹಾಗೂ ಶಾಸಕರ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.

ಹೊಡೆದಾಟ: ಶಾಸಕರಿಗೆ ಏಕವಚನದಲ್ಲಿ ಮಾತನಾಡಿದ್ದೀರಿ ಎಂದು ಮಂಜುನಾಥ ಮೇಲೆ ಶಾಸಕರ ಬೆಂಬಲಿಗರು ಹಾಗೂ ಮಂಜುನಾಥ ಪರವಾಗಿ ಕೆಲವರ ಮಧ್ಯೆ ಮಾತಿನ ಚಕಮಕಿ ನಡೆದು ಗಂಡಸರು, ಹೆಂಗಸರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸ್ವಲ್ಪ ಸಮಯದ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಗುಡಿಬಂಡೆ ಪೊಲೀಸರು ಗಲಾಟೆಯನ್ನು ಶಮನಗೊಳಿಸಿದರು.

ಗಲಾಟೆಗೆ ಕಾರಣ: ಗಲಾಟೆಗೆ ಮುಖ್ಯ ಕಾರಣ ಗೆಗ್ಗಿಲರಾಳ್ಳಹಳ್ಳಿ ಗ್ರಾಮದ ಕುಡಿಯುವ ನೀರಿನ ಕೊಳವೆಬಾವಿಗೆ ಕೇಬಲ್‌ ಗ್ರಾಮ ಪಂಚಾಯತಿ ಅಧ್ಯಕ್ಷೆ ಪತಿ ಮಂಜುನಾಥ್‌ ಅಳವಡಿಸಿದ್ದು, ಈ ಕೇಬಲ್‌ ಹಣವನ್ನು ತಾಪಂ ಅಧ್ಯಕ್ಷೆ ಪತಿ ಕೃಷ್ಣೇಗೌಡ ಬ್ಯಾಂಕ್‌ ಖಾತೆಗೆ 1.18 ಲಕ್ಷ ರೂ . ಜಮಾ ಆಗಿದೆ ಎನ್ನಲಾಗಿದೆ. ಇದರಲ್ಲಿ 68000 ರೂ. ಕೊಟ್ಟಿದ್ದು, ಉಳಿದ 50000 ರೂ. ನಮಗೆ ಕೊಡಿಸಬೇಕೆಂದು ಮಂಜುನಾಥ ಶಾಸಕರಿಗೆ ಕೇಳಿದರು.

ಆಗ ಶಾಸಕರು ಕೃಷ್ಣೇಗೌಡರಿಂದ 50 ಸಾವಿರ ರೂ. ಮಂಜುನಾಥ್‌ಗೆ ಕೊಡಿಸಿ ಎಂದು ಎಡಬ್ಲೂಇಗೆ ತಿಳಿಸಿರುತ್ತಾರೆ. ಬಳಿಕ ಕೃಷ್ಣೇಗೌಡ ಮತ್ತು ಮಂಜುನಾಥ್‌ ಬೆಂಬಲಿಗರು ಗಲಾಟೆ ಮಾಡಿಕೊಂಡು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಂಜುನಾಥ್‌ ಹಾಗೂ ಕೃಷ್ಣೇಗೌಡರ ಮಧ್ಯೆ ಈ ಹಿಂದೆ ಉತ್ತಮ ಸಂಬಂಧ ಇದ್ದಾಗ ಕೊಳವೆಬಾವಿಗೆ ಕೇಬಲ್‌ ಅಳವಡಿಸಲಾಗಿತ್ತು. ಇದರ ಹಣವನ್ನು ಮಂಜುನಾಥ್‌ ಭರಿಸಿದ್ದರು ಎನ್ನಲಾಗಿದೆ.

ಜಾತಿ ನಿಂದನೆ ದೂರು: ನಿವೇಶನಗಳ ವಿಚಾರವಾಗಿ ನಡೆದ ಗಲಾಟೆಯಲ್ಲಿ ಗ್ರಾಪಂ ಅಧ್ಯಕ್ಷೆ ಪತಿ ಮತ್ತು ಸಂಬಂಧಿರು ಜಾತಿ ನಿಂದನೆ ಮಾಡಿ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಮತ್ತು ಪ್ರಾಣ ಬೆದರಿಕೆ ಹಾಕಿದ್ದಾರೆ. ನಮಗೆ ನ್ಯಾಯ ನೀಡಿ ರಕ್ಷಣೆ ನೀಡಬೇಕೆಂದು ಮಂಜುನಾಥ್‌ ವಿರುದ್ಧ ಗೆಗ್ಗಿಲರಾಳ್ಳಿ ಲಕ್ಷ್ಮಮ್ಮ ಎಂಬುವರು ಗುಡಿಬಂಡೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪ್ರತಿ ದೂರು: ಈ ಬಗ್ಗೆ ಗ್ರಾಪಂ ಅಧ್ಯಕ್ಷೆ ರಜನಿ ಸಹ ನಮ್ಮ ಮೇಲೆ ಕೃಷ್ಣೇಗೌಡ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಪ್ರತಿ ದೂರನ್ನು ಗುಡಿಬಂಡೆ ಪೊಲೀಸ್‌ ಠಾಣೆಯಲ್ಲಿ ನೀಡಿದ್ದಾರೆ.

ರೌಡಿಸಂಗೆ ಹೆದರುವ ವ್ಯಕ್ತಿಯಲ್ಲ – ಸುಬ್ಬಾರೆಡ್ಡಿ: ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಸೋಮೇಶ್ವರ ಗ್ರಾಮದ ಹಾಲಿನ ಡೇರಿ ಕಟ್ಟಡ ಉದ್ಘಾಟನೆ ವೇಳೆ ನಾನು ಕ್ಷೇತ್ರದ ಉದ್ಧಾರಕ್ಕೆ ಬಡವರ ಕಲ್ಯಾಣಕ್ಕಾಗಿ ಶಾಸಕನಾಗಿರುವುದು. ನಿಮ್ಮ ಕೆಲಸಗಳನ್ನು ಮಾಡಿಕೊಡಲು ನಾನಿರುವುದು. ನಿಮ್ಮ ಸಮಸ್ಯೆಗಳನ್ನು ನೇರವಾಗಿ ಬಂದು ನನ್ನ ಬಳಿ ಹೇಳಿ.

ಗುಂಪಾಗಿ ಬರುವುದು, ರೌಡಿಸಂ ಮಾಡುವುದು ಸರಿಯಲ್ಲ. ರೌಡಿಸಂಗೆ ಹೆದರುವ ವ್ಯಕ್ತಿ ನಾನಲ್ಲ ಎಂದರು. ಅಭಿವೃದ್ಧಿ ವಿಚಾರಕ್ಕೆ ಕಾಲು ಬೇಕಾದರೂ ಹಿಡಿಯುತ್ತೇನೆ. ಆದರೆ ರೌಡಿಸಂ, ದೌರ್ಜನ್ಯಗಳನ್ನು ಎಲ್ಲಿ ಮಟ್ಟ ಹಾಕಬೇಕೊ ಅಲ್ಲಿಯೇ ಮಟ್ಟ ಹಾಕುತ್ತೇನೆ ಎಂದು ಗೆಗ್ಗಿಲರಾಳ್ಳಹಳ್ಳಿ ಬಳಿ ನಡೆದ ಘಟನೆಗೆ ಪರೋಕ್ಷವಾಗಿ ಟಾಂಗ್‌ ನೀಡಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.