ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಜನಧ್ವನಿ ಜಾಥಾ
Team Udayavani, Mar 3, 2021, 3:41 PM IST
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಅನುಸರಿಸುತ್ತಿರುವ ಜನ ವಿರೋಧಿ ಧೋರಣೆಗಳನ್ನುಖಂಡಿಸಿ, ಪೆಟ್ರೋಲ್-ಡೀಸೆಲ್ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮಾ.3 ರಂದು ಚಿಕ್ಕಬಳ್ಳಾಪುರ ನಗರದಲ್ಲಿ ಜನಧ್ವನಿ ಜಾಥಾಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವರೆಡ್ಡಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಬಿಜೆಪಿಸರ್ಕಾರ ಜನ ವಿರೋಧಿ ಧೋರಣೆ ಅನುಸರಿಸಿ ಬಡವರು ಮತ್ತು ಮಧ್ಯಮ ವರ್ಗದವರನ್ನುಸಂಕಷ್ಟದಲ್ಲಿ ಸಿಲುಕಿಸಿ ಉದ್ಯಮಿಗಳಿಗೆ ಅನುಕೂಲಮಾಡುವ ಯೋಜನೆಗಳನ್ನು ಜಾರಿಗೊಳಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಕೆಶಿ, ಸಿದ್ದು ಚಾಲನೆ: ಕೋವಿಡ್ ಸೋಂಕಿನ ನೆಪದಲ್ಲಿ ಜನರನ್ನು ಲೂಟಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಜನರ ಧ್ವನಿಯಾಗಿ ಕಾಂಗ್ರೆಸ್ ಪಕ್ಷ ಮಾ.03 ರಂದು ಬೆಂಗಳೂರು ಗ್ರಾಮಾಂತರ ಹಾಗೂಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನಧ್ವನಿ ಜಾಥಾಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.
ಭನ್ನಾಭಿಪ್ರಾಯ ಸುಳ್ಳು, ವದಂತಿ: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಉಳಿಸುವ ಸಲುವಾಗಿ ಸ್ಥಳೀಯ ನಾಯಕರು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಇದೇ ವಿಚಾರವಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಭಿನ್ನಮತವಿದೆ ಇದೆಎನ್ನುವುದು ವದಂತಿ. ಇಬ್ಬರು ನಾಯಕರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು ಸ್ಪಷ್ಟಪಡಿಸಿದರು.
ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ಮಾತನಾಡಿ, ಕೋವಿಡ್ ಸೋಂಕಿನ ನೆಪದಲ್ಲಿ ಜನರಿಗೆ ತೊಂದರೆ ನೀಡುವ ಕಾಯಕವನ್ನು ಬಿಜೆಪಿ ಸರ್ಕಾರ ರೂಢಿಸಿಕೊಂಡಿದೆ ಎಂದು ದೂರಿದರು. ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಪ್ರಧಾನಕಾರ್ಯದರ್ಶಿ ಸೂರಿ, ಎನ್ಎಸ್ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ಕಿಸಾನ್ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಾತವಾರ ಕೃಷ್ಣಪ್ಪ, ಒಬಿಸಿಘಟಕದ ಅಧ್ಯಕ್ಷ ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಸುಜಾತ, ಪಟ್ರೇನಹಳ್ಳಿ ಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ