ಜಿಲ್ಲೆಯ ಜಲಮೂಲಗಳ ಸಂರಕ್ಷಣೆಗೆ ಮೊದಲ ಆದ್ಯತೆ
Team Udayavani, Aug 6, 2022, 3:21 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೆರೆ, ಕುಂಟೆ, ಕಾಲುವೆ, ಕಲ್ಯಾಣಿಗಳು, ರಾಜಕಾಲುವೆಗಳನ್ನು ಸಂರಕ್ಷಣೆ ಮಾಡಲು ಪ್ರಥಮ ಆದ್ಯತೆ ನೀಡಿ, ಒತ್ತುವರಿ ಮಾಡಿ ಕೊಂಡಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸ ಲಾಗು ವುದು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಹೇಳಿದರು.
ನಗರದ ವಿವಿಧ ಭಾಗಗಳಲ್ಲಿ ಹರಿಯುತ್ತಿರುವ ಕಾಲುವೆಗಳನ್ನು ವೀಕ್ಷಿಸಿ ಮಾತನಾಡಿ, ಮಳೆ ನೀರು ಸಂರಕ್ಷಣೆ ಮಾಡುವ ಸಲುವಾಗಿ ಕೆರೆ, ಕುಂಟೆ, ಕಾಲುವೆ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ವಿಶೇಷ ಆದ್ಯತೆ ನೀಡಿದೆ. ನಾಗರಿಕರು ಜಲಮೂಲ ಸಂರಕ್ಷಣೆ ಮಾಡಲು ಜಿಲ್ಲಾಡಳಿತ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಒತ್ತುವರಿ ಮಾಡಿದ್ರೆ ತೆರವು ಮಾಡಿ: ಯಾರಾದರೂ ಕೆರೆ, ಕಾಲುವೆ ಅಕ್ರಮ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು. ಇಲ್ಲದಿದ್ದಲ್ಲಿ ನಿರ್ದಾಕ್ಷಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿಥಿಲ ಮನೆಯಲ್ಲಿ ವಾಸ ಬೇಡ: ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಶಿಥಿಲಾವ್ಯವಸ್ಥೆಯಲ್ಲಿರುವ ಮನೆ ಯಲ್ಲಿ ನಾಗರಿಕರು ವಾಸ ಮಾಡಬಾರದೆಂದು ಮನವಿ ಮಾಡಿದರು. ಕಳೆದ ವರ್ಷ ಸುರಿದಿರುವ ಮಳೆಯಿಂದ ಹಾನಿ ಆಗಿರುವ ಮನೆಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗಿದೆ. ಕೆಲವೊಂದು ಮನೆಗೆ ಜಿಪಿಎಸ್ ಮಾಡಿದರೂ ಪರಿಹಾರ ಸಿಕ್ಕಿಲ್ಲ ಎಂಬ ದೂರು ಕೇಳಿ ಬಂದಿದೆ. ಅದನ್ನು ಸಹ ಇತ್ಯರ್ಥ ಮಾಡುವುದಾಗಿ ಡೀಸಿ ಭರವಸೆ ನೀಡಿದರು.
ಚರಂಡಿ ಕಾಲುವೆ ಸ್ವಚ್ಛಗೊಳಿಸಿ: ಜಿಲ್ಲೆಯ ನಗರ, ಗ್ರಾಮೀಣ ಪ್ರದೇಶದಲ್ಲಿರುವ ಕಾಲುವೆಗಳನ್ನು ಸ್ವಚ್ಛಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗಳಿಗೆ ಹರಿಯಲು ಕ್ರಮಕೈಗೊಳ್ಳಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾಕೃತಿಕ ವಿಪತ್ತಿನ ಹಿನ್ನೆಲೆಯಲ್ಲಿ ನಾಗರಿಕರ ದೂರು ಆಲಿಸುವ ಸಲುವಾಗಿ ಪ್ರತಿ ತಾಲೂಕಿನಲ್ಲಿ ಸಹಾಯವಾಣಿ ಕೇಂದ್ರ ತೆರೆದು, ಸಮಸ್ಯೆ ಇತ್ಯರ್ಥ ಮಾಡಲು ಅಧಿ ಕಾರಿಗಳಿಗೆ ಆದೇಶಿಸಲಾಗಿದೆ ಎಂದು ವಿವರಿಸಿದರು.
ಅಧಿಕಾರಿಗಳ ಜತೆ ಸಭೆ: ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಧಿಕಾರಿ ಎನ್.ಎಮ್.ನಾಗರಾಜ್ ಅವರು, ಶುಕ್ರವಾರ ಜೂಮ್ ಆ್ಯಪ್ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿಯ ತುರ್ತು ಸಭೆ ನಡೆಸಿದರು. ಸಭೆ ನಂತರ ನಗರದ ರಂಗಧಾಮ ಕೆರೆಯಿಂದ ಕಂದವಾರ ಕೆರೆ ಸಂಪರ್ಕಿಸುವ ಡಿವೈನ್ ಸಿಟಿ ಹತ್ತಿರದ ರಾಜಕಾಲುವೆ, ಕಂದವಾರ ಕೆರೆಯಿಂದ ಅಮಾನಿ ಗೋಪಾಲಕೃಷ್ಣಕೆರೆ ಕೆರೆ ಸಂಪರ್ಕಿಸುವ ಕಾಲುವೆ ಪರಿಶೀಲಿಸಿದರು.
ಕೊನೆಯದಾಗಿ ವಿನಾಯಕ ಬಡಾವಣೆಗೆ ಭೇಟಿ ನೀಡಿದ್ದರು. ಜಿಲ್ಲಾ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ತಹಶೀಲ್ದಾರ್ ಗಣಪತಿಶಾಸ್ತ್ರಿ, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ