ಅಂತರ್ಜಲ ವೃದ್ಧಿಗಾಗಿ ಇಂಗು ಗುಂಡಿ ನಿರ್ಮಾಣ

ಚಿಕ್ಕಬಳ್ಳಾಪುರದಲ್ಲಿ ಕೊಳವೆ ಬಾವಿಗಳ ಬಳಿ 557 ಇಂಗು ಗುಂಡಿ

Team Udayavani, Apr 7, 2021, 1:46 PM IST

ಅಂತರ್ಜಲ ವೃದ್ಧಿಗಾಗಿ ಇಂಗು ಗುಂಡಿ ನಿರ್ಮಾಣ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಬರಪೀಡಿತ ಜಿಲ್ಲೆಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯಉದ್ಯೋಗ ಖಾತ್ರಿ ಯೋಜನೆ ಒಂದು ರೀತಿಯ ವರದಾನವಾಗಿದೆ.ಮಳೆಗಾಲದಲ್ಲಿ ಮಳೆನೀರು ಸಂರಕ್ಷಣೆ ಮಾಡಲು ಮಳೆ ನೀರಿಕೋಯ್ಲು ಪದ್ಧತಿಯನ್ನು ಅಳವಡಿಸಿಕೊಂಡು, ನೀರುಪೂರೈಕೆಮಾಡುವ ಕೊಳವೆ ಬಾವಿಗಳಿಗೆ ಇಂಗು ಗುಂಡಿಗಳನ್ನು ನಿರ್ಮಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸಲಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂತರ್ಜಲಮಟ್ಟ ಕುಸಿದು ಸಾವಿರಾರುಅಡಿಗಳವರೆಗೆ ಕೊಳವೆ ಬಾವಿ ಕೊರೆದರೂ ನೀರು ಲಭಿಸುತ್ತಿಲ್ಲ.ಒಂದು ವೇಳೆ ನೀರು ಲಭಿಸಿದರೆ ಆ ನೀರಿನಲ್ಲಿ ಫ್ಲೋರೈಡ್‌ ಅಂಶಅಧಿಕವಾಗಿ ಕಂಡು ಬಂದಿರುವುದು ಅಘಾತಕಾರಿ ಬೆಳವಣಿಗೆಯಾಗಿದೆ. ಅಂತರ್ಜಲ ಮಟ್ಟ ಕುಸಿತದಿಂದ ಲಭಿಸಿರುವ ನೀರು ಸೇವಿಸಿ,ದಂತಕ್ಷಯ ಮತ್ತಿತರ ಖಾಯಿಲೆಗಳಿಂದ ಜನ ನರಳುತ್ತಿರುವುದುಅಂಕಿ-ಅಂಶಗಳಿಂದ ದೃಢಪಟ್ಟಿದೆ.

ಯೋಜನೆ ಪರಿಣಾಮಕಾರಿ ಅನುಷ್ಠಾನವಾಗಿಲ್ಲ: ಜಿಲ್ಲೆಯಲ್ಲಿಅಂತರ್ಜಲಮಟ್ಟವನ್ನು ವೃದ್ಧಿ ಗೊಳಿಸುವ ಸಲುವಾಗಿ ಜಿಲ್ಲಾಡಳಿತಅನೇಕ ರೀತಿಯ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಮೂಡಿಸಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆನೀರು ಸಂರಕ್ಷಣೆಮಾಡುವ ಕೆಲಸ ಆಗಿಲ್ಲ ಎಂಬ ಕೊರಗು ಕಾಣುತ್ತಿದೆ. ಗ್ರಾಮೀಣಅಭಿವೃದ್ಧಿ ಮತ್ತು ನೈರ್ಮಲ್ಯಕ್ಕೆ ಪೂರಕವಾಗಿರುವ ಮಹಾತ್ಮ ಗಾಂಧಿರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕೊಳವೆಬಾವಿ ಬಳಿ ಇಂಗುಗುಂಡಿಗಳನ್ನು ನಿರ್ಮಿಸುವ ಜಲಮರುಪೂರ್ಣಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನೆಯಾಗಿಲ್ಲ. ಇದರಿಂದ ಅಂತರ್ಜಲ ಮಟ್ಟದ ಪ್ರಮಾಣ ಹೆಚ್ಚಾಗಿಲ್ಲ.

ಚಿಕ್ಕಬಳ್ಳಾಪುರದಲ್ಲಿ ಅಧಿಕ ನಿರ್ಮಾಣ: ಜಿಲ್ಲೆಯಲ್ಲಿ ನರೀಗಾ ಯೋಜನೆಯಡಿ ಜಲಮರುಪೂರ್ಣಗೊಳಿಸಲು ಕೊಳವೆ ಬಾವಿಗಳಬಳಿ 557 ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ. ಆ ಪೈಕಿಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಅಂದರೆ380 ಇಂಗು ಗುಂಡಿಗಳನ್ನು ನಿರ್ಮಿಸಲಾಗಿದೆ. ತದನಂತರಬಾಗೇಪಲ್ಲಿ ತಾಲೂಕಿನಲ್ಲಿ 66, ಶಿಡ್ಲಘಟ್ಟ ತಾಲೂಕಿನಲ್ಲಿ 38,ಗುಡಿಬಂಡೆ ತಾಲೂಕಿನಲ್ಲಿ 26, ಗೌರಿಬಿದನೂರು ತಾಲೂಕಿನಲ್ಲಿ 23,ಜಿಲ್ಲೆಯ ವಾಣಿಜ್ಯ ಕೇಂದ್ರ ಚಿಂತಾಮಣಿ ತಾಲೂಕಿನಲ್ಲಿ ಅತೀ ಕಡಿಮೆಅಂದರೆ 24 ಇಂಗು ಗುಂಡಿಗಳನ್ನು ನಿರ್ಮಿಸಿ, ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಬೀದಿ ನಾಟಕಗಳ ಮೂಲಕ ಜಾಗೃತಿ: ಗ್ರಾಮೀಣ ಪ್ರದೇಶದಲ್ಲಿಈಗಾಗಲೇ ಮಳೆನೀರು ಸಂರಕ್ಷಣೆ ಮಾಡುವ ಯೋಜನೆಗಳಿಗೆಆದ್ಯತೆ ನೀಡಲಾಗಿದೆ. ಅದರಲ್ಲಿ ಪ್ರಮುಖವಾಗಿ ನೀರು ಸಂರಕ್ಷಣೆಮಾಡಲು ಗ್ರಾಪಂ, ತಾಪಂ ಹಾಗೂ ಜಿಪಂಗಳ ಮೂಲಕ ಜನರಲ್ಲಿಮಿತನೀರು ಬಳಕೆ ಮಾಡಲು ಮತ್ತು ನೀರು ವ್ಯರ್ಥವಾಗದಂತೆಎಚ್ಚರವಹಿಸಬೇಕು ಎಂದು ಬೀದಿ ನಾಟಕಗಳ ಮೂಲಕ ಜಾಗೃತಿಮೂಡಿಸಲಾಗುತ್ತಿದೆ. ಜೊತೆಗೆ ಖಾಸಗಿ ಕೊಳವೆ ಬಾವಿಯನ್ನುಹೊಂದಿರುವ ರೈತರು ಮತ್ತು ನಾಗರಿಕರು ಜಲ ಮರುಪೂರ್ಣ ಗೊಳಿಸುವ ಇಂಗು ಗುಂಡಿಗಳನ್ನು ನಿರ್ಮಿಸಿಕೊಂಡರೆ, ಮುಂದಿನದಿನಗಳಲ್ಲಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸಲು ಸಾಧ್ಯವಾಗುತ್ತದೆ.

ನರೇಗಾ ಯೋಜನೆ ಮೂಲಕ ಕೊಳವೆಬಾವಿಗಳಿಗೆ ಇಂಗು ಗುಂಡಿ ನಿರ್ಮಿಸಲುಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಕೆರೆಗಳಪುನಶ್ಚೇತನ, ಕಲ್ಯಾಣಿಗಳ ನಿರ್ಮಾಣ, ಚೆಕ್‌ಡ್ಯಾಂಸಹಿತ ಅಂತರ್ಜಲ ಮಟ್ಟ ವೃದ್ಧಿಗೊಳಿಸುವಕಾಮಗಾರಿಗೆ ಆದ್ಯತೆ ನೀಡಲಾಗಿದೆ. ಸಚಿವಸೂಚನೆ ಮೇರೆಗೆ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಕೊಳವೆ ಬಾವಿಗಳ ಬಳಿ ಇಂಗುಗುಂಡಿನಿರ್ಮಿಸಿ, ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ● ಪಿ.ಶಿವಶಂಕರ್‌,  ಜಿಪಂ ಸಿಇಒ, ಚಿಕ್ಕಬಳ್ಳಾಪುರ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತ್ರಿ ಯೋಜನೆಯನ್ನುಪರಿಣಾಮಕಾರಿ ಅನುಷ್ಠಾನಕ್ಕೆ ಈಗಾಗಲೇ ಜಿಪಂಸಿಇಒಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿಸರ್ಕಾರಿ ಮತ್ತು ಖಾಸಗಿ ಕೊಳವೆ ಬಾವಿಗಳ ಬಳಿಇಂಗು ಗುಂಡಿಗಳನ್ನು ನಿರ್ಮಿಸಿ, ಅಂತರ್ಜಲಮಟ್ಟವನ್ನು ವೃದ್ಧಿಗೊಳಿಸಿ, ಮಳೆ ನೀರು ಸಂರಕ್ಷಣೆ,ಮಿತ ನೀರು ಬಳಕೆ ಕುರಿತು ಜಾಗೃತಿ ಮೂಡಿಸಲಾಗುವುದು. ● ಡಾ.ಕೆ.ಸುಧಾಕರ್‌, ಸಚಿವ

 

-ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.