ಬೆಳೆ ಸಮೀಕ್ಷೆ ಯಶಸ್ವಿಗೆ ಸಹಕರಿಸಿ
Team Udayavani, Sep 14, 2020, 2:50 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ರೈತರಿಗೆ ತಲುಪಿಸುವ ಸಲುವಾಗಿ ಆರಂಭಿಸಿರುವ ಬೆಳೆ ಸಮೀಕ್ಷೆ ಯೋಜನೆಯನ್ನು ಯಶಸ್ವಿಗೊಳಿಸಲು ರೈತರು ಸಹಕರಿಸಬೇಕೆಂದು ತಹಶೀಲ್ದಾರ್ ಕೆ.ಅರುಂಧತಿ ಮನವಿ ಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಶೆಟ್ಟಹಳ್ಳಿಹೋಬಳಿಯ ಗಡಿಮಿಂಚೇನಹಳ್ಳಿಹಾಗೂ ಶೆಟ್ಟಿಹಳ್ಳಿ ಗ್ರಾಮದಲ್ಲಿ ರೈತರ ತೋಟದಲ್ಲಿ ಬೆಳೆ ಸಮೀಕ್ಷೆ ನಡೆಸಿ ಮಾತನಾಡಿದ ಅವರು, ರೈತರು ತಮ್ಮ ಮೊಬೈಲ್ ಫೋನ್ ಮೂಲಕ ಕೃಷಿ ಇಲಾಖೆ ಸಿದ್ಧಪಡಿಸಿರುವ ಆ್ಯಪ್ ಬಳಸಿಕೊಂಡು ಬೆಳೆ ನೋಂದಣಿ ಮಾಡಿಸಿಕೊಂಡಲ್ಲಿ ಸರ್ಕಾರಗಳಿಂದ ದೊರೆಯುವ ಸೌಲಭ್ಯ ಪಡೆಯಲು ಅನುಕೂಲ ವಾಗುತ್ತದೆ ಎಂದು ರೈತರಲ್ಲಿ ಅರಿವು ಮೂಡಿಸಿದರು.
ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಂದಲೇ ಅವರ ಫೋನ್ಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲು ಕ್ರಮ ಕೈಗೊಂಡಿದ್ದೇವೆ ಎಂದರು. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಡಾ.ಎಸ್. ವಿ.ಮಂಜುನಾಥ್ ಮಾತ ನಾಡಿ, ಕೃಷಿ ಇಲಾಖೆಯಿಂದ ದೊರೆ ಯುವ ಸೌಲಭ್ಯಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಬೆಳೆ ಸಮೀಕ್ಷೆ ಯೋಜನೆ ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ರೈತರು ಸಹ ಪೂರಕವಾಗಿ ಸ್ಪಂದಿಸುತ್ತಿದ್ದಾರೆ.
ಸಹಕಾರ ನೀಡಿ ಇಲಾಖೆ ನೀಡಿರುವ ಅವಧಿಯೊಳಗೆ ಬೆಳೆ ಸಮೀಕ್ಷೆ ಅಭಿಯಾನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!