ಡಿಸಿಸಿ ಬ್ಯಾಂಕ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ರಮೇಶ್‌ಕುಮಾರ್‌ರಿಂದ ಡಿಸಿಸಿ ಬ್ಯಾಂಕ್‌-ಕೋಚಿಮುಲ್‌ ರಾಜಕೀಯ ದುರುದ್ದೇಶ: ಸಚಿವ

Team Udayavani, Oct 21, 2021, 12:23 PM IST

corruption in the DCC Bank – Allegation

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಮತ್ತು ಮಹಿಳೆಯರ ಅಭಿವೃದ್ಧಿಗಾಗಿ ಸ್ಥಾಪನೆ ಆಗಿರುವ ಡಿಸಿಸಿ ಬ್ಯಾಂಕಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ಈ ಕುರಿತು ಸಮಗ್ರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಶೀಘ್ರ ಜೈಲಿಗೆ ಕಳುಹಿಸಲಾ ಗುವುದೆಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕೋ ಲಾರ-ಚಿಕ್ಕಬಳ್ಳಾಪುರ ಜಿಲ್ಲೆಯನ್ನು ತಮ್ಮ ಕಪಿ ಮುಷ್ಠಿಯಲ್ಲಿ ಇಟ್ಟುಕೊಂಡು ರಾಜಕೀಯ ಬೇಳೆ ಬೇಯಿ ಸಿಕೊಳ್ಳಲು ಹೊರಟಿ ರುವ ವಿಧಾನಸಭೆ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ರ ತಂತ್ರಗಾರಿಕೆ ನಡೆಯುವುದಿಲ್ಲ. ಡಿಸಿಸಿ ಬ್ಯಾಂಕಿಗೆ ರಮೇಶ್‌ಕುಮಾರ್‌ ಅವರು ರಿಂಗ್‌ ಮಾಸ್ಟರ್‌ ಆಗಿದ್ದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕೇವಲ ಆ್ಯಕ್ಟರ್‌ ಆಗಿದ್ದಾರೆ ಎಂದು ಲೇವಡಿ ಮಾಡಿದರು.

 ದುರ್ಬಳಕೆ: ಅವಳಿ ಜಿಲ್ಲೆಯಲ್ಲಿರುವ ಡಿಸಿಸಿ ಬ್ಯಾಂಕ್‌ , ಕೋಚಿಮುಲ್‌ ಸಂಸ್ಥೆಯನ್ನು ದುರ್ಬಳಕೆ ಮಾಡಿ ಕೊಂಡು ರಾಜಕೀಯ ಲಾಭ ಮಾಡಿಕೊಳ್ಳಲು ಮಾಜಿ ಸ್ಪೀಕರ್‌ ದುರುದ್ದೇಶ ಹೊಂದಿದ್ದಾರೆ. ಡಿಸಿಸಿ ಬ್ಯಾಂಕ್‌ ನಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆದಿದೆ. ಸಹಕಾರಿ ಇಲಾಖೆ ಅಧಿಕಾರಿಗಳು ಭ್ರಷ್ಟರೊಂದಿಗೆ ಕೈಜೋಡಿಸಿ ದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಸಹಕಾರ ಸಚಿವ ಎಚ್‌.ಟಿ. ಸೋಮಶೇ ಖರ್‌ ಅವರು ಎಲ್ಲಾ ಮಾಹಿತಿ ತಿಳಿದಿದ್ದಾರೆ.

ಬ್ಯಾಂಕ್‌ನಲ್ಲಿ ನಡೆದಿರುವ ಭ್ರಷ್ಟಾ ಚಾರದ ಕುರಿತು ತನಿಖೆ ನಡೆಸಲು ಕ್ರಮ ಕೈಗೊಂಡರೆ ಅದರ ವಿರುದ್ಧ ನ್ಯಾಯಾಲ ಯದ ಮೊರೆ ಹೋಗಿ ತನಿಖೆಗೆ ತಡೆಯಾ ಜ್ಞೆ ತಂದಿದ್ದಾರೆ. ಇದರಿಂದ ಅರ್ಥವಾಗು ತ್ತಿದೆ ಯಾರು ಕಳ್ಳರೆಂದು ಎಂದು ಕಿಡಿಕಾರಿದರು.

ಇದನ್ನೂ ಓದಿ;- ಎಸ್‌ಟಿ ವರ್ಗಕ್ಕೆ ಶೇ.7.5 ಮೀಸಲು ಕಲ್ಪಿಸಿ

ಶಕುನಿ ಪಾತ್ರ ವಹಿಸುತ್ತಿರುವ ಶಿವಶಂಕರರೆಡ್ಡಿ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ಪ್ರಯತ್ನ ಮಾಡಿ ಇದೀಗ ಅದನ್ನು ವಿರೋಧಿಸುವ ಮೂಲಕ ಗೌರಿಬಿದನೂರು ಶಾಸಕ ಶಿವಶಂಕರರೆಡ್ಡಿ ಅವರು ಶಕುನಿಯಂತೆ ವರ್ತಿಸುತ್ತಿ ದ್ದಾರೆ. ಜಿಲ್ಲೆಯಲ್ಲಿ ನನಗೆ ಎಲ್ಲಿ ಒಳ್ಳೆಯ ಹೆಸರು ಬರುತ್ತದೆ ಎಂಬ ಏಕೈಕ ಕಾರಣಕ್ಕಾಗಿ ರಾಜಕೀಯ ದುರುದ್ದೇಶದಿಂದ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್‌ ಮಾಡಲು ಹೊರಟಿದ್ದಾರೆ ಎಂದರು.

 ಶ್ರೀನಿವಾಸ್‌ಗೌಡರಿಗೆ ಮಕ್ಮಲ್‌ ಟೋಪಿ: ಕೋಲಾರ ಕ್ಷೇತ್ರ ಶಾಸಕ ಕೆ.ಶ್ರೀನಿವಾಸ್‌ಗೌಡ ಅವರು ಒಂದು ಬಾರಿಗೆ ರಮೇಶ್‌ಕುಮಾರ್‌ರನ್ನು ನಂಬಿ ಕೆಟ್ಟಿದ್ದಾರೆ. ಮತ್ತೂಮ್ಮೆ ನಂಬುವುದಕ್ಕೆ ಹೊರಟಿದ್ದಾರೆ. ಹೇಗೋ ಅವರನ್ನು ಮಕ್ಮಲ್‌ ಟೋಪಿ ಹಾಕಿದ್ದಾರೆ ಜತೆಗೆ ಡಿಸಿಸಿ ಬ್ಯಾಂಕಿನಿಂದ ಕೋಲಾರ ಕ್ಷೇತ್ರದ ಜನರಿಗೆ ಹೆಚ್ಚಿನ ಸಾಲ ಸೌಲಭ್ಯ ನೀಡುವ ಆಮಿಷ ಒಡ್ಡಿದ್ದಾರೆ.

ರಾಜ್ಯ ದಲ್ಲಿ ಕೋಲಾರ ಡಿಸಿಸಿ ಬ್ಯಾಂಕನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊ ಳ್ಳುತ್ತಿದ್ದಾರೆ. ಸಾಲ ವಿತರಣೆ ಯಲ್ಲೂ ತಾರತಮ್ಯ ನೀತಿ ಅನುಸರಿಸುತ್ತಿದ್ದು ಬ್ಯಾಂಕಿನ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಶಾಮೀಲಾಗಿರು ವವರನ್ನು ಜೈಲಿಗೆ ಕಳುಹಿಸುವವರೆಗೂ ವಿರಮಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಕೆ.ಎಚ್‌.ಮುನಿಯಪ್ಪರನ್ನು ಸೋಲಿಸಿದ ಮಹಾನುಭಾವರು: ಕೋಲಾರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರು ರಮೇಶ್‌ಕುಮಾರ್‌ ಮತ್ತಿತರರನ್ನು ಕಾಂಗ್ರೆಸ್‌ಗೆ ಕರೆ ತಂದರು. ಇವರೆಲ್ಲಾ ಸೇರಿ ಅವರನ್ನೇ ಸೋಲಿಸಿದರು. (ಕೆ.ಎಚ್‌.ಮುನಿಯಪ್ಪ) ಇಂತಹವರ ವಿರುದ್ಧ ಕ್ರಮ ಜರುಗಿಸುವ ಬದಲಿಗೆ ಅವರನ್ನು ಕಾಂಗ್ರೆಸ್‌ ಶಿಸ್ತು ಸಮಿತಿಯಲ್ಲಿ ಸ್ಥಾನಮಾನ ಕೊಟ್ಟಿರುವುದು ಆ ಪಕ್ಷದ ದಿವಾಳಿ ತನಕ್ಕೆ ಸಾಕ್ಷಿ.

ಇದು ಕಾಂಗ್ರೆಸ್‌ ಹಣೆಬರಹ ಎಂದು ವ್ಯಂಗ್ಯ ಮಾಡಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಎಲ್ಲಾ ಪ್ರಯತ್ನ ಮಾಡಿ ಕನ್ನಡಿಗ ರನ್ನು ಸುರಕ್ಷಿತವಾಗಿ ಕರೆ ತರುತ್ತೇವೆ ಎಂದ ಸಚಿವರು, ಮುಖ್ಯಮಂತ್ರಿಗಳು ಹಾನ್‌ಗಲ್‌ ಉಪ ಚುನಾವಣೆಗೆ ಜವಾಬ್ದಾರಿ ನೀಡಿದ್ದಾರೆ. ಅದನ್ನು ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದರು.

ರಮೇಶ್‌ಕುಮಾರ್‌-ಶಿವಶಂಕರರೆಡ್ಡಿ ಅಡ್ಡಗಾಲು-

ಕೋಲಾರ -ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿ ಕಾರ್ಯಕಾರಿ ಸಮಿತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಮಾಡಲು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.

ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಮಾಜಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಅವರು ಅಡ್ಡಗಾಲು ಹಾಕಲು ಹೊರಟಿದ್ದಾರೆ. ಇಂತಹವರು 100 ಜನ ಅಡ್ಡ ಬಂದರೂ ಚಿಕ್ಕಬಳ್ಳಾಪುರ ಜಿಲ್ಲೆ ಜನ ಮತ್ತು ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿ ಶತಾಯಗತಾಯ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್‌ ಸ್ಥಾಪಿಸುವುದೇ ತನ್ನ ಮುಖ್ಯ ಗುರಿ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.