ಕೋವಿಡ್‌ 19 ಲಾಕ್‌ಡೌನ್‌ನಲ್ಲಿ ಬೆಂದ ಬಾಣಸಿಗರು


Team Udayavani, May 13, 2020, 11:13 AM IST

banasigaaru

ಚಿಕ್ಕಬಳ್ಳಾಪುರ: ಕೋವಿಡ್‌ 19 ಲಾಕ್‌ಡೌನ್‌ ಪರಿಣಾಮ ಅನೇಕ ಉದ್ಯಮಗಳಿಗೆ ಹೊಡೆತ ಬಿದ್ದಂತೆ ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯ ಸಭೆ, ಸಮಾರಂಭ ಅದರಲ್ಲೂ ಶುಭ ಸಮಾರಂಭಗಳಲ್ಲಿ ಅಡುಗೆ ತಯಾರಿಸಲು ತೆರಳುತ್ತಿದ್ದ  ಬಾಣಸಿಗರ ಕೈಗಳಿಗೆ ಕೆಲಸ ಇಲ್ಲದೇ ಈಗ ಬೆಂದು ಬೆಂಡಾಗಿದ್ದಾರೆ.

ಕೋವಿಡ್‌ 19 ಸೋಂಕು ಹರಡುವುದನ್ನು ತಡೆ ಯುವ ಉದ್ದೇಶದಿಂದ ಲಾಕ್‌ಡೌನ್‌ ಘೋಷಿ ಸಿದ್ದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ದೃಷ್ಟಿಯಿಂದ ಸರ್ಕಾರಗಳು  ಮದುವೆ, ನಾಮಕಾರಣ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರುವ ಜನರನ್ನು ನಿಯಂತ್ರಿಸಲು 50 ಮಂದಿಗಿಂತ ಹೆಚ್ಚು ಸೇರಬಾರದೆಂದು ಮಿತಿ ಹೇರಿರುವುದರಿಂದ ಅಡುಗೆ ತಯಾರಿಸುವ ಬಾಣಸಿಗರು ಕೆಲಸ  ಇಲ್ಲದೇ ಪರದಾಡಬೇಕಿದೆ.

3000 ಕ್ಕೂ ಅಧಿಕ ಮಂದಿ: ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಮದುವೆ, ನಾಮಕಾರಣ ಮತ್ತಿತರ ಶುಭ ಕಾರ್ಯಗಳಿಗೆ ಅಡುಗೆ ತಯಾರಿಸುವ ತಂಡಗಳು ಇದ್ದು ಅಡುಗೆ ಮೇಸಿOಉಗಳ ಜೊತೆಗೆ ಅಡುಗೆ ಬಡಿಸುವ ಮಂದಿಗೂ ಲೆಕ್ಕವಿಲ್ಲ. ಪ್ರತಿ  ತಾಲೂಕಿನಲ್ಲಿ ಇಂತಹ ಗುಂಪುಗಳು ಹತ್ತಾರು ಇದ್ದು ಜಿಲ್ಲೆಯಲ್ಲಿ ಅಂದಾಜಿನ ಪ್ರಕಾರ 2,500, 3000 ಕ್ಕೂ ಅಧಿಕ ಮಂದಿ ಅಡುಗೆ ತಯಾರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಆದರೆ ಸತತ ಎರಡು ತಿಂಗಳಿಂದ ಕೋವಿಡ್‌ 19  ಲಾಕ್‌ಡೌನ್‌ನಿಂದ ಯಾವುದೇ ಅಡುಗೆ ತಯಾರಿಸುವ ಕಾರ್ಯ ಇಲ್ಲದೇ ಮನೆಗಳಲ್ಲಿ ಇದ್ದು ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ. ನಿತ್ಯ ಶುಭ ಸಮಾರಂಭಗಳಲ್ಲಿ ತರಹೇವಾರಿ ಊಟ ಸಿದಪಡಿಸಿ ಬಡಿಸುವುದರ ಜೊತೆಗೆ  ತಾನು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಬಾಣಸಿಗರು ಹಾಗೂ ಅವರ ಸಹಾಯಕರು ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ.

ನಮಗೂ ಕೊಡಿ ಪರಿಹಾರ: ಸರ್ಕಾರ ಇತ್ತೀಚೆಗೆ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಿಗೆ ಸೇರಿದಂತೆ ವಿವಿಧ ವಲಯಗಳಿಗೆ ಪರಿಹಾರ ಘೋಷಿಸಿದ್ದು, ಅದರಂತೆ ಕಾರ್ಮಿಕರಾಗಿರುವ ಅಡುಗೆ ತಯಾರಿಸುವ ಬಾಣಸಿಗರನ್ನು ಹಾಗೂ ಅವರ ಸಹಾಯಕರಿಗೂ ಸರ್ಕಾರ ಪರಿಹಾರ ನೀಡಬೇಕೆಂಬ ಆಗ್ರಹವನ್ನು ಜಿಲ್ಲೆಯ ಬಾಣಸಿಗರು ಮಾಡುತ್ತಿದ್ದಾರೆ.

ಇನ್ನೂ ಶುಭ ಕಾರ್ಯಗಳಿಗೆ ಕ್ಯಾಟರಿಂಗ್‌ ಪೂರೈಕೆ ಮಾಡುತ್ತಿದ್ದವರಿಗೂ ಲಾಕ್‌ಡೌನ್‌ ಸಂಕಷ್ಟ ತಂದೊಡ್ಡಿದೆ. ಕೆಲ ಕ್ಯಾಟರಿಂಗ್‌  ಮಾಲೀಕರು, ಹತ್ತಾರು ಕೂಲಿ ಕಾರ್ಮಿಕರನ್ನು ಹೊಂದಿದ್ದು ಅವರು ಆಂಧ್ರ, ತಮಿಳುನಾಡು ಹೀಗೆ ಉತ್ತರ ಭಾರತದಿಂದ ಬಂದಿದ್ದಾರೆ. ಆದರೆ ಅವರನ್ನು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಊರುಗಳಿಗೆ ಕಳುಹಿಸಲಾಗದೇ ಇಲ್ಲಿಯೂ ಇಟ್ಟುಕೊಳ್ಳಲಾಗದೇ ಸಂಕಷ್ಟದಲ್ಲಿದ್ದಾರೆ.

ಸರ್ಕಾರ ಈಗಾಗಲೇ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿದೆ. ಅದೇ ರೀತಿ ಸಭೆ, ಸಮಾರಂಭ, ಶುಭ ಕಾರ್ಯಗಳು ಇಲ್ಲದೇ ಸಂಕಷ್ಟದಲ್ಲಿರುವ ಅಡುಗೆ ತಯಾರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನೂರಾರು  ಬಾಣಸಿಗರಿಗೂ ಸರ್ಕಾರ 5000 ಸಾವಿರ ರೂ. ನೆರವು ಕೊಡಲಿ.
-ಬಾಬು, ಗಂಜಿಗುಂಟೆ, ಅಡುಗೆ ತಯಾರಿಸುವ ಮೇಸ್ತ್ರಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.