ಶಿಡ್ಲಘಟ್ಟ ತಾಲೂಕಿಗೆ ಕೋವಿಡ್ 19 ಪ್ರವೇಶ
Team Udayavani, Jun 18, 2020, 6:34 AM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಹಸಿರು ವಲಯವೆಂದು ಘೋಷಣೆಯ ಸಿದಟಛಿತೆ ಮಾಡಿ ಕೊಳ್ಳುತ್ತಿದ್ದ ವೇಳೆಯಲ್ಲಿ ಸುಮಾರು 3 ತಿಂಗಳಿಂದ ಕೋವಿಡ್ 19 ಮುಕ್ತವೆಂದು ಖ್ಯಾತಿ ಹೊಂದಿದ್ದ ಶಿಡ್ಲಘಟ್ಟ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ 19 ಸೋಂಕು ಪ್ರವೇಶಿಸಿದೆ.
ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿ ಯುವಕನೊಬ್ಬನಿಗೆ ಕೋವಿಡ್ 19 ಸೋಂಕು ಪತ್ತೆಯಾಗಿದ್ದು, ತಾಲೂಕಿನಲ್ಲಿ ಇದೇ ಮೊದಲ ಪ್ರಕರಣ ದಾಖಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕು ಆಡಳಿತ ಸೋಂಕಿತರ ಮನೆಯ ಸುತ್ತಮತ್ತಲಿನ 100 ಮೀ.ಪ್ರದೇಶವನ್ನು ಸೀಲ್ಡೌನ್ ಮಾಡಿ ಪೊಲೀಸರನ್ನು ನಿಯೋಜಿಸಿದ್ದಾರೆ.
ಸಾಮೂಹಿಕವಾಗಿ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಯುವಕನ್ನೊಬ್ಬನಿಗೆ ಸೋಂಕು ಪತ್ತೆಯಾದ ಕೂಡಲೇ ತಹಶೀಲ್ದಾರ್ ಕೆ.ಅರುಂಧತಿ, ತಾಪಂ ಇಒ ಶಿವಕುಮಾರ್, ಟಿಎಚ್ಒ ಡಾ.ವೆಂಕಟೇಶ್ಮೂರ್ತಿ, ಸಿಪಿಐ ಸುರೇಶ್ ಮತ್ತಿತರರು ಸೋಂಕಿತ ಯುವಕನಿಗೆ ಚಿಕ್ಕಬಳ್ಳಾಪುರದ ಐಸೋಲೇಷನ್ ಕೇಂದ್ರಕ್ಕೆ ಕಳುಹಿಸಿ ಸೋಂಕಿತ ಯುವಕನ ಕುಟುಂಬ ಸದಸ್ಯರು ಸೇರಿದಂತೆ 13 ಮಂದಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ಯುವಕನ ಸಂಪರ್ಕ ಸಾಧಿಸಿದ ಜನರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
ಜಿಲ್ಲಾಧಿಕಾರಿಗಳಿಗೆ ನಿರಾಶೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಪಂ ಸಿಇಒ ಫೌಝೀಯಾ ತರು ನ್ನುಮ್ ಕಾಳಜಿ ವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದ ಫಲ ದಿಂದಾಗಿ ಕೋವಿಡ್ 19 ಸೋಂಕು ನಿಯಂತ್ರಣ ದಲ್ಲಿದ್ದು, ಜಿಲ್ಲೆಯನ್ನು ಹಸಿರು ವಲಯವೆಂದು ಘೋಷಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಡೀಸಿಗೆ ನಿರಾಶೆಯಾಗಿದೆ. ಕೋವಿಡ್ 19 ಮುಕ್ತ ತಾಲೂಕಾಗಿದ್ದ ಶಿಡ್ಲಘಟ್ಟದಲ್ಲಿ ಕೋವಿಡ್ 19 ಪತ್ತೆಯಾಗಿದ್ದು, ಜಂಗಮ ಕೋಟೆ ಮಾತ್ರವಲ್ಲದೆ ತಾಲೂಕಿನಾದ್ಯಂತ ಆತಂಕ ಮನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ