![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಜಿಲ್ಲೆಯಲ್ಲಿ 99ಕ್ಕೆ ತಲುಪಿದ ಕೋವಿಡ್-19
Team Udayavani, May 24, 2020, 6:28 AM IST
![ji-99-sonku](https://www.udayavani.com/wp-content/uploads/2020/05/ji-99-sonku-620x465.jpg)
ಚಿಕ್ಕಬಳ್ಳಾಪುರ: ಮಹಾರಾಷ್ಟ್ರದಿಂದ ಕರೆ ತಂದಿರುವ ವಲಸೆ ಕಾರ್ಮಿಕರಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ 19 ಸೋಂಕು ಸ್ಫೋಟಗೊಳ್ಳುತ್ತಲೇ ಇದ್ದು, ಶುಕ್ರವಾರವಷ್ಟೇ 47 ಮಂದಿಯಲ್ಲಿ ಕಾಣಿಸಿಕೊಂಡಿದ್ದ ಸೋಂಕು, ಶನಿವಾರ ಹೊಸದಾಗಿ 26 ಮಂದಿಯಲ್ಲಿ ದೃಢಪಡುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ -19 ಶತಕದ ಅಂಗಳಕ್ಕೆ ಬಂದು ನಿಂತಿದೆ.
ಸೋಂಕಿತರು 99ಕ್ಕೆ ಏರಿಕೆ: ಸತತ 2 -3 ತಿಂಗಳಿಂದಲೂ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ 26ಕ್ಕೆ ಸೀಮಿತವಾಗಿ ಆ ಪೈಕಿ 19 ಮಂದಿ ಆಸ್ಪತ್ರೆಯಿಂದ ಡಿಸಾcರ್ಜ್ ಆಗುವ ಮೂಲಕ ಜೀವರು ನೆಮ್ಮದಿಯಿಂದ ಇದ್ದರು. ಆದರೆ ಲಾಕ್ಡೌನ್ ಸಡಿಲಿಕೆ ಬಳಿಕ ಮಹಾರಾಷ್ಟ್ರಕ್ಕೆ ತೆರಳಿದ್ದ ವಲಸೆ ಕಾರ್ಮಿಕರು ಜಿಲ್ಲೆಗೆ ಆಗಮಿಸಿದ ಎರಡೇ ದಿನದಲ್ಲಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 99ಕ್ಕೆ ಏರಿದ್ದು, ಎರಡು ದಿನದಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 73 ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಜಿಲ್ಲೆಯ ಜನರಲ್ಲಿ ಮಹಾಮಾರಿಯ ಆತಂಕ ಆವರಿಸುವಂತೆ ಮಾಡಿದೆ.
ಮೂರಂಕಿ ದಾಟುತ್ತೆ: ಜಿಲ್ಲೆಯ ಪಾಲಿಗೆ ಕರಾಳವಾಗಿದ್ದ ಕಳೆದ ಶುಕ್ರವಾರ ಒಂದೇ ದಿನ 47 ಪ್ರಕರಣಗಳು ಪತ್ತೆಯಾದರೆ, ಶನಿವಾರ ಸಂಜೆ ವೇಳೆಗೆ 26 ಹೊಸ ಪ್ರಕರಣಗಳು ಕಾಣಿಸಿಕೊಳ್ಳುವ ಮೂಲಕ ಶತಕಕ್ಕೆ ಒಂದು ಪ್ರಕರಣವಷ್ಟೇ ಬಾಕಿ ಇದೆ.
ಬಾಗೇಪಲ್ಲಿಗೂ ವಿಸ್ತರಿಸದ ಸೋಂಕು: ಜಿಲ್ಲೆಯಲ್ಲಿ ಇದುವರೆಗೂ ಗೌರಿಬಿದನೂರು, ಚಿಕ್ಕಬಳ್ಳಾಪುರ ಹಾಗೂ ವಾಣಿಜ್ಯ ನಗರಿ ಚಿಂತಾ ಮಣಿಗೆ ಮಾತ್ರ ಸೀಮಿತವಾಗಿದ್ದ ಕೋವಿಡ್ 19 ಸೋಂಕು, ಈಗ ಬಾಗೇಪಲ್ಲಿಗೂ ವಿಸ್ತರಿಸಿ ಕೊಂಡಿದೆ. ಮಹಾರಾಷ್ಟ್ರದಿಂದ ಆಗಮಿಸಿರುವ ಕೂಲಿ ಕಾರ್ಮಿಕರಲ್ಲಿ ಬಹುತೇಕರು ಬಾಗೇಪಲ್ಲಿ ತಾಲೂಕಿಗೆ ಸೇರಿದವರಾಗಿದ್ದು, ಈ ಪೈಕಿ ಸದ್ದುಪಲ್ಲಿ ತಾಂಡಾಗಳಿಗೆ ಸೇರಿದ ಒಟ್ಟು 13 ಮಂದಿಯಲ್ಲಿ ಸೋಂಕು ಇರುವುದು ದೃಢ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸರ್ವೇಕ್ಷಣಾಧಿಕಾರಿ ಡಾ.ಬಾಬುರೆಡ್ಡಿ “ಉದಯವಾಣಿ’ಗೆ ತಿಳಿಸಿದರು.
ಹೊರ ರಾಜ್ಯಗಳಿಂದ ಜಿಲ್ಲೆಗೆ ವಲಸೆ ಕಾರ್ಮಿಕರು ಆಗಮಿ ಸುತ್ತಿರುವುದರಿಂದ ಕೋವಿಡ್ 19 ಸೋಂಕು ಹೆಚ್ಚಾಗಿದೆಯೆ ಹೊರತು ಜಿಲ್ಲೆಯ ನಾಗರಿಕರಲ್ಲಿ ಕೋವಿಡ್ 19 ಸೋಂಕು ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಬರೀ 5 ಕೋವಿಡ್-19 ಸಕ್ರಿಯ ಪ್ರಕರಣಗಳು ಬಿಟ್ಟರೆ ಉಳಿದೆಲ್ಲಾ ಹೊರ ರಾಜ್ಯಗಳಿಂದ ಬಂದ ವಲಸಿಗರಲ್ಲಿ ಕಾಣಿಸಿಕೊಂಡ ಪ್ರಕರಣಗಳು.
-ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.