ರಾಜ್ಯದಲ್ಲಿ ಕೋವಿಡ್ ನಿಯಂತ್ರಣ: ಸುಧಾಕರ್
Team Udayavani, Apr 29, 2020, 7:25 AM IST
ಚಿಕ್ಕಬಳ್ಳಾಪುರ: ಇಡೀ ದೇಶಕ್ಕೆ ಹೋಲಿಸಿದರೆ ಮಹಾಮಾರಿ ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ಜಿಲ್ಲಾ ಕೇಂದ್ರದಎಂಜಿ ರಸ್ತೆಯಲ್ಲಿರುವ ಮರಳು ಸಿದ್ದೇಶ್ವರ ದೇವಾಲಯದ ಸಮೀಪ ನೂತನವಾಗಿ ಸರಬರಾಜು ಆಗಿರುವ ಸಂಚಾರ ಗಂಟಲು ದ್ರವ ಪರೀಕ್ಷಾ ಘಟಕಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿ ಮನೆಗೆ
ತೆರಳಿದ್ದಾರೆ. 20 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಇನ್ನೂ 300 ಪ್ರಕರಣಗಳು ಆಕ್ಟೀವ್ ಕೇಸ್ಗಳು ಇವೆ. ಮುಖ್ಯವಾಗಿ ಕೊರೊನಾ ತಡೆಗೆ ನಾಗರಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ತುರ್ತು ಸೇವೆಗಳಿಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ವಿಶೇಷವಾಗಿ ಕೃಷಿ ಚುಟವಟಿಕೆಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!