ಲಾಕ್ಡೌನ್ ಅಂತ್ಯಕ್ಕೆ ಕೋವಿಡ್ ನಿಯಂತ್ರಿಸಿ: ಡೀಸಿ
Team Udayavani, Jun 9, 2021, 11:39 AM IST
ಚಿಕ್ಕಬಳ್ಳಾಪುರ: ಜೂ.14ರವರೆಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ಅವಧಿಯನ್ನು ಹಾಗೂ ಜಿಲ್ಲೆಯಲ್ಲಿ ಜಾರಿಗೆ ತಂದಿರುವ ಹೆಚ್ಚುವರಿ ನಿಬಂಧನೆಗಳ ಲಾಕ್ಡೌನ್ ಅನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಸಂಪೂರ್ಣವಾಗಿ ಕೊರೊನಾ ನಿಯಂತ್ರಣಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ, ತಾಪಂ ಅಧಿಕಾರಿಗಳು, ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಮಂಗಳವಾರ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳೊಂದಿಗೆ ಕೋವಿಡ್ ನಿಯಂತ್ರಣ ಕುರಿತು ಟಾಸ್ಕ್ಫೋರ್ಸ್ ಸಮಿತಿ ಕಾರ್ಯ ವೈಖರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಸ್ಥಿತಿಗತಿ ವಿಚಾರಿಸಿ:ಪಿಡಿಒಗಳು ತಮ್ಮ ಕಾರ್ಯ ಸ್ಥಾನದಲ್ಲಿ ವಾಸವಿದ್ದು, ಟಾಸ್ಕ್ಫೋರ್ಸ್ ಸಮಿತಿಗಳನ್ನು ಹೆಚ್ಚು ಸಕ್ರಿಯಗೊಳಿಸಿ ಪ್ರತಿ ದಿನ ಮನೆಗಳನ್ನು ಭೇಟಿ ಮಾಡಿ ಜನರ ಆರೋಗ್ಯದ ಸ್ಥಿತಿಗತಿ ವಿಚಾರಿಸಬೇಕೆಂದರು. ಹೊಸದಾಗಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ: ತಮ್ಮ ಗ್ರಾಪಂ ಅನ್ನು ಮೊದಲು ಕೊರೊನಾ ಮುಕ್ತ ಮಾಡಬೇಕು ಎನ್ನುವ ಆರೋಗ್ಯಕರ ಸ್ಪರ್ಧೆ ರೀತಿಯಲ್ಲಿ ಪಿಡಿಒಗಳು ಕೆಲಸ ಮಾಡಬೇಕು. ಒಂದಂಕಿ ಕೋವಿಡ್ ಸಕ್ರಿಯ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಮತ್ತೆ ಹೊಸ ಸೋಂಕು ಹರಡದಂತೆ ಎಚ್ಚರ ವಹಿಸಬೇಕೆಂದರು. ಒಂದೇ ತಾಲೂಕಿನಲ್ಲಿ 3 ಗ್ರಾಪಂಗಳನ್ನು ಮೊದಲು ಕೊರೊನಾ ಮುಕ್ತ ಮಾಡಿದವರಿಗೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಗುತ್ತದೆ ಎಂದರು.
ಕೋವಿಡ್ ಮುಕ್ತ ಕಡದಮರಿ ಗ್ರಾಪಂ: ಚಿಂತಾಮಣಿ ತಾಲೂಕಿನ ಕಡದಮರಿ ಗ್ರಾಪಂನಲ್ಲಿ ಸಕ್ರಿಯ ಪ್ರಕರಣ ಶೂನ್ಯಕ್ಕೆ ತಂದು ಅಲ್ಲಿನ ಟಾಸ್ಕ್ಫೋರ್ಸ್ ಸಮಿತಿ ಹಾಗೂಪಿಡಿಒ ನಾಗರಾಜ್ಗೌಡ ಅವರು ಪ್ರತಿದಿನ ಪ್ರತಿ ಮನೆ ಭೇಟಿ ಮಾಡಿ 4 ದಿನಗಳಿಂದ ಸೋಂಕು ದಾಖಲಾಗದಂತೆ ಎಚ್ಚರ ವಹಿಸಿ ಗ್ರಾಪಂ ಅನ್ನು ಕೊರೊನಾ ಮುಕ್ತವನ್ನಾಗಿ ಮಾಡಿದ್ದಕ್ಕಾಗಿ ಗ್ರಾಮಾಡಳಿತವನ್ನು ಅಭಿನಂದಿಸಿದರು.
ಮಾಹಿತಿ ನೀಡದ ಕ್ಲಿನಿಕ್ ಮುಚ್ಚಿಸಿ: ಕೆಮ್ಮು, ಜ್ವರ ನೆಗಡಿಯಂತಹ ಸಾಮಾನ್ಯ ರೋಗಗಳಿಗೆ ಚಿಕಿತ್ಸೆಪಡೆಯಲು ಕ್ಲಿನಿಕ್ಗೆ ಬರುವ ಜನರ ಬಗ್ಗೆ ಆ ಕ್ಲಿನಿಕ್ಗಳ ಮುಖ್ಯಸ್ಥರು ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಅಥವಾ ತಾಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ಪ್ರತಿ ದಿನ ಮಾಹಿತಿ ನೀಡಬೇಕು. ಸಹಕರಿಸದ ಕ್ಲಿನಿಕ್ಗಳ ಪರವಾನಗಿ ರದ್ದುಪಡಿಸಿ ಎಂದು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ಪಿ. ಶಿವಶಂಕರ್, ಡಿಎಚ್ಒ ಡಾ. ಇಂದಿರಾ ಆರ್.ಕಬಾಡೆ, ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!