ಪಡಿತರದಾರರಿಗೆ ಲಸಿಕೆ ಅರಿವು ಮೂಡಿಸಿ
Team Udayavani, Apr 11, 2021, 4:47 PM IST
ಗೌರಿಬಿದನೂರು: ತಾಲೂಕಿನ 45 ವರ್ಷ ಮೇಲ್ಪಟ್ಟ ಪಡಿತರ ಚೀಟಿದಾರರು ತಮ್ಮ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಈ ಮೂಲಕ ಕೋವಿಡ್ ಸೋಂಕಿನ ಕಡಿವಾಣಕ್ಕೆ ಕೈಜೋಡಿಸಬೇಕು ಎಂದು ಶಾಸಕ ಎನ್. ಎಚ್.ಶಿವಶಂಕರ ರೆಡ್ಡಿ ಮನವಿ ಮಾಡಿದರು.
ನಗರದ ಹೊರ ವಲಯದ ಮಿನಿ ವಿಧಾನ ಸೌಧದಲ್ಲಿ ತಾಲೂಕು ಕಚೇರಿಸಭಾಂಗಣದಲ್ಲಿ ನಡೆದ ನ್ಯಾಯ ಬೆಲೆ ಅಂಗಡಿ ಕಾರ್ಯದರ್ಶಿಗಳು ಮತ್ತುಮಾಲೀಕರ ಸಭೆಯಲ್ಲಿ ಮಾತನಾಡಿ,ತಾಲೂಕಿನಲ್ಲಿ ಒಟ್ಟು 111 ನ್ಯಾಯಬೆಲೆಅಂಗಡಿಗಳಿದ್ದು, ಅದರಲ್ಲಿ ಸುಮಾರು 45ವರ್ಷ ಮೇಲ್ಟಟ್ಟ ಪಡಿತರ ಚೀಟಿ ದಾರರಿದ್ದಾರೆ. ಅವರಲ್ಲಿ ಕೋವಿಡ್ ಲಸಿಕೆ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.
ವೃದ್ಧರಿಗೆ ಉಚಿತ ವಾಹನ: ಇದೀಗ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡಿದ್ದು, ಸರ್ಕಾರದ ಸೂಚನೆ ನೀಡಿರುವ ಕೊರೊನಾ ಮಾರ್ಗಸೂಚಿ ಬಗ್ಗೆತಿಳಿಯಬೇಕು. ಗ್ರಾಮಾಂತರ ಪ್ರದೇಶ ದಲ್ಲಿರುವ ವೃದ್ದರಿಗೆ ಉಚಿತವಾಗಿ ವಾಹನಸೌಲಭ್ಯವನ್ನು ಆರೋಗ್ಯ ಇಲಾಖೆನೀಡಿದೆ. ಇದರ ಜವಾಬ್ದಾರಿಯನ್ನು ಆಶಾ ಕಾರ್ಯಕರ್ತರು ವಹಿ ಸಿದ್ದು, ಅವರುನಿಮ್ಮ ಸಹಾಯಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
ಲಸಿಕೆ ಹಾಕಿಸಿಕೊಳ್ಳಲು ಸೂಚಿಸಿ: ತಹಶೀಲ್ದಾರ್ ಎಚ್.ಶ್ರೀನಿವಾಸ್ ಮಾತನಾಡಿ, ಬಹುತೇಕ ಪಡಿತರ ಚೀಟಿದಾರರ ತಪ್ಪದೇ ನಿಮ್ಮಲ್ಲಿ ಬರಲಿದ್ದು, ಅವರಿಗೆ ಕೋವಿಡ್ ಬಗ್ಗೆ ಅರಿವು ಮೂಡಿಸಿ, ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡ ಬೇಕು. ಅರೋಗ್ಯ ಕೇಂದ್ರದಲ್ಲಿ ಸಿಗಲಿರುವ ಉಚಿತ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರಕಾಪಾಡಿಕೊಳ್ಳಲು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಆಹಾರ ಶಿರಸ್ತೇದಾರ ಎ.ಸುಧಾಕರ್ರೆಡ್ಡಿ, ಆಹಾರ ನಿರೀಕ್ಷಕ ಶಶಿಕಲಾ, ನ್ಯಾಯಬೆಲೆ ಅಂಗಡಿ ಮಾಲೀಕ ಮಾ.ಕ.ರಾಮಚಂದ್ರ ಜೀಲಾಕುಂಟೆ ಗಂಗಪ್ಪ, ವಿಜಯ್, ಜಾಲೇಂದ್ರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ